ಇಂದು ತುಳುನಾಡಿಗೆ ಪತ್ತನಾಜೆ;ಇನ್ನು 3 ತಿಂಗಳು ಶುಭ ಕಾರ್ಯಕ್ಕೆ ಬ್ರೇಕ್
ಪತ್ತನಾಜೆಯಂದು ದೇವಸ್ಥಾನಗಳಲ್ಲಿ ನಡೆಯುವ ವಾರ್ಷಿಕ ಜಾತ್ರೋತ್ಸವ, ವಿಶೇಷ ಪರ್ವಗಳು , ಉತ್ಸವಗಳು ಕೊನೆಗೊಳ್ಳುತ್ತದೆ. ಮುಂದಿನ ಮೂರು ತಿಂಗಳು ಬಿಡುವು; ಈ ಸಂದರ್ಭದಲ್ಲಿ ಯಾವುದೇ ವಿಶೇಷ ಉತ್ಸವಗಳು ಇಲ್ಲಿ ನಡೆಯುವುದಿಲ್ಲ.
ಮಂಗಳೂರು, ಮೇ 24: ಬುಧವಾರ ತುಳುನಾಡಿಗೆ ಪತ್ತನಾಜೆ; ಅಂದರೆ ಬೇಷ (ಮೇಷ) ತಿಂಗಳ ಹತ್ತನೇ ದಿನ. ಅನಾದಿಯಿಂದಲೇ ತುಳುನಾಡಿನ ಜನ ತಮಗೆ ತಾವೇ ವಿಧಿಸಿಕೊಂಡು ಬಂದಿರುವ ಧಾರ್ಮಿಕ, ಸಾಮಾಜಿಕ ಗಡುವೇ ಈ ಪತ್ತನಾಜೆ. ಅಂದಿನಿಂದ ಇಂದಿಗೂ ಆಚರಣೆ, ನಂಬಿಕೆಯ ತಳಹದಿಯಲ್ಲಿ ಈ ಪತ್ತನಾಜೆ ಪದ್ಧತಿಯ ಆಚರಣೆ ಅನುಚಾನವಾಗಿ ನಡೆದು ಬಂದಿದೆ.
ಬಹುತೇಕ ವರ್ಷಗಳಲ್ಲಿ ಮೇ 24ರಂದೇ ಬೇಷ ತಿಂಗಳ ಹತ್ತನೇ ದಿನ ಬರುವುದು ವಾಡಿಕೆ. ಅಪೂರ್ವದಲ್ಲಿ ಕೆಲವೊಮ್ಮೆ ಅದು ಮೇ 25ರಂದು ಬರುವುದುಂಟು. ಈ ಪತ್ತನಾಜೆಯಂದು ದೇವಸ್ಥಾನಗಳಲ್ಲಿ ನಡೆಯುವ ವಾರ್ಷಿಕ ಜಾತ್ರೋತ್ಸವ, ವಿಶೇಷ ಪರ್ವಗಳು , ಉತ್ಸವಗಳು ಕೊನೆಗೊಳ್ಳುತ್ತದೆ. ಮುಂದಿನ ಮೂರು ತಿಂಗಳು ಬಿಡುವು; ಈ ಸಂದರ್ಭದಲ್ಲಿ ಯಾವುದೇ ವಿಶೇಷ ಉತ್ಸವಗಳು ಇಲ್ಲಿನ ದೇವಸ್ಥಾನಗಳಲ್ಲಿ ನಡೆಯುವುದಿಲ್ಲ, ನಿತ್ಯ ಪೂಜೆ, ನಿತ್ಯ ಬಲಿ ಮಾತ್ರ ಮುಂದುವರೆಸಿಕೊಂಡು ಹೋಗಲಾಗುತ್ತದೆ ಅಷ್ಟೆ.[ದೈವಾರಾಧನೆ: ಈ ದೈವ ಮುಟ್ಟಿದರೆ ವರ್ಷದೊಳಗೆ ಸಾವು ಖಚಿತ!]

ಈ ಪತ್ತನಾಜೆ ಪರಿಪಾಠವನ್ನು ತುಳು ಭಾಷಿಕರು ಹಬ್ಬಿಕೊಂಡಿರುವ ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಪಾಲಿಸಲಾಗುತ್ತದೆ.
ವಿಶೇಷವಾಗಿ ದೈವಾರಾಧನೆಯ ಅಂಗಳವಾಗಿರುವ ತುಳುನಾಡಿಲಿನಲ್ಲಿ ಕೋಲ, ನೇಮ, ತಂಬಿಲ, ಅಗೇಲು, ಮುಂತಾದ ದೈವಾಚರಣೆಗಳು, ಗ್ರಾಮ ದೈವಗಳು ಪರ್ವ ಮುಂತಾದವು ಈ ಪತ್ತನಾಜೆಯೊಂದು ಮುಗಿಯಲೇಬೇಕು ಎಂಬುದು ಇಲ್ಲಿನ ನಂಬಿಕೆ. ಪತ್ತನಾಜೆ ಮುಗಿದರೆ ದೈವಗಳು ಘಟ್ಟ ಹತ್ತುತ್ತವೆ ಎಂಬ ನಂಬಿಕೆಯೂ ಇದರ ಒಳಗೆ ಹೆಣೆದು ಕೊಂಡಿದೆ. ಮಳೆಗಾಲದಲ್ಲಿ ಉತ್ಸವ ನಡೆಸಲು ಕಷ್ಟಕರವಾದ ಕಾರಣ ಈ ಗಡುವು ಮತ್ತು ನಂಬಿಕೆ ಹುಟ್ಟಿಕೊಂಡಿರಬಹುದು ಎಂದು ಭಾವಿಸಲಾಗಿದೆ.[ತುಳುನಾಡಿನ ಹೊಸ ವರ್ಷ ಬಿಸು ಪರ್ಬದ ಬಗ್ಗೆ ತಿಳಿಯಿರಿ]

ಬೇಷ ತಿಂಗಳ ಹತ್ತನೇ ದಿನವೇ ಪತ್ತನಾಜೆ. ಅಂದಿನಿಂದ ಮಳೆಗಾಲ ಆರಂಭ ಎಂಬುದು ಅನಾದಿಯಿಂದಲೂ ತುಳುನಾಡಿನ ಹವಾಮಾನ ಅಭ್ಯಾಸ ಮಾಡಿದ ಇಲ್ಲಿನ ಜನ ಮಾಡಿಕೊಂಡ ಪಂಚಾಂಗ.
ಆರು ತಿಂಗಳು ಮಳೆ, ಆರು ತಿಂಗಳು ಬಿಸಿಲು ಎಂಬುದು ತುಳುನಾಡಿನ ಹವಾಮಾನ. ಬಿಸು ಪರ್ಬದ ದಿನ ಹೊಸ ವರ್ಷದ ಬೇಸಾಯಕ್ಕೆ ಮುನ್ನುಡಿ ಬರೆಯುವ ಕ್ರಮ ಹಿಂದೆ ಚಾಲ್ತಿಯಲ್ಲಿತ್ತು. ಬಳಿಕ ಬೇಸಾಯದ ಕೆಲಸದಲ್ಲಿ ರೈತರು ಬಿಡುವಿಲ್ಲದೆ ತೊಡಗಿಕೊಳ್ಳುವ ಕಾರಣ ನಂತರ ಉತ್ಸವಾದಿ ಸಂಭ್ರಮಗಳಲ್ಲಿ ಪಾಲ್ಗೊಳ್ಳಲು ಯಾರಿಗೂ ಪುರುಸೊತ್ತಿಲ್ಲ. ಅದೇ ರೀತಿ ಮಳೆಯ ಮಧ್ಯೆ ಯಾವ ಉತ್ಸವ ನಡೆಸುವುದೂ ಅಸಾಧ್ಯ. ಹೀಗಾಗಿ ಈ ಗಡುವು ನಡೆದುಕೊಂಡು ಬಂದಿದೆ.

ಇತ್ತೀಚಿನ ದಶಕಗಳಲ್ಲಿ ಬೇಸಾಯವೇ ಕಣ್ಮರೆಯಾಗುತ್ತಿರುವ ಕಾರಣ ಪತ್ತನಾಜೆಗೂ ಕೃಷಿಕರಿಗೂ ಸಂಬಂಧ ಇಲ್ಲಎಂಬತಾಗಿದೆ. ಆದರೂ ಧಾರ್ಮಿಕ ನೆಲೆಗಟ್ಟಿನಲ್ಲಿ ಪತ್ತನಾಜೆಯ ಆಚರಣೆ ಉಳಿದುಕೊಂಡಿದೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications