ರಾಜ್ಯೋತ್ಸವ ದಿನದಂದು ತುಳುನಾಡ ರಕ್ಷಣಾ ವೇದಿಕೆಯಿಂದ ಕರಾಳ ದಿನಾಚರಣೆ
ಮಂಗಳೂರು, ನವೆಂಬರ್ 1: ರಾಜ್ಯದಲ್ಲಿ ಇಂದು ಸಂಭ್ರಮದ 62ನೇ ಕನ್ನಡ ರಾಜ್ಯೋತ್ಸವ ಆಚರಿಸಲಾಗುತ್ತಿದೆ. ಆದರೆ, ರಾಜ್ಯದ ಗಡಿ ಬೆಳಗಾವಿಯಲ್ಲಿ ಎಂಇಎಸ್ ಕರಾಳ ದಿನಾಚರಣೆ ಆಚರಿಸುತ್ತಿದೆ. ಇನ್ನೊಂದೆಡೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತುಳುನಾಡ ರಕ್ಷಣಾ ವೇದಿಕೆ ಕರಾಳ ದಿನ ಆಚರಿಸಿದೆ.
ತುಳುವರು ತಮ್ಮ ವಾಟ್ಸ್ಆ್ಯಪ್ ಪ್ರೊಫೈಲ್ ಚಿತ್ರವನ್ನು ಬ್ಲ್ಯಾಕ್ ಡೇ ಎಂದು ಹಾಕುವ ಮೂಲಕ ಕರಾಳ ದಿನವನ್ನಾಗಿ ಆಚರಿಸಿದ್ದಾರೆ.
ದಶಕಗಳಿಂದ ತುಳು ಭಾಷೆಯನ್ನು 8ನೇ ಪರಿಚ್ಛೇದಕ್ಕೆ ಸೇರಿಸಬೇಕು ಸೇರಿದಂತೆ ಹಲವಾರು ಬೇಡಿಕೆಗಳನ್ನು ತುಳು ಭಾಷಿಗರು ಸರ್ಕಾರದ ಮುಂದೆ ಇಡುತ್ತಲೇ ಬಂದಿದ್ದಾರೆ. ಆದರೆ, ಅದ್ಯಾವುದೂ ಈಡೇರಿಲ್ಲ. ಪ್ರತಿ ಸರಕಾರ ತುಳು ಭಾಷೆಯನ್ನು ನಿರ್ಲಕ್ಷ್ಯಿಸಿದೆ ಎಂದು ತುಳುನಾಡು ರಕ್ಷಣಾ ವೇದಿಕೆ ಆರೋಪಿಸಿದೆ.

ತುಳುವರಿಗೆ ಉದ್ಯೋಗದಲ್ಲಿ ಅನ್ಯಾಯ
ತುಳು ಭಾಷಿಗರಿಗಿರುವುದು ಇದೊಂದೇ ಸಮಸ್ಯೆಯಲ್ಲ. ಭಾಷೆಗೆ ಮನ್ನಣೆ ನೀಡುವುದರ ಜೊತೆಗೆ ಕರಾವಳಿ ಜಿಲ್ಲೆಯಲ್ಲಿ ತಳವೂರಿರುವ ಬೃಹತ್ ಕಂಪನಿಗಳು ತುಳುವರಿಗೆ ಉದ್ಯೋಗವಕಾಶ ನೀಡುತ್ತಿಲ್ಲ. ದಶಕಗಳಿಂದ ಈ ಬೇಡಿಕೆ ಇದ್ದರೂ ಸರ್ಕಾರಗಳು ಸ್ಪಂದಿಸಿಲ್ಲ ಎನ್ನುವ ಆಕ್ರೋಶ ವ್ಯಕ್ತಪಡಿಸಲಾಗಿದೆ.

ಜಿಲ್ಲಾಧಿಕಾರಿ ಕಚೇರಿ ಮುಂದೆ ಧರಣಿ
ತುಳುನಾಡ ರಕ್ಷಣಾ ವೇದಿಕೆ ವತಿಯಿಂದ ಕರಾಳ ದಿನಾಚರಣೆಯನ್ನು ಇಂದು ಮಂಗಳೂರಿನಲ್ಲಿ ಆಚರಿಸಲಾಯಿತು . ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ತುಳುನಾಡ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನಾ ಧರಣಿ ನಡೆಸಿದರು .

8ನೇ ಪರಿಚ್ಛೇಧಕ್ಕೆ ಸೇರಲಿಲ್ಲ ತುಳು
ಈ ಸಂದರ್ಭದಲ್ಲಿ ಮಾತನಾಡಿದ ತುಳುನಾಡ ರಕ್ಷಣಾ ವೇದಿಕೆಯ ಸಂಸ್ಥಾಪಕ ಯೋಗೀಶ್ ಶೆಟ್ಟಿ ಜೆಪ್ಪು, "ತುಳುನಾಡಿನ ಅಭಿವೃದ್ಧಿ ಮತ್ತು ತುಳು ಭಾಷೆಯನ್ನು 8 ನೇ ಪರಿಚ್ಛೇಧಕ್ಕೆ ಸೇರಿಸುವ ಬಗ್ಗೆ ನಿರ್ಲಕ್ಷ್ಯ ಧೋರಣೆಯನ್ನು ರಾಜಕೀಯ ಹಾಗೂ ಆಡಳಿತಶಾಹಿ ವ್ಯವಸ್ಥೆ ತೋರುತ್ತಿದೆ," ಎಂದು ಆಕ್ರೋಶ ವ್ಯಕ್ತಪಡಿಸಿದರು .

ಎತ್ತಿನಹೊಳೆಯಿಂದ ಅನ್ಯಾಯ
ತುಳುನಾಡಿನ ಜೀವನಾಡಿಯಾಗಿರುವ ನೇತ್ರಾವತಿ ನದಿ ತಿರುವು ಮೂಲಕ ಎತ್ತಿನಹೊಳೆ ಯೋಜನೆ ಜಾರಿಗೆ ತಂದು ರಾಜ್ಯ ಸರ್ಕಾರ ತುಳುವರಿಗೆ ಅನ್ಯಾಯ ಮಾಡಿದೆ. ಈ ಹಿನ್ನೆಲೆಯಲ್ಲಿ ಇಂದು ತುಳುವರು ಕರಾಳ ದಿನವನ್ನು ಆಚರಿಸುತ್ತಿದ್ದಾರೆ ಎಂದು ಅವರು ಹೇಳಿದರು.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications