ಪ್ರಧಾನಿ ಮೋದಿಗಾಗಿ ಮಂಗಳೂರಿನಲ್ಲಿ ರಾಷ್ಟ್ರೀಯ ಮಟ್ಟದ ಸಮಾವೇಶ
ಮಂಗಳೂರು, ಜನವರಿ 14: ನರೇಂದ್ರ ಮೋದಿ ಅವರನ್ನು ಮತ್ತೆ ಪ್ರಧಾನಿಯಾಗಿಸುವ ನಿಟ್ಟಿನಲ್ಲಿ ಪ್ರಯತ್ನಗಳು ಮುಂದುವರೆದಿವೆ. ಒಂದೆಡೆ ಮೋದಿ ಮತ್ತೆ ಅಧಿಕಾರಕ್ಕೆ ಬರಲು ಹೋಮ, ಹವನ, ಯಾಗಾದಿಗಳು ನಡೆಯುತ್ತಿದ್ದರೆ, ಇನ್ನೊಂದೆಡೆ ಕೇಂದ್ರ ಸರಕಾರದ ಪ್ರಮುಖ ಯೋಜನೆಗಳ ಬಗ್ಗೆ ಹಾಗೂ ಅದರ ಲಾಭದ ಕುರಿತು ಜನರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಗಳು ನಡೆಯತೊಡಗಿವೆ.
ಮಂಗಳೂರಿನಲ್ಲಿಯೂ ಮೋದಿ ಅವರಿಗಾಗಿ ಕಾರ್ಯಕ್ರಮಗಳನ್ನು ಆರಂಭಿಸಲಾಗಿದೆ. ಮಂಗಳೂರಿನ ಸಿಟಿಜನ್ ಕೌನ್ಸಿಲ್ ಮಂಗಳೂರು ಚಾಪ್ಟರ್ ಮತ್ತು ಪಂಚಾಯತ್ ತಂಡದ ಜೊತೆ ಸೇರಿ ಟ್ರಾನ್ಸ್ಫಾರ್ಮಿಂಗ್ ಇಂಡಿಯಾ ಎಂಬ ಒಂದು ದಿನದ ರಾಷ್ಟ್ರೀಯ ಮಟ್ಟದ ಸಮಾವೇಶ ಆಯೋಜಿಸಲಾಗಿದೆ.
ಈ ಸಮಾವೇಶದಲ್ಲಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಸಾಧನೆಗಳನ್ನು ಚರ್ಚಿಸಲು ಮತ್ತು ಮೌಲ್ಯಮಾಪನ ಮಾಡಲು ಖ್ಯಾತ ಭಾಷಣಕಾರರನ್ನು ಕರೆಸಲು ತೀರ್ಮಾನಿಸಲಾಗಿದೆ.

ಜಿಎಸ್ ಟಿ ಮತ್ತು ನೋಟು ಅಮಾನ್ಯೀಕರಣ, ಮೂಲಭೂತ ಸೌಕರ್ಯಗಳ ಅಭಿವೃದ್ಧಿ, ಮೋದಿಯವರ ರಾಜತಾಂತ್ರಿಕ ನಡೆ, ಆಯುಶ್ಮಾನ್ ಭಾರತ್, ಡಿಜಿಟಲ್ ಇಂಡಿಯಾ, ಭಯೋತ್ಪಾದನೆ ವಿರುದ್ಧ ಹೋರಾಟ, ನಕ್ಸಲರು ಮತ್ತು ಎನ್ಜಿಓ ಹಾಗೂ ಕರ್ನಾಟಕದ ಅಭಿವೃದ್ಧಿಯಲ್ಲಿ ಮೋದಿ ಸರಕಾರದ ಪಾತ್ರದ ಬಗ್ಗೆ ಚರ್ಚೆಯಾಗಲಿದೆ.
ಇದೇ ಜನವರಿ 20ರಂದು ಮಂಗಳೂರಿನ ಕೋಡಿಯಾಲ್ ಬೈಲ್ ನ ಟಿ.ವಿ ರಾಮನ್ ಪೈ ಕನ್ವೆನ್ಶನ್ ಸೆಂಟರ್ ನಲ್ಲಿ ಈ ಸಮಾವೇಶ ನಡೆಯಲಿದ್ದು, ಮೋದಿ ಸರಕಾರದ ಸಾಧನೆ ಮತ್ತು ಅಭಿವೃದ್ಧಿಗಳ ಬಗ್ಗೆ ಚರ್ಚೆ ನಡೆಯಲಿದೆ.
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ












Click it and Unblock the Notifications