ಭಾರೀ ಮಳೆಯ ಮಧ್ಯೆಯೂ ಬೆಳ್ತಂಗಡಿಯ ದಿಡುಪೆಯಲ್ಲಿ ದೈವ ಪವಾಡ
ಮಂಗಳೂರು, ಆಗಸ್ಟ್ 13: ದಕ್ಷಿಣ ಕನ್ನಡ ಸೇರಿದಂತೆ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಸುರಿದ ಭಾರೀ ಮಳೆಗೆ ಅನಾಹುತಗಳು ಸಂಭವಿಸಿವೆ. ಬೆಟ್ಟದ ಮೇಲಿಂದ ಹರಿದು ಬಂದ ಭಾರೀ ಪ್ರಮಾಣದ ನೀರು ನದಿ ಪಾತ್ರವನ್ನೇ ಬದಲಿಸಿದ ಪರಿಣಾಮ ಜನವಸತಿ ಪ್ರದೇಶಗಳು ನಾಶಗೊಂಡಿವೆ. ಸೂರು ಕಳೆದುಕೊಂಡ ನೂರಾರು ಜನರು ಸಂತ್ರಸ್ತರಾಗಿದ್ದಾರೆ. ಈ ಅನಾಹುತಗಳ ನಡುವೆ ದೈವ ವಿಸ್ಮಯ ಒಂದು ಬೆಳಕಿಗೆ ಬಂದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಹಲವೆಡೆ ಪ್ರಾಕೃತಿಕ ವಿಕೋಪ, ನೆರೆಹಾವಳಿ ಬಳಿಕ ಕೆಲ ವಿಸ್ಮಯಗಳು ಬೆಳಕಿಗೆ ಬರತೊಡಗಿವೆ. ತುಳುನಾಡಿನ ದೈವದ ಶಕ್ತಿಯನ್ನು ಎತ್ತಿ ತೋರಿಸುತ್ತಿದೆ. ಮಳೆ ಆರ್ಭಟಕ್ಕೆ ಮನೆ, ಕೃಷಿ ಭೂಮಿ ಕೊಚ್ಚಿ ಹೋದರೂ ತುಳುನಾಡಿನ ಕಾರಣಿಕ ಶಕ್ತಿಯ ದೇವಸ್ಥಾನಕ್ಕೆ ಕಿಂಚಿತ್ತೂ ಹಾನಿಯಾಗಿಲ್ಲ ಎನ್ನುವುದು ಆಶ್ಚರ್ಯಕ್ಕೆ ಕಾರಣವಾಗಿದೆ.
ಬೆಳ್ತಂಗಡಿ ತಾಲೂಕಿನ ದಿಡುಪೆಯ ಪ್ರದೇಶದಲ್ಲಿ ನೆರೆ ಹಾವಳಿಗೆ ಗುಡ್ಡ ಕುಸಿದು, ಭಾರೀ ಪ್ರಮಾಣದಲ್ಲಿ ಮಣ್ಣು ಮರಗಳ ಜೊತೆಗೆ ನದಿಯಲ್ಲಿ ತೇಲಿ ಬಂದ ಪರಿಣಾಮ ಇಲ್ಲಿರುವ ಸೇತುವೆ ಹಾಗೂ ಅಕ್ಕಪಕ್ಕದಲ್ಲಿರುವ ಮನೆಗಳನ್ನು ಮತ್ತು ಕೃಷಿ ಭೂಮಿಗಳನ್ನು ಬಿಡದೆ ಸರ್ವನಾಶ ಮಾಡಿದೆ.

ಆದರೆ, ಸ್ಥಳದಲ್ಲಿದ್ದ ತುಳುನಾಡಿನ ದೈವಗಳಾದ ರಕ್ತೇಶ್ವರಿ ಹಾಗೂ ಗುಳಿಗನ ಸಾನ್ನಿಧ್ಯವನ್ನು ಒಂದಿಂಚೂ ಮುಟ್ಟದೆ ಮುಂದಕ್ಕೆ ಸಾಗಿದೆ. ಸ್ಥಳೀಯರಲ್ಲಿ ಇದು ಆಶ್ಚರ್ಯವನ್ನು ತಂದಿದ್ದು, ದೈವೀ ಪವಾಡಕ್ಕೆ ಜನರು ಬೆರಗಾಗಿದ್ದಾರೆ. ಇದನ್ನು ನೋಡಲು ನೂರಾರು ಜನ ರಕ್ತೇಶ್ವರಿ ಹಾಗೂ ಗುಳಿಗನ ಸಾನ್ನಿಧ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ತನ್ನೆದುರು ಬಂದ ಎಲ್ಲವನ್ನೂ ಕೊಚ್ಚಿಕೊಂಡು ಸಾಗಿದ ಪ್ರವಾಹವು ದೈವ ಸಾನ್ನಿಧ್ಯವನ್ನು ಮುಟ್ಟದಿರಲು ಕಾರಣ ಏನು ಎಂಬ ಕುತೂಹಲ ಹಲವರನ್ನು ಕಾಡುತ್ತಿದೆ.
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications