ಮುಂಬೈಯಲ್ಲಿ ಮಂಗಳಮುಖಿಯರ ಮೇಲೆ ಹಲ್ಲೆ ಖಂಡಿಸಿ ಮಂಗಳೂರಲ್ಲಿ ಪ್ರತಿಭಟನೆ
ಮಂಗಳೂರು ಅಕ್ಟೋಬರ್ 29: ಮಂಗಳಮುಖಿಯರ ಮೇಲೆ ಮುಂಬಯಿಯಲ್ಲಿ ನಡೆದ ಹಲ್ಲೆ ಪ್ರಕರಣ ವನ್ನು ಖಂಡಿಸಿ ಮಂಗಳೂರಿನಲ್ಲಿ ಮಂಗಳ ಮುಖಿಯರು ರಸ್ತೆ ಗಿಳಿದು ಪ್ರತಿಭಟನೆ ನಡೆಸಿದ್ದಾರೆ.
ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪರಿವರ್ತನ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಮಂಗಳಮುಖಿಯರು ಹಲ್ಲೆ ಪ್ರಕರಣದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು . ಹಲ್ಲೆ ನಡೆಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.
ನಮ್ಮ ಮೇಲೆ ನಡೆಯುವ ದೌರ್ಜನ್ಯವನ್ನು ಇದುವರೆಗೂ ನಾವು ಯಾರಲ್ಲೂ ಹೇಳಿಲ್ಲ. ಆದರೆ ಜನರು ಹಲ್ಲೆ ನಡೆಸುವ ಮಂಚೆ ಯೋಚಿಸಬೇಕು, ಅದು ಯಾವ ಕಾರಣಕ್ಕೆ ಆಗುತ್ತೆ. ಆದ ಆನ್ಯಾಯವನ್ನು ಅದನ್ನು ಕೇಳುವುದಕ್ಕೆ ಪೋಲೀಸ್ ಇಲಾಖೆ ಇದೆ. ಕಾನೂನು ಇದೆ. ಹಲ್ಲೆ ನಡೆಸಲು ಇವರು ಯಾರು? ಎಂದು ಪ್ರತಿಭಟನಾಕಾರರರು ಪ್ರಶ್ನಿಸಿದರು.

ಆ ರೀತಿ ಮಾರಣಾಂತಿಕ ಹಲ್ಲೆ ನಡೆಸಿದವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು .ನಾವೂ ಭಾರತೀಯರು. ನಾವು ಹೊರಗಿನಿಂದ ಬಂದಿಲ್ಲ. ನಮಗೆ ನ್ಯಾಯ ಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.












Click it and Unblock the Notifications