ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಇನ್ಮುಂದೆ ತಾಲೂಕು, ಜಿಲ್ಲಾ ಮಟ್ಟದಲ್ಲಿ ತುಳು ಸಾಹಿತ್ಯ ಸಮ್ಮೇಳನ

|
Google Oneindia Kannada News

ಮಂಗಳೂರು, ಅಕ್ಟೋಬರ್ 07 : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಆಶ್ರಯದಲ್ಲಿ ತಾಲೂಕು ಹಾಗೂ ಜಿಲ್ಲಾ ಮಟ್ಟದ ತುಳು ಸಾಹಿತ್ಯ ಸಮ್ಮೇಳನ ಆಯೋಜಿಸಲು ನಿರ್ಧರಿಸಾಗಿದೆ.

ಮಂಗಳೂರಲ್ಲಿ ಲೋಕಾರ್ಪಣೆಗೊಂಡ ತುಳು ಅಕಾಡೆಮಿ ಕಚೇರಿಮಂಗಳೂರಲ್ಲಿ ಲೋಕಾರ್ಪಣೆಗೊಂಡ ತುಳು ಅಕಾಡೆಮಿ ಕಚೇರಿ

ತಾಲೂಕು ಮಟ್ಟದ ಪ್ರಥಮ ತುಳು ಸಾಹಿತ್ಯ ಸಮ್ಮೇಳನವನ್ನು ಮುಂದಿನ ಡಿಸೆಂಬರ್ ತಿಂಗಳಿನಲ್ಲಿ ಬಂಟ್ವಾಳದಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ. ಅಕಾಡೆಮಿ ಅಧ್ಯಕ್ಷರಾದ ಎ. ಸಿ. ಭಂಡಾರಿಯವರ ಅಧ್ಯಕ್ಷತೆಯಲ್ಲಿ ಅಕಾಡೆಮಿ ವತಿಯಿಂದ ರಚಿಸಲಾದ ಉಪಸಮಿತಿಯ ಸಭೆಯಲ್ಲಿ ಈ ಕುರಿತು ನಿರ್ಧರಿಸಲಾಯಿತು.

Tulu Sahitya Academy has decided to organize taluk and district level Tulu Sahitya Sammelan

ಸಮ್ಮೇಳನದ ಸ್ವರೂಪ ಮತ್ತು ರೂಪುರೇಷೆಗಳ ಬಗ್ಗೆ ಮುಂದಿನ ದಿನಗಳಲ್ಲಿ ತೀರ್ಮಾನ ಕೈಗೊಳ್ಳಲು ನಿರ್ದರಿಸಲಾಗಿದೆ. ತಾಲೂಕಿನಲ್ಲಿರುವ ತುಳುಪರ ಸಂಘಟನೆಗಳು, ತುಳು ಸಾಹಿತಿ, ಸಂಶೋಧಕರು, ಜಾನಪದ ಕಲಾವಿದರು ಒಳಗೊಂಡಂತೆ ಸಮಿತಿ ರಚಿಸಿಕೊಂಡು ತುಳು ಸಮ್ಮೇಳನ ನಡೆಸಲು ಸಭೆಯಲ್ಲಿ ಸೂಚಿಸಲಾಯಿತು.

ಸಮ್ಮೇಳನದ ವ್ಯವಸ್ಥೆಯ ಬಗ್ಗೆ ಆಯಾ ತಾಲೂಕಿನ ತುಳು ಪರ ಸಂಘಟನೆಗಳ ಪ್ರಮುಖರ ಸಲಹೆಗಳನ್ನು ಪಡೆದು ಸಮ್ಮೇಳನದ ಸ್ವರೂಪ ನಿರ್ಧರಿಸುವುದು ಒಳಿತು ಎಂದು ಸಭೆಯಲ್ಲಿ ತೀರ್ಮಾನಿಸಲಾಯಿತು.

English summary
Karnataka Tulu Sahitya Academy has decided to organize taluk and district level Tulu Sahitya Sammelan on december in Bantwal, Mangaluru district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X