ಮಂಗಳೂರಿನಲ್ಲಿ ಏಕಾಏಕಿ ಪ್ರಕ್ಷುಬ್ಧಗೊಂಡ ಕಡಲು: ತಿತ್ಲಿ ಪ್ರಭಾವ?
Recommended Video
ಮಂಗಳೂರು, ಅಕ್ಟೋಬರ್. 10: ಏಕಾಏಕಿ ಕಡಲು ಪ್ರಕ್ಷುಬ್ದಗೊಂಡು ಸಮುದ್ರದ ಅಲೆಗಳು ಜನವಸತಿ ಪ್ರದೇಶಕ್ಕೆ ನುಗ್ಗಿದ ಘಟನೆ ಮಂಗಳೂರಿನಲ್ಲಿ ಇಂದು ಬುಧವಾರ(ಅ.10) ನಡೆದಿದೆ. ನಗರ ಹೊರವಲಯದ ಸೋಮೇಶ್ವರ, ಉಳ್ಳಾಲ, ಉಚ್ಚಿಲ ಪ್ರದೇಶಗಳಲ್ಲಿ ಈ ಘಟನೆ ಸಂಭವಿಸಿದೆ.
ಸಮುದ್ರದ ನೀರು ತೀರದ ಜನವಸತಿ ಪ್ರದೇಶಕ್ಕೆ ನುಗ್ಗಿದ ಪರಿಣಾಮ ಜನರು ಭಯ ಬೀತರಾದರು. ಬಂಗಾಳ ಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮ ಆಂಧ್ರ ಮತ್ತು ಒಡಿಶಾದಲ್ಲಿ ಕಾಣಿಸಿಕೊಂಡ ತಿತ್ಲಿ ಚಂಡಮಾರುತದ ಪ್ರಭಾವದಿಂದ ಹೀಗಾಗಿರಬಹುದು ಎಂದು ಹೇಳಲಾಗಿದೆ.
ವಾಯುಭಾರ ಕುಸಿತ: ಆಂಧ್ರ, ಒಡಿಸ್ಸಾಗೆ ಅಪ್ಪಳಿಸಲಿದೆ 'ತಿತ್ಲಿ' ಚಂಡಮಾರುತ
ತಿತ್ಲಿ ಚಂಡಮಾರುತದ ಪರಿಣಾಮ ಪಶ್ಚಿಮ ಕರಾವಳಿಯ ಮೇಲೂ ಆಗುವ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿರಲಿಲ್ಲ. ಇಂದು ಮಂಜಾನೆನಿಂದಲೇ ಮಂಗಳೂರು ಹೊರವಲಯದ ಪಣಂಬೂರು, ಉಳ್ಳಾಲ, ಸೋಮೇಶ್ವರ-ಉಚ್ಚಿಲದ ಹಲವು ಕಡೆ ಸಮುದ್ರದ ರೌದ್ರವತಾರ ತಾಳಿದ್ದು ಕಂಡುಬಂತು. ಮುಂದೆ ಓದಿ..
ಭಾರೀ ಗಾತ್ರದ ಅಲೆಗಳು
ಈ ಹಿಂದೆ ಎಂದೂ ಕೂಡ ಇಂತಹ ವಾತಾವರಣ ಕಡಲ ತೀರದಲ್ಲಿ ಕಂಡು ಬಂದಿಲ್ಲ ಎಂಬುದು ಸ್ಥಳೀಯರ ಅಭಿಪ್ರಾಯ. ಕರಾವಳಿಯಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದೆ. ಆದರೂ ಕೂಡ ಮುಂಜಾನೆ ಇಂದ ಸಮುದ್ರದಲ್ಲಿ ಭಾರೀ ಗಾತ್ರದ ಅಲೆಗಳು ತಡಿಗೆ ಅಪ್ಪಳಿಸಿವೆ.
ಮೀನುಗಾರರು ಸಮುದ್ರಕ್ಕೆ ತೆರಳದಂತೆ ಸೂಚನೆ
ಈ ನಡುವೆ ಕರಾವಳಿಯಲ್ಲಿ ಭಾರಿ ಮಳೆಯಾಗುವ ಸಂಭವವೂ ಇದೆ ಎನ್ನಲಾಗಿದೆ. ಅಕ್ಟೋಬರ್ 13ರವರೆಗೆ ಮೀನುಗಾರರು ಸಮುದ್ರಕ್ಕೆ ತೆರಳದಂತೆ ಸೂಚನೆ ನೀಡಲಾಗಿದೆ.
ಮಂಗಳೂರಿನಲ್ಲಿ ಚಂಡಮಾರುತದ ಭೀತಿ: ಲಂಗರು ಹಾಕಿದ ಸಾವಿರಾರು ಬೋಟ್ಗಳು
'ತಿತ್ಲಿ' ಎಂದು ಹೆಸರು
ಬಂಗಾಳ ಕೊಲ್ಲಿಯಲ್ಲಿ ತೀವ್ರ ವಾಯುಭಾರ ಕುಸಿತ ಉಂಟಾಗಿದ್ದು, ಆಂಧ್ರ ಪ್ರದೇಶ ಹಾಗೂ ಒಡಿಸ್ಸಾ ರಾಜ್ಯಗಳಿಗೆ ಭಾರಿ ಚಂಡಮಾರುತ ಅಪ್ಪಳಿಸುವ ಭೀತಿ ಎದುರಾಗಿದೆ. ಬಂಗಾಳಕೊಲ್ಲಿಯಲ್ಲಿ ಉಗಮವಾಗಿರುವ ಈ ಚಂಡಮಾರುತಕ್ಕೆ 'ತಿತ್ಲಿ' ಎಂದು ಹೆಸರು ನೀಡಲಾಗಿದೆ.
ಚಂಡಮಾರುತಕ್ಕೆ ಮಹಿಳೆಯರ ಹೆಸರನ್ನಿಡುತ್ತಾರೆ ಏಕೆ?
'ತಿತ್ಲಿ' ಎಂದು ಹೆಸರು
ಬಂಗಾಳ ಕೊಲ್ಲಿಯಲ್ಲಿ ತೀವ್ರ ವಾಯುಭಾರ ಕುಸಿತ ಉಂಟಾಗಿದ್ದು, ಆಂಧ್ರ ಪ್ರದೇಶ ಹಾಗೂ ಒಡಿಸ್ಸಾ ರಾಜ್ಯಗಳಿಗೆ ಭಾರಿ ಚಂಡಮಾರುತ ಅಪ್ಪಳಿಸುವ ಭೀತಿ ಎದುರಾಗಿದೆ. ಬಂಗಾಳಕೊಲ್ಲಿಯಲ್ಲಿ ಉಗಮವಾಗಿರುವ ಈ ಚಂಡಮಾರುತಕ್ಕೆ 'ತಿತ್ಲಿ' ಎಂದು ಹೆಸರು ನೀಡಲಾಗಿದೆ.