ಪಣಂಬೂರು ಬೀಚ್ನಲ್ಲಿ ಜನವೋ ಜನ: ವರ್ಷಾಂತ್ಯಕ್ಕೆ ಕಳೆಗಟ್ಟುತ್ತಿದೆ ಕಡಲ ಕಿನಾರೆ
ಮಂಗಳೂರು, ಡಿಸೆಂಬರ್ 28: ಇನ್ನೇನು ಮೂರು ದಿನಗಳು ಕಳೆದರೆ ನಾವೆಲ್ಲಾ ಹೊಸ ವರ್ಷವನ್ನು ಸ್ವಾಗತಿಸುತ್ತೇವೆ. ಆದರೆ ಈ ವರ್ಷಾಂತ್ಯಕ್ಕೆ ನಗರದ ಪಣಂಬೂರು ಕಡಲ ಕಿನಾರೆ ಪ್ರವಾಸಿಗರಿಂದ ಗಿಜಿಗುಡುತ್ತಿದೆ. ಎಲ್ಲಿ ನೋಡಿದರೋ ಜನವೋ ಜನ. ಎಷ್ಟು ದೂರಕ್ಕೆ ಕಣ್ಣು ಹಾಯಿಸಿದರೂ ಸಮುದ್ರ ವಿಹಾರಿಗಳು ಅಲೆಗಳಲ್ಲಿ ಆಟವಾಡುತ್ತಿರುವ, ನೀರಿನಲ್ಲಿ ಮುಳುಗೇಳುತ್ತಿರುವ, ಸಂತಸದಿಂದ ಕುಣಿದು ಕುಪ್ಪಳಿಸುತ್ತಿರುವ ದೃಶ್ಯ ಕಂಡು ಬರುತ್ತಿದೆ.
ಹೊಸ ಆಕರ್ಷಣೆಯಾಗಿ ಪಣಂಬೂರು ಕಡಲ ಕಿನಾರೆಗೆ ಫ್ಲೋಟಿಂಗ್ ಬ್ರಿಡ್ಜ್, ಬೋಟಿಂಗ್, ಪ್ಯಾರಚೂಟ್, ಸ್ಪೀಡ್ ಬೋಟ್ಗಳು ಬಂದಿದೆ. ಪ್ರವಾಸಿಗರು ವರ್ಷಾಂತ್ಯಕ್ಕೆ ಬೀಚ್ಗೆ ಆಗಮಿಸಿ ಈ ಎಲ್ಲದರ ಮೂಲಕ ಕಡಲ ಸೌಂದರ್ಯವನ್ನು ಆಸ್ವಾದಿಸುತ್ತಿದ್ದಾರೆ. ಅಲ್ಲದೇ ಒಂಟೆಗಳ, ಕುದುರೆಗಳ ಬೆನ್ನೇರಿ ಕಡಲ ತೀರದುದ್ದಕ್ಕೂ ಸವಾರಿ ಮಾಡುವ, ಮಕ್ಕಳು ಗಾಳಿಪಟಗಳನ್ನು ಹಾರಿಸುತ್ತಿರುವ, ಜಾರುಬಂಡಿಯಲ್ಲಿ ಜಾರುತ್ತಾ, ಮೇಲಕ್ಕೆ ಕೆಳಗೆ ಹಗ್ಗದಲ್ಲಿ ಜೀಕಾಡುತ್ತಾ, ಸ್ಪೋಟ್ಸ್ ಕಾರು ಸವಾರಿ ಮಾಡುತ್ತಾ ಮಜಾ ಮಾಡುತ್ತಿರುವ ದೃಶ್ಯ ಕಡಲ ಕಿನಾರೆಯಲ್ಲಿ ಕಂಡು ಬಂದಿದೆ.

ಪ್ರವಾಸಿಗರು ಸೂರ್ಯಾಸ್ತದ ಸೌಂದರ್ಯವನ್ನು ಆಸ್ವಾದಿಸುತ್ತಾ ಸೆಲ್ಫಿಗಳಲ್ಲಿ ಸೆರೆಹಿಡಿಯುತ್ತಾ ಮೈಮರೆಯುತ್ತಿದ್ದರು. ಒಟ್ಟಿನಲ್ಲಿ ವರ್ಷಾಂತ್ಯಕ್ಕೆ ಕಡಲ ಕಿನಾರೆ ಪ್ರವಾಸಿಗರಿಂದ ಕಿಕ್ಕಿರಿದು ತುಂಬಿದೆ. ಇನ್ನು ಮಂಗಳೂರು ಪ್ರವಾಸೋದ್ಯಮದ ಮುಕುಟಕ್ಕೆ ಮತ್ತೊಂದು ಗರಿ ಮೂಡಿದೆ. ಮಂಗಳೂರಿನ ಪಣಂಬೂರು ಬೀಚ್ನಲ್ಲಿ ಪ್ಲೋಟಿಂಗ್ ಬ್ರಿಡ್ಜ್ ಆರಂಭವಾಗಿದ್ದು, ಪ್ರವಾಸಿಗರು ಮಸ್ತ್ ಎಂಜಾಯ್ ಮಾಡ್ತಿದ್ದಾರೆ. ತೇಲುವ ಸೇತುವೆಯಲ್ಲಿ ನಲಿದಾಡುತ್ತಿದ್ದಾರೆ.
ಸಮುದ್ರದ ಮೇಲೆ ತೇಲುವ ಸೇತುವೆ ತೇಲುವ ಸೇತುವೆ ಮೇಲೆ ಬ್ಯಾಲೆನ್ಸ್ ಮಾಡುತ್ತಾ ಎಂಜಾಯ್ ಮಾಡುತ್ತಿರುವ ಪ್ರವಾಸಿಗರು, ಇದು ಮಂಗಳೂರು ಪಣಂಬೂರು ಬೀಚ್ನಲ್ಲಿ ಕಂಡುಬಂದ ದೃಶ್ಯವಾಗಿದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಇರುವ ಪ್ಲೋಟಿಂಗ್ ಬ್ರಿಡ್ಜ್ ಮಂಗಳೂರು ಬೀಚ್ನಲ್ಲಿ ಇರಲಿಲ್ಲ. ಹೀಗಾಗಿ ಪ್ಲೋಟಿಂಗ್ ಬ್ರಿಡ್ಜ್ ಕೊರತೆ ನೀಗಿಸಲು ಮಂಗಳೂರಿನ ಪಣಂಬೂರು ಬೀಚ್ನಲ್ಲಿ ತೇಲುವ ಸೇತುವೆ ಆರಂಭಿಸಲಾಗಿದೆ. ಸದ್ಯ ಪ್ಲೋಟಿಂಗ್ ಬ್ರೀಡ್ಜ್ನ ಪ್ರವಾಸಿಗರಿಗೆ ಮುಕ್ತವಾಗಿದ್ದು ಪ್ರವಾಸಿಗರು ತೇಲುವ ಸೇತುವೆಯಲ್ಲಿ ಮಸ್ತ್ ಎಂಜಾಯ್ ಮಾಡುತ್ತಿದ್ದಾರೆ.

ತೇಲುವ ಸೇತುವೆ 125 ಮೀಟರ್ ಉದ್ದವಿದ್ದು, ಅಲೆಗಳ ಅಬ್ಬರಕ್ಕೆ ಉಬ್ಬುತ್ತಾ ತಗ್ಗುತ್ತಾ ನಲಿದಾಡುವ ಸೇತುವೇ ಮೇಲೆ ಪ್ರವಾಸಿಗರು ಬ್ಯಾಲೆನ್ಸ್ ಮಾಡುತ್ತಾ ಕುಣಿದಾಡುತ್ತಾ ಖುಷಿ ಪಡುತ್ತಿದ್ದಾರೆ. ಫೋಟೋ ಸೆಲ್ಪಿ ಕ್ಲಿಕಿಸುತ್ತಾ, ಸಮುದ್ರ ಮೇಲೆ ನಡೆಯುತ್ತಿದ್ದೇವೆ ಅಂತ ಮನದೊಳಗೆ ಹಿಗ್ಗುತ್ತಾ ಎಂಜಾಯ್ ಮಾಡ್ತಿದ್ದಾರೆ.. ಇದಲ್ಲದೆ, ಜೆಟ್ ಸ್ಕೀ, ಪ್ಯಾರಾ ಸೈಲಿಂಗ್, ಬೋಟಿಂಗ್ ಮುಂತಾದ ಸಾಹಸ ಕ್ರೀಡೆಗಳು ಬೀಚ್ನಲ್ಲಿವೆ.

ಒಟ್ಟಿನಲ್ಲಿ, ಪಣಂಬೂರಿನಲ್ಲಿ ಆರಂಭವಾದ ತೇಲುವ ಸೇತುವೆ ಪ್ರವಾಸಿಗರಿಗೆ ವಿಶೇಷ ಅನುಭವ ನೀಡುತ್ತಿದ್ದು, ವರ್ಷಾಂತ್ಯ ಹಿನ್ನೆಲೆ ಸಾವಿರಾರು ಪ್ರವಾಸಿಗರು ಬೀಚ್ಗೆ ಬಂದು ತೇಲುವೆ ಸೇತುವೆ ಮೇಲೆ ಎಂಜಾಯ್ ಮಾಡುತ್ತಿದ್ದಾರೆ.
-
Dog Satish: ಇನ್ಸ್ಟಾಗ್ರಾಂ ಯಾರ ಅಪ್ಪಂದೂ ಅಲ್ಲ, ವಿಡಿಯೋ ಡಿಲೀಟ್ ಮಾಡಲ್ಲ, ನನಗೆ ಮೀಟರ್ ಇದೆ: ಡಾಗ್ ಸತೀಶ್ -
Vrial News: ಕೆಲಸದಿಂದ ತೆಗೆದ ಬಳಿಕ ಪುಕ್ಕಟೆ ಸಹಾಯ ಕೇಳಿದ ಮಾಜಿ ಬಾಸ್: ನೌಕರ ಕೊಟ್ಟ ಉತ್ತರ ವೈರಲ್ -
Toxic: ಅವಸರಕ್ಕಿಂತ ತಾಳ್ಮೆ ಮುಖ್ಯ: ಟಾಕ್ಸಿಕ್ ಬಿಡುಗಡೆ ಮುಂದೂಡಿದ ಬೆನ್ನಲ್ಲೇ ಯಶ್ ಬೆಂಬಲಕ್ಕೆ ನಿಂತ ಅಭಿಮಾನಿಗಳು -
Gold Rate: ಚಿನ್ನ, ಬೆಳ್ಳಿ ದರದಲ್ಲಿ ಏರಿಳಿತ; ಬೆಂಗಳೂರಿನಲ್ಲಿ ಇಂದು ಚಿನ್ನದ ಬೆಲೆ ಎಷ್ಟಿದೆ? -
Sourav Ganguly: ಟಿ20 ವಿಶ್ವಕಪ್ 2026; ಸಂಜು ಆಟಕ್ಕೆ ಮನಸೋತು ಬಿಸಿಸಿಐಗೆ ಬಿಸಿ ಮುಟ್ಟಿಸಿದ 'ದಾದಾ' ಸೌರವ್ ಗಂಗೂಲಿ -
Today Horoscope Mar 3: ಹುಣ್ಣಿಮೆಯ ದಿನ ಚಂದ್ರಗ್ರಹಣ, ಈ ರಾಶಿಯವರ ಆರೋಗ್ಯದಲ್ಲಿ ಏರುಪೇರು -
ಬೆಂಗಳೂರು ಆಡಳಿತ ಬಿಬಿಎಂಪಿಯಿಂದ ಜಿಬಿಎಗೆ: 5 ಪಾಲಿಕೆಗಳ ರಚನೆ, ಹೊಸ ಪ್ರದೇಶಗಳ ಸೇರ್ಪಡೆಯಿಂದ ರಿಯಲ್ ಎಸ್ಟೇಟ್ಗೆ ಬಂಪರ್ -
Property: ಖಾತಾ ಎಂದರೇನು, ಇ, ಬಿ - ಎ ಖಾತಾಗಳ ವ್ಯತ್ಯಾಸ, ಆಸ್ತಿದಾರರಿಗೆ ಹೇಗೆ ಲಾಭ ಇಲ್ಲಿದೆ ಸಂಪೂರ್ಣ ವಿವರ -
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಮದುವೆ ಸಂಭ್ರಮ: 'ಸಂಗೀತ' ರಾತ್ರಿಯ ನೆನಪುಗಳನ್ನು ಹಂಚಿಕೊಂಡ ನಟಿ -
National Highway: ರಾಷ್ಟ್ರೀಯ ಹೆದ್ದಾರಿ-373 ಕಾಮಗಾರಿ ಎಲ್ಲಿಗೆ ಬಂತು? -
Horoscope March 4: ಈ ರಾಶಿಯವರಿಗೆ ವೃತ್ತಿಯಲ್ಲಿ ಸುಧಾರಣೆ, ಆರೋಗ್ಯ ಕಾಳಜಿ ಮುಖ್ಯ, ದಿನ ಭವಿಷ್ಯ ಇಲ್ಲಿದೆ -
Toxic release postponed: ಯಶ್ ಅಭಿಮಾನಿಗಳಿಗೆ ಆಘಾತ: "ಟಾಕ್ಸಿಕ್" ಸಿನಿಮಾ ಬಿಡುಗಡೆ ದಿಢೀರ್ ಮುಂದೂಡಿಕೆ












Click it and Unblock the Notifications