ಮಂಗಳೂರು ಸಮುದ್ರದಿಂದ ಬೆಂಗಳೂರಿಗೆ ನೀರು ತರಲು ಹೊರಟ ರಾಜ್ಯ ಸರಕಾರ
ಬೆಂಗಳೂರು, ಆಗಸ್ಟ್ 31: ಬೆಟ್ಟದ ನೆಲ್ಲಿಗೂ ಸಮುದ್ರದ ಉಪ್ಪಿಗೂ ಸಂಬಂಧ ಬೆಸೆಯುವ ಸಿದ್ಧತೆಯಲ್ಲಿದೆ ಕರ್ನಾಟಕ ಸರಕಾರ.
"ಮಂಗಳೂರಿನ ಸಮುದ್ರದಲ್ಲಿ ಬೃಹತ್ ಅಣೆಕಟ್ಟು ಕಟ್ಟಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹರಿದು ಸಮುದ್ರ ಸೇರುವ ನೇತ್ರಾವತಿ ನದಿಯ ನೀರನ್ನು ಬೆಂಗಳೂರು ನಗರಕ್ಕೆ ತರುವುದು. ಈ ಮೂಲಕ ನಗರದ ಕುಡಿಯುವ ನೀರಿಗೆ ಬೇಡಿಕೆಯನ್ನು ನೀಗಿಸುವುದು." ಹೀಗೊಂದು ಯೋಜನಾ ವರದಿಯನ್ನು ಭಾರತೀಯ ವಿಜ್ಞಾನ ಸಂಸ್ಥೆಯ ತಜ್ಞರು ಸರಕಾರದ ಮುಂದಿಟ್ಟಿದ್ದಾರೆ. ಈ ಯೋಜನೆಯ ಸಾಧ್ಯಾಸಾಧ್ಯತೆಯನ್ನು ಇದೀಗ ರಾಜ್ಯ ಸರಕಾರ ಪರಿಶೀಲನೆ ನಡೆಸುತ್ತಿದೆ.

ಐಐಎಸ್ಸಿ ಹಿರಿಯ ಪ್ರಾಧ್ಯಾಪಕ ಪ್ರೊ. ಟಿ. ಜಿ. ಸೀತಾರಾಂ ಈ ಕಾರ್ಯ ಯೋಜನಾ ವರದಿ ನೀಡಿದ್ದಾರೆ. ಈ ಸಂಬಂಧ ಜಲ ಮಂಡಳಿಯ ಹಿರಿಯ ಅಧಿಕಾರಿಗಳ ಜೊತೆ ಬುಧವಾರ ಬೆಂಗಳೂರು ನಗರ ಅಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್ ಸಭೆ ನಡೆಸಿ ಚರ್ಚಿಸಿದ್ದಾರೆ.
ಸಭೆಯ ನಂತರ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, "ರಾಜ್ಯದ ಕರಾವಳಿ ಪ್ರದೇಶದಲ್ಲಿ ವಾರ್ಷಿಕವಾಗಿ ಸುಮಾರು 300 ರಿಂದ 350 ಟಿಎಂಸಿ ನೀರು ವ್ಯರ್ಥವಾಗಿ ಸಮುದ್ರ ಸೇರುತ್ತಿದೆ. ಸಮುದ್ರದ ಒಳಗಿರುವ ಸುಮಾರು 22 ಟಿಎಂಸಿಯಷ್ಟು ನೀರನ್ನು ಬೆಂಗಳೂರು ಮತ್ತು ಮಂಗಳೂರು ನಗರಗಳಿಗೆ ಕುಡಿಯುವ ಸಲುವಾಗಿ ಪಡೆಯುವ ಯೋಜನೆಯ ಬಗ್ಗೆ ಸಮಾಲೋಚನೆ ನಡೆಸಲಾಯಿತು," ಎಂದು ತಿಳಿಸಿದ್ದಾರೆ.
ಅಂದಾಜು 6 ಸಾವಿರ ಕೋಟಿಯ ಯೋಜನೆ ಇದಾಗಿದ್ದು, ಸಮುದ್ರದಲ್ಲಿ ಅಣೆಕಟ್ಟು ಕಟ್ಟಲು 2,500 ಕೋಟಿ ಬೇಕಾಗಬಹುದು ಎಂದು ಪ್ರಾಥಮಿಕ ಅಂದಾಜು ಹಾಕಲಾಗಿದೆ. ಒಟ್ಟು 22 ಟಿಎಂಸಿಯಲ್ಲಿ 20 ಟಿಎಂಸಿ ಬೆಂಗಳೂರಿಗೆ ಹಾಗೂ 2 ಟಿಎಂಸಿ ಮಂಗಳೂರು ನಗರಕ್ಕೆ ಪೂರೈಕೆ ಮಾಡುವ ಆರಂಭಿಕ ಯೋಜನೆ ಹಾಕಿಕೊಳ್ಳಲಾಗಿದೆ.
ಈಗಾಗಲೇ ಮಂಗಳೂರಿನಲ್ಲಿ ಪ್ರೋ ಸೀತಾರಾಂ ನೇತೃತ್ವದ ತಂಡ ಸ್ಥಳೀಯ ಚುನಾಯಿತ ಪ್ರತಿನಿಧಿಗಳಿಗೆ ಯೋಜನೆಯ ಪ್ರಾತ್ಯಕ್ಷತೆ ನೀಡಿದೆ. ಮುಂದಿನ ಸುತ್ತಿನಲ್ಲಿ ಮೀನುಗಾರರ ಸಂಘ ಸಂಸ್ಥೆಗಳು, ಜನಪ್ರತಿನಿಧಿಗಳು, ಪರಿಸರವಾದಿಗಳ ಜತೆ ಸಮಾಲೋಚನೆ ನಡೆಸಿ ನಂತರ ವಿಸ್ತೃತ ಯೋಜನಾ ವರದಿಯನ್ನು ಅಂತಿಮಗೊಳಿಸಿ ಸಚಿವ ಸಂಪುಟದ ಮುಂದೆ ಪ್ರಸ್ತಾವನೆ ಮಂಡಿಸಲಾಗುವುದು ಎಂದು ಜಾರ್ಜ್ ಹೇಳಿದ್ದಾರೆ.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
ಕರ್ನಾಟಕದ ಕರಾವಳಿಯಲ್ಲಿ ಕಾಣದ ಅಗ್ನಿಕುಂಡದ ಮೇಲೆ ಘನತ್ಯಾಜ್ಯ ವಿಲೇವಾರಿಗೆ ವೀರಾವೇಶದ ಜಿದ್ದಾಜಿದ್ದಿ: ರಾಜಾರಾಂ ತಲ್ಲೂರು ಬರಹ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ












Click it and Unblock the Notifications