Accident News: ಆಟೋ-ಕಾರು ನಡುವೆ ಭೀಕರ ಅಪಘಾತ: ಪುಟ್ಟ ಮಗು ಸಾವು
Accident News: ಇತ್ತೀಚಿನ ದಿನಗಳಲ್ಲಿ ಅಪಘಾತಗಳು ಪ್ರಕರಣಗಳು ಹೆಚ್ಚಾಗುತ್ತಲಿವೆ. ಇದೀಗ ಆಟೋ-ಕಾರು ನಡುವೆ ಭೀಕರ ಅಪಘಾತ ನಡೆದಿದ್ದು, ಈ ವೇಳೆ ಪುಟ್ಟ ಮಗು ಸಾವನ್ನಪ್ಪಿರುವ ಘಟನೆ ಪುತ್ತೂರು ತಲ್ಲೂಕಿನಲ್ಲಿ ನಡೆದಿದೆ.
ಆಟೋಗೆ ಕಾರು ಡಿಕ್ಕಿಯಾದ ಪರಿಣಾಮ ನಾಲ್ಕೂವರೆ ವರ್ಷದ ಮಗು ದಾರುಣವಾಗಿ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ಪರ್ಪುಂಜ ಕೊಯಿಲತ್ತಡ್ಕದಲ್ಲಿ ನಡೆದಿದೆ. ಘಟನೆಯಲ್ಲಿ ಆಟೋ ಚಾಲಕ ಸೇರಿ ಐವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬಸ್ ಓವರ್ ಟೇಕ್ ಮಾಡಲು ಹೋಗಿ ಆಟೋಗೆ ಕಾರು ಡಿಕ್ಕಿ ಹೊಡೆದಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಸುಳ್ಯ ಕಡೆಯಿಂದ ಪುತ್ತೂರಿನತ್ತ ಬರುತ್ತಿದ್ದ ಕಾರು ಚಾಲಕ ಬಸ್ನ ಓವರ್ಟೇಕ್ ಮಾಡಲು ಯತ್ನಿಸಿದ್ದಾನೆ. ಈ ವೇಳೆ ನಿಯಂತ್ರಣ ತಪ್ಪಿ ಕಾರು ಪುತ್ತೂರಿನಿಂದ ತಿಂಗಳಾಡಿ ಕಡೆಗೆ ತೆರಳುತ್ತಿದ್ದ ಆಟೋಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಆಟೋ ಚಾಲಕ ಹನೀಫ್ ಬನ್ನೂರು ಅವರ ಮಗಳು ಶಜ್ವಾ ಫಾತಿಮಾ ಮೃತಪಟ್ಟಿದ್ದಾಳೆ.
ಘಟನೆಯಲ್ಲಿ ಹನೀಫ್, ಪತ್ನಿ, ಇಬ್ಬರು ಮಕ್ಕಳು ಮತ್ತು ಅತ್ತೆಗೆ ಗಾಯ ಆಗಿದ್ದು, ಈ ಪೈಕಿ ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ರವಾನೆ ಮಾಡಲಾಗಿದೆ. ಈ ಸಂಬಂಧ ಪುತ್ತೂರು ಗ್ರಾಮಾಂತರ ಪೊಲೀರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಓರ್ವ ಸಾವು: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಗೇರುಸೊಪ್ಪ ಬಳಿ ಕಾರು ಹಾಗೂ ಕೆಎಸ್ಆರ್ಟಿಸಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ 11 ಮಂದಿಗೆ ಗಂಭೀರ ಗಾಯವಾಗಿದ್ದು, ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.
ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಗೇರುಸೊಪ್ಪದಲ್ಲಿ ಬಳಿ ಈ ಭೀಕೆ ಅಪಘಾತ ಸಂಭವಿಸಿದೆ. ಈ ಡಿಕ್ಕಿ ಹೊಡೆದ ರಭಸಕ್ಕೆ ರಸ್ತೆ ಪಕ್ಕದ ಕಂದಕಕ್ಕೆ ಬಸ್ ಪಲ್ಟಿ ಆಗಿದೆ. ಬೆಂಗಳೂರಿನಿಂದ ಭಟ್ಕಳಕ್ಕೆ ಬರುತ್ತಿದ್ದ ವೇಳೆ ಕೆಎಸ್ಆರ್ಟಿಸಿ ಬಸ್ ಅಪಘಾತಕ್ಕೆ ಒಳಗಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಸುಳಿಮನೆ ಮುರ್ಕಿ ಕ್ರಾಸ್ನಲ್ಲಿ ನಿಯಂತ್ರಣ ತಪ್ಪಿ ಕಾರು-ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದುಕೊಂಡಿವೆ. ಈ ವೇಳೆ ಘಟನೆಯಲ್ಲಿ ಗಾಯಗೊಂಡವರನ್ನು 108 ಹಾಗೂ ಖಾಸಗಿ ಅಂಬುಲೆನ್ಸ್ ಮೂಲಕ ಹೊನ್ನಾವರ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಅಪಘಾತಕ್ಕೀಡಾದ ಸಾರಿಗೆ ಬಸ್ನಲ್ಲಿ 30ಕ್ಕೂ ಅಧಿಕ ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದರು. ಇನ್ನೂ ಈ ಘಟನೆ ಹೊನ್ನಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾಗಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications