ಆಟಿ ತಿಂಗಳಲ್ಲಿ ತುಳುನಾಡಿನ ಮನೆಗಳಲ್ಲಿ ವೈವಿಧ್ಯ ತಿನಿಸುಗಳ ಘಮಲು
ಮಂಗಳೂರು, ಜುಲೈ.22: ಜಾನಪದ ವೈಶಿಷ್ಟ್ಯಗಳಿಂದಲೇ ವಿಭಿನ್ನವಾಗಿ ಗುರುತಿಸಿಕೊಂಡಿರುವ ತುಳುನಾಡಿನಲ್ಲಿ ಅಷಾಢಮಾಸ ಆರಂಭವಾಗಿದೆ. ಅತ್ಯಂತ ವಿಭಿನ್ನ ಸಂಸ್ಕೃತಿ , ಸಂಪ್ರದಾಯಗಳನ್ನು ಹೊಂದಿರುವಂತಹ ತುಳುನಾಡಿನಲ್ಲಿ ಆಟಿ ತಿಂಗಳು ಅಥವಾ ಆಷಾಢ ತಿಂಗಳ ಆಚರಣೆಗೆ ವಿಶಿಷ್ಟ ಮಹತ್ವವಿದೆ.
ತುಳುವರಲ್ಲಿ ಆಟಿ ಎಂದರೆ ಆಷಾಢ. ಈ ತಿಂಗಳಲ್ಲಿ ಮದುವೆ, ಗೃಹ ಪ್ರವೇಶ, ಹೊಸ ಮನೆ ಖರೀದಿ, ಹೊಸ ಜಾಗ ಖರೀದಿ ಸೇರಿದಂತೆ ಯಾವುದೇ ಶುಭ ಕಾರ್ಯಗಳು ನಡೆಯುವುದಿಲ್ಲ. ಎಲ್ಲದಕ್ಕೂ ಆಟಿ ತಿಂಗಳು ಕಳೆಯಬೇಕು. ಆದರೆ ಆಟಿ ತಿಂಗಳಿನಲ್ಲಿ ತುಳುವರು ಆಚರಿಸುವ ಪದ್ಧತಿಗಳು ಮಾತ್ರ ಅತ್ಯಂತ ವಿಶಿಷ್ಟ.

ವಿಶಿಷ್ಟ ತಿನಿಸುಗಳ ಪರಿಮಳ
ಆಟಿ ತಿಂಗಳ ತುಳುವರ ತಿನಿಸುಗಳು ಮಾತ್ರ ಎಲ್ಲದಕ್ಕಿಂತಲೂ ಭಿನ್ನ. ಧೋ ಎಂದು ಸುರಿಯುವ ಮಳೆಯ ನಡುವೆ ಚುಮು ಚುಮು ಚಳಿಯಲ್ಲಿ ತುಳುನಾಡಿನ ಪ್ರತಿ ಮನೆಯ ಅಡುಗೆ ಕೋಣೆಯಿಂದ ವಿಶಿಷ್ಟ ತಿನಿಸುಗಳ ಘಮ ಘಮ ಪರಿಮಳ ಪರಿಸರದ ಎಲ್ಲೆಡೆ ಪಸರಿಸುತ್ತದೆ.

ಪ್ರಕೃತಿಯ ತಿನಿಸುಗಳು
ಮಳೆಗಾಲದಲ್ಲಿ ಬರುವ ಈ ಆಟಿ ತಿಂಗಳಲ್ಲಿ ಆಹಾರ, ಧಾನ್ಯ ದಾಸ್ತಾನುಗಳು ಬೇಗನೇ ಮುಗಿದು, ಆಹಾರದ ಕೊರತೆ ಎದುರಾಗುತ್ತದೆ. ಈ ಹಿನ್ನಲೆಯಲ್ಲಿ ತುಳುನಾಡಿನ ಜನ ಆಟಿಯಲ್ಲಿ ಪ್ರಕೃತಿಯ ಮೊರೆ ಹೋಗಿ, ಅಲ್ಲಿ ಸಿಗುವಂತಹ ಸಸ್ಯ ಚಿಗುರು, ಗಡ್ಡೆ ಗೆಣಸು, ಫಲವಸ್ತುಗಳನ್ನು ಉಪಯೋಗಿಸಿ ಬಗೆ ಬಗೆಯ ತಿನಿಸುಗಳನ್ನು ತಯಾರಿಸಿ ಸೇವಿಸುವುದು ಸಂಪ್ರದಾಯವಾಗಿದೆ.

ಆಟಿ ತಿಂಗಳಲ್ಲಿ ಬಳಕೆ
ಈ ಸಸ್ಯ ಪರಿಸರವು ಔಷಧೀಯ ಗುಣಗಳನ್ನು ಹೊಂದಿದ್ದು, ಆರೋಗ್ಯಕ್ಕೆ ಉತ್ತಮವಾಗಿರುವುದರಿಂದ ತುಳುವರ ಪೂರ್ವಜರಿಂದಲೇ ಈ ಸಂಪ್ರದಾಯಗಳು ಆಚರಣೆಯಲ್ಲಿವೆ.
ಮಳೆಗಾಲದಲ್ಲಿಯೇ ಬರುವ ಆಟಿ ಮಾಸಕ್ಕಾಗಿಯೇ ತಯಾರಿಸಿದ ಹಪ್ಪಳ , ಸಾಂತಣಿ , ಹಲಸಿನ ಬೀಜ , ಮಾವಿನಕಾಯಿಯನ್ನು ಉಪ್ಪು ನೀರಿನಲ್ಲಿ ನೆನೆಸಿಟ್ಟು ಶೇಖರಿಸಿದ 'ಉಪ್ಪಡಚ್ಚಿಲ್', ನೀರು ಕುಕ್ಕು, ತಿನಿಸುಗಳನ್ನು ತಯಾರಿಸಿ ಇಡಲಾಗುತ್ತದೆ. ತುಳುನಾಡಿನ ಗ್ರಾಮೀಣ ಪ್ರದೇಶದಲ್ಲಿ ಈ ತಿನಿಸುಗಳನ್ನು ಆಟಿ ತಿಂಗಳಲ್ಲಿ ಬಳಸಲು ಆರಂಭಿಸಲಾಗುತ್ತದೆ.

ಏನೆಲ್ಲಾ ತಿನಿಸುಗಳಿರುತ್ತವೆ?
ಅರಿಶಿನ ಎಲೆಯಲ್ಲಿ ತಯಾರಾದ ತಿಂಡಿ, ಹಪ್ಪಳ, ಕಡ್ಲೆ ಬೇಳೆ ಪಾಯಸ, ಎಳೆ ಬಿದಿರಿನ ಉಪ್ಪಿನಕಾಯಿ, ತಜಂಕ ಪಲ್ಯ, ಈ ಆಟಿ ತಿಂಗಳಲ್ಲಿ ತಯಾರಾಗುವ ವಿಶೇಷ ತಿನಿಸುಗಳು. ಆಟಿ ತಿಂಗಳಲ್ಲಿ ಗ್ರಾಮೀಣ ಪ್ರದೇಶದಲ್ಲಿ ಕೃಷಿ ಕಾರ್ಯಗಳಿಗೆ ತೆರಳುವ ಮೊದಲು ತೆಂಗಿನ ಕಾಯಿ ಅಥವಾ ತಾರಾಯಿದ ಗಂಜಿ, ಕಾಯಿ ಹಾಲಿನ ಗಂಜಿ ಸೇವಿಸಿತೆರಳುವ ಪದ್ಧತಿ ಇಂದಿಗೂ ಇದೆ.
ಮೋಡೆ, ಅರಸಿನ ಎಲೆಯ ಕಡುಬು, ಹಲಸಿನ ಕಡುಬು , ಪತ್ರೋಡೆ, ಕೆಸುವಿನ ಚಟ್ನಿ,ತಿಮರೆದ ಚಟ್ನಿ, ಮಾವಿನಕಾಯಿ ಚಟ್ನಿ, ಹುರುಳಿಸಾರು, ಚಿಲಿಂಬಿದ ಅಡ್ಡೆ, ಸೌತೆ ಪದಂಗಿ ಗಸಿ, ತಜಂಕ ವಡೆ, ಪಚ್ಚಿರ್ ಪಲ್ಯ, ಹಲಸಿನ ಮುಳ್ಕು, ಕಣಲೆ ಕಡ್ಲೆ, ತೇವು ಪದಪೆ ಗಸಿ, ಪಜಕಾಯಿ ಚಟ್ನಿ, ಮಾವಿನ ಹಣ್ಣಿನ ಮೆನಸ್ ಕಾಯಿಯ ರುಚಿ ಈ ಆಟಿ ತಿಂಗಳಲ್ಲಿ ಮಾತ್ರ ನೋಡಬಹುದಾಗಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications