ಸುರತ್ಕಲ್ ಟೋಲ್ ಗೇಟ್ ತೆರವಿಗೆ ಆಗ್ರಹಿಸಿ ಅನಿರ್ದಿಷ್ಟ ಧರಣಿ
ಮಂಗಳೂರು, ಅಕ್ಟೋಬರ್ 28: ಮಂಗಳೂರಿನ ಸುರತ್ಕಲ್ ಟೋಲ್ ಗೇಟ್ ವಿವಾದ ಇನ್ನೂ ಮುಗಿದಿಲ್ಲ. ಟೋಲ್ ಗೇಟ್ ತೆರವುಗೊಳಿಸುವವರೆಗೆ ಅನಿರ್ದಿಷ್ಟ ರಾತ್ರಿ ಹಗಲು ಧರಣಿಗೆ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಮುಂದಾಗಿದೆ. ಜಿಲ್ಲಾಡಳಿತದ ಮನವಿಗೂ ಸ್ಪಂದಿಸದೆ ಹೋರಾಟ ಸಮಿತಿ ಸೆಕ್ಷನ್ ನಡುವೆಯೂ ಇಂದಿನಿಂದ ಧರಣಿ ಆರಂಭಿಸಿದೆ.
ಅಕ್ಟೋಬರ್ 18 ರಂದು ಮಂಗಳೂರಿನ ಸುರತ್ಕಲ್ ಟೋಲ್ ಗೇಟ್ ಬಳಿ ಭಾರೀ ಹೈಡ್ರಾಮವೇ ನಡೆದಿತ್ತು. ಸುರತ್ಕಲ್ ಟೋಲ್ ಗೇಟ್ ಅಕ್ರಮ ಎಂದು ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯ ನೇತೃತ್ವದಲ್ಲಿ ನಡೆದ ಹೋರಾಟ ಉಗ್ರ ಸ್ವರೂಪಕ್ಕೆ ಹೋಗಿತ್ತು. ಪೊಲೀಸರು ಹಾಕಿದ್ದ ತಡೆಬೇಲಿಯನ್ನು ಮುರಿದು ಟೋಲ್ ಗೇಟ್ನತ್ತ ನುಗ್ಗಿದ್ದ ಹೋರಾಟಗಾರ ಹೈಡ್ರಾಮ ನಡೆಸಿದ್ದು ಬಳಿಕ ಪೊಲೀಸರು ನೂರಾರು ಹೋರಾಟಗಾರರನ್ನು ಬಂಧಿಸಿ, ಬಿಡುಗಡೆಗೊಳಿಸಿದ್ದರು.
ಇದಾದ ಬಳಿಕ ಟೋಲ್ ಗೇಟ್ ನವೆಂಬರ್ 7 ರೊಳಗಾಗಿ ಸ್ಥಗಿತಗೊಳಿಸುವ ಬಗ್ಗೆ ಜಿಲ್ಲಾಡಳಿತ ಭರವಸೆ ನೀಡಿದೆ. ಆದರೆ ಇಂತಹ ಭರವಸೆಗಳು ಕಳೆದ ಆರು ವರ್ಷದಿಂದ ಅನೇಕ ಆಗಿರುವುದರಿಂದ ಇದರ ಬಗ್ಗೆ ನಂಬಿಕೆ ಇಲ್ಲ ಎಂದಿರುವ ಹೋರಾಟ ಸಮಿತಿ ಇಂದಿನಿಂದ ರಿಂದ ಟೋಲ್ ಗೇಟ್ ಮುಂಭಾಗದಲ್ಲಿ ರಾತ್ರಿ ಹಗಲು ಅನಿರ್ಧಿಷ್ಟ ಧರಣಿ ಆರಂಭಿಸಿದೆ.

ಇಂದು(ಅಕ್ಟೋಬರ್ 28) ಧರಣಿ ಆರಂಭಗೊಂಡಿದ್ದು ಜಿಲ್ಲಾಡಳಿತ, ಸಂಸದರು ಹೇಳಿದಂತೆ ನವೆಂಬರ್ 7ಕ್ಕೆ ಮತ್ತೆ 9 ದಿನಗಳು ಇದೆ. ಈ ದಿನದ ಮೊದಲಾದರೂ ಟೋಲ್ ಗೇಟನ್ನು ಮುಚ್ಚುವ ಕೆಲಸ ಜಿಲ್ಲಾಡಳಿತ ಮಾಡಲಿ. ಇಲ್ಲದೇ ಇದ್ದಲ್ಲಿ ಟೋಲ್ ಗೇಟ್ ಸ್ಥಗಿತಗೊಳ್ಳುವವರೆಗೂ ಅನಿರ್ದಿಷ್ಟ ಧರಣಿಯನ್ನು ಮುಂದುವರೆಸುವುದು ಅನಿವಾರ್ಯವಾಗಿದೆ. ಶಾಂತಿಯುತ ಧರಣಿ ನಡೆಸಲು ಅನುಮತಿ ಪಡೆದಿದ್ದರೂ, ಪೊಲೀಸ್ ಪ್ರಭಾವ ಬಳಸಿ ಟೋಲ್ ಗೇಟ್ನ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ 144 ನಿಷೇಧಾಜ್ಞೆ ಹಾಕಿ ಧರಣಿಯನ್ನು ಹತ್ತಿಕ್ಕುವ ಪ್ರಯತ್ನ ಜಿಲ್ಲಾಡಳಿತ ಮಾಡಿದೆ ಎಂದು ಹೋರಾಟಗಾರರಾದ ಎಂಜಿ ಹೆಗ್ಡೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇಂದಿನಿಂದ ಆರಂಭಗೊಂಡ ಈ ಧರಣಿಯಲ್ಲಿ ಕಾಂಗ್ರೆಸ್ನ ನಾಯಕರು ಸೇರಿದಂತೆ ವಿವಿಧ ಪಕ್ಷ, ಸಂಘಟನೆಯ ನಾಯಕರು ಹಾಗೂ ಕಾರ್ಯಕರ್ತರು ಭಾಗಿಯಾಗಿದ್ದಾರೆ. ಒಟ್ಟಿನಲ್ಲಿ ಟೋಲ್ ಗೇಟ್ ವಿಚಾರದಲ್ಲಿ ಈ ಬಾರಿ ಹೋರಾಟ ಸಮಿತಿ ಕೊನೆಯ ಅಸ್ತ್ರವಾಗಿ ಧರಣಿಗೆ ಮುಂದಾಗಿದಂತಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications