ಧರ್ಮಸ್ಥಳದಲ್ಲಿ ಬಾಹುಬಲಿಯ ಮಹಾಮಸ್ತಕಾಭಿಷೇಕಕ್ಕೆ ವೈಭವದ ತೆರೆ
Recommended Video

ಮಂಗಳೂರು, ಫೆಬ್ರವರಿ 18: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಕಳೆದ ಹತ್ತು ದಿನಗಳಿಂದ ನಡೆಯುತ್ತಿದ್ದ ಭಗವಾನ್ ಬಾಹುಬಲಿ ಮಹಾಮಸ್ತಕಾಭಿಷೇಕ ಸಂಭ್ರಮಕ್ಕೆ ಇಂದು ವೈಭವದ ತೆರೆಬಿದ್ದಿದೆ. ರತ್ನಗಿರಿ ಬೆಟ್ಟದಲ್ಲಿ ವಿರಾಜಮಾನನಾದ ವೈರಾಗ್ಯ ಮೂರ್ತಿ ಬಾಹುಬಲಿಗೆ ಇಂದು ಕೊನೆಯ ಮಸ್ತಕಾಭಿಷೇಕ ನೆರವೇರಿಸಲಾಯಿತು.
ಫೆಬ್ರವರಿ 8 ರಂದು ಧರ್ಮಸ್ಥಳದಲ್ಲಿ ಮಹಾಮಸ್ತಕಾಭಿಷೇಕದ ಕಾರ್ಯಕ್ರಮಗಳು ಆರಂಭಗೊಂಡಿದ್ದು, ಮೂರು ದಿನಗಳ ಕಾಲ ಬಾಹುಬಲಿ ಮೂರ್ತಿಗೆ ಮಹಾಮಜ್ಜನ ನಡೆದಿದೆ. ಮಸ್ತಕಾಭಿಷೇಕದ ಪೂಜಾಫಲವನ್ನು ದೇಶಕ್ಕೆ ಸಮರ್ಪಿಸಲಾಗಿದ್ದು, ಈ ಸಂದರ್ಭದಲ್ಲಿ ಭಾರತೀಯ ಸೈನ್ಯ ದುಷ್ಟ ಶಕ್ತಿಗಳನ್ನು ನಿಗ್ರಹಿಸುವ ಶಕ್ತಿ ಹೊಂದಲಿ ಎನ್ನುವ ಪ್ರಾರ್ಥನೆ ಸಲ್ಲಿಸಲಾಗಿದೆ.
ಕಳೆದ 2 ದಿನಗಳಿಂದ ಹೊಂಬಣ್ಣದಿಂದ ಶೋಭಿಸಿದ್ದ ಭಗವಾನ್ ಬಾಹುಬಲಿಗೆ ಇಂದು ಕೊನೆಯ ಮಸ್ತಕಾಭಿಷೇಕ ನೆರವೇರಿದೆ. ಕಲಶಗಳ ಜಲಾಭಿಷೇಕದ ಒಡನೆಯೇ ಬಿದ್ದ ಕ್ಷೀರಧಾರೆ ಬಾಹುಬಲಿ ಶ್ವೇತಧಾರಿಯಾಗಿ ಕಂಗೊಳಿಸುವಂತೆ ಮಾಡಿತ್ತು.

ಫೆಬ್ರವರಿ 16ರಿಂದ ಇಂದಿನವರೆಗೆ ಬಾಹುಬಲಿ ಮೂರ್ತಿಗೆ ಮಜ್ಜನ ನಡೆದಿದ್ದು, ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗಡೆ ನೇತೃತ್ವದಲ್ಲಿ ಈ ಮಜ್ಜನ ಸಂಪನ್ನಗೊಂಡಿದೆ.
ಆಗ್ರೋದಕ ಮೆರವಣಿಗೆಯ ಮೂಲಕ ಜೈನ ಬಸದಿಯಿಂದ ಬಾಹುಬಲಿ ಬೆಟ್ಟಕ್ಕೆ ಕಲಶವನ್ನು ತರಲಾಗಿದ್ದು, ಬಳಿಕ ಬೆಟ್ಟದಲ್ಲಿ ಕಲಶಗಳಿಗೆ ಧಾರ್ಮಿಕ ವಿಧಿ ವಿಧಾನ ಪೂರೈಸಿದ ಬಳಿಕ ಜೈನ ಭಾಂಧವರು ವಿರಾಟಮೂರ್ತಿಗೆ ಜನ ಕಲಶಾಭಿಷೇಕ ನಡೆಸಿದರು.
ವಿವಿಧ ದ್ರವ್ಯಗಳಾದ ಕಲ್ಕಚೂರ್ಣ, ಅಷ್ಟಗಂಧ, ಕೇಸರಿ, ಅರಸಿನ, ಚಂದನ, ಪುಷ್ಪವೃಷ್ಟಿ ಸೇರಿದಂತೆ ಹಲವು ಅಭಿಷೇಕಗಳನ್ನು ಬಾಹುಬಲಿಗೆ ನೆರವೇರಿಸಲಾಯಿತು. ಬಾಹುಬಲಿಯ ಈ ಮಸ್ತಕಾಭಿಷೇಕದ ಫಲವನ್ನು ದೇಶಕ್ಕೆ ಸಮರ್ಪಿಸಲಾಗಿದ್ದು, ಕಾಶ್ಮೀರದಲ್ಲಿ ನಡೆದ ದುಷ್ಟರ ಉಪಟಳಕ್ಕೆ ಉತ್ತರಿಸುವ ಶಕ್ತಿ ಸೈನಿಕರಿಗೆ ದೊರಕಲೆನ್ನುವ ಪ್ರಾರ್ಥನೆಯನ್ನೂ ಇದೇ ಸಂದರ್ಭದಲ್ಲಿ ಮಾಡಲಾಯಿತು.

ಹನ್ನೆರಡು ವರ್ಷಗಳಿಗೊಮ್ಮೆ ನಡೆಯುವ ಈ ಮಹಾಮಸ್ತಕಾಭಿಷೇಕವನ್ನು ಕಣ್ತುಂಬಿಕೊಂಡ ಸೌಭಾಗ್ಯ ದೊರೆತ ಭಕ್ತರು ಭಾವ ಪರವಶವಾದ ದೃಶ್ಯವೂ ಕಂಡು ಬಂದಿತ್ತು.
ಧರ್ಮಸ್ಥಳದ ವತಿಯಿಂದ ನಡೆಯುವ ಮಸ್ತಕಾಭಿಷೇಕಕ್ಕೆ ತೆರೆ ಬಿದ್ದರೂ, ಮುಂದಿನ ಕೆಲ ದಿನಗಳ ಕಾಲ ಜೈನ ಭಕ್ತಾಧಿಗಳಿಗೆ ಮಸ್ತಕಾಭಿಷೇಕ ನಡೆಸುವ ಅವಕಾಶ ನೀಡಲಾಗಿದೆ. ಹತ್ತು ದಿನಗಳ ಕಾಲ ಧರ್ಮಸ್ಥಳದಲ್ಲಿ ನಡೆದ ಈ ವೈಭವೋಪೇತ ಕಾರ್ಯಕ್ರಮದಲ್ಲಿ ಸಾವಿರಾಪೋದಿಯಲ್ಲಿ ಭಕ್ತರು ಪಾಲ್ಗೊಂಡಿದ್ದರು.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications