ಕುಂಟ್ರಕಳದಲ್ಲಿ ಮೇರಿ ಆರಾಧನಾ ಕಟ್ಟೆ ಧ್ವಂಸ ಪ್ರಕರಣ: ಇಬ್ಬರು ಆರೋಪಿಗಳ ಬಂಧನ
ಮಂಗಳೂರು, ಸೆಪ್ಟೆಂಬರ್. 30: ಬಂಟ್ವಾಳ ತಾಲೂಕಿನ ಕೊಳ್ನಾಡು ಗ್ರಾಮದ ಕುಂಟ್ರಕಳ ಎಂಬಲ್ಲಿ ಮೇರಿ ಮಾತೆ ಗ್ರೊಟ್ಟೊ ನಾಶಮಾಡಿ ಕೊರಗಜ್ಜನ ಕಟ್ಟೆ ಸ್ಥಾಪಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರು ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಕೊಳ್ನಾಡು ಗ್ರಾಮದ ಕುಂಟ್ರಕಳ ನಿವಾಸಿಗಳಾದ ಜಯರಾಮ ನಾಯ್ಕ ಮತ್ತು ಮೋನಪ್ಪ ನಾಯ್ಕ ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆರೋಪಿಗಳಿಗೆ ಅಕ್ಟೋಬರ್. 12ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಸೆಪ್ಟೆಂಬರ್. 27 ರಂದು ಕ್ರೈಸ್ತರ ಆರಾಧನ ಸ್ಥಳಕ್ಕೆ ದುಷ್ಕರ್ಮಿಗಳು ದಾಳಿ ಮಾಡಿ ಕೊರಗಜ್ಜ ದೈವದ ಮೂರ್ತಿ ಇರಿಸಿದ್ದರು. ಕಳೆದ 45 ವರ್ಷಗಳಿಂದ ಕ್ರೈಸ್ತರು ಆ ಸ್ಥಳದಲ್ಲಿ ಮಾತೆ ಮೇರಿಯ ಮೂರ್ತಿಯನ್ನಿಟ್ಟು ಆರಾಧನೆ ಮಾಡುತ್ತಿದ್ದರು.

ಮೇರಿಯ ಮೂರ್ತಿಯನ್ನಿಟ್ಟ ಸ್ಥಳ ಸರ್ಕಾರಿ ಜಾಗವಾದ ಕಾರಣ ಅಲ್ಲಿ ಮೇರಿ ಆರಾಧನೆ ಬಗ್ಗೆ ಹಿಂದೂ ಸಂಘಟನೆಯ ಕಾರ್ಯಕರ್ತರು ಆಕ್ಷೇಪ ಎತ್ತಿದ್ದರು ಎಂದು ಹೇಳಲಾಗಿತ್ತು.
ಕಿಡಿಗೇಡಿಗಳ ತಂಡ ಮೇರಿ ಮೂರ್ತಿ ಇದ್ದ ಸ್ಥಳದಲ್ಲಿ ಕೊರಗಜ್ಜ ದೈವದ ಮೂರ್ತಿ ಇರಿಸಿ ಸುತ್ತಲೂ ಕೇಸರಿ ಬಂಟಿಗ್ಸ್ ಕಟ್ಟಿದ್ದರು. ವಿಷಯ ಬಹಿರಂಗವಾಗುತ್ತಿದ್ದಂತೆಯೇ ಸೆಪ್ಟೆಂಬರ್ 28 ರ ಮುಂಜಾನೆ ಎರಡೂ ಸಮುದಾಯದ ಯುವಕರ ಗುಂಪು ಸ್ಥಳದಲ್ಲಿ ಜಮಾಯಿಸಿದ್ದು, ಬಿಗುವಿನ ವಾತವರಣ ನಿರ್ಮಾಣವಾಗಿತ್ತು.
ಪೊಲೀಸರು ಮಧ್ಯ ಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದ್ದರು.ಕ್ರೈಸ್ತರ ಮೇರಿ ಆರಾಧನಾ ಕಟ್ಟೆಯ ಧ್ವಂಸ ಪ್ರಕರಣ ಇಬ್ಬರು ಆರೋಪಿಗಳ ಬಂಧನ
-
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
ಬೆಂಗಳೂರಿನಲ್ಲಿ ಇಂದು ಶ್ರೀ ಎಂ ಅವರ "ಉಪನಿಷತ್ತುಗಳು ಮತ್ತು ಜೆ.ಕೃಷ್ಣಮೂರ್ತಿ" ಹೊಸ ಕೃತಿ ಬಿಡುಗಡೆ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Duet Songs: ಆಶಾ ಭೋಸ್ಲೆ-ಲತಾ ಮಂಗೇಶ್ಕರ್ ಸಹೋದರಿಯರ ಕಂಠಸಿರಿಯಲ್ಲಿ ಅರಳಿದ ಮಾಧುರ್ಯ: ಒಟ್ಟಿಗೆ ಹಾಡಿದ ಹಿಟ್ ಹಾಡುಗಳಿವು -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
ಎಪಿಎಂಸಿಯಲ್ಲಿ ಮೂಟೆಗಳು ಮೈಮೇಲೆ ಬಿದ್ದರೂ ಪವಾಡಸದೃಶ್ಯದಂತೆ ಬದುಕಿದ ಮಹಿಳೆ Video Viral -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ











Click it and Unblock the Notifications