ಮಂಗಳೂರಿನಲ್ಲಿ ನಕಲಿ ನೋಟು ಹೊಂದಿದ್ದ ಇಬ್ಬರ ಬಂಧನ
ಮಂಗಳೂರು, ಜನವರಿ 4: 4.5 ಲಕ್ಷ ಮೌಲ್ಯದ ನಕಲಿ ನೋಟುಗಳನ್ನು ಹೊಂದಿದ್ದ ಇಬ್ಬರನ್ನು ಕರ್ನಾಟಕ ಪೊಲೀಸರು ಮಂಗಳವಾರ ಮಂಗಳೂರಿನಲ್ಲಿ ಬಂಧಿಸಿದ್ದಾರೆ.
ನಕಲಿ ನೋಟು ಹೊಂದಿದ್ದ ಈ ಇಬ್ಬರು ಆರೋಪಿಗಳನ್ನು ನಿಜಾಮುದ್ದೀನ್ ಮತ್ತು ರಜೀಮ್ ಎಂದು ಗುರುತಿಸಲಾಗಿದೆ. 500 ಮುಖಬೆಲೆಯ 4.5 ಲಕ್ಷ ರೂಪಾಯಿ ಮೌಲ್ಯದ ನಕಲಿ ನೋಟುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇವರಿಂದ ಕಳವು ಮಾಡಿದ ವಾಹನವನ್ನೂ ವಶಪಡಿಸಿಕೊಳ್ಳಲಾಗಿದೆ. ಇಬ್ಬರೂ ಆರೋಪಿಗಳ ವಿರುದ್ಧ ಈ ಹಿಂದೆ ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ನಿಜಾಮುದ್ದೀನ್ ವಿರುದ್ಧ ಎರಡು ಕೊಲೆ ಪ್ರಕರಣಗಳು ಸೇರಿದಂತೆ ಐದು ಪ್ರಕರಣಗಳಿವೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನಿಂದ ನೋಟುಗಳನ್ನು ತಂದಿರುವುದಾಗಿಯೂ, ನಕಲಿ ನೋಟುಗಳನ್ನು ಖರೀದಿಸಲು 1.10 ಲಕ್ಷ ರೂ. ಪಾವತಿಸಿರುವುದಾಗಿಯೂ ಆರೋಪಿಗಳು ತಿಳಿಸಿದ್ದಾರೆ. ನಕಲಿ ನೋಟುಗಳನ್ನು ಪಡೆದ ವ್ಯಕ್ತಿಯೇ ಕೊಯಮತ್ತೂರಿನಲ್ಲಿ ಹಣ ಮುದ್ರಿಸಿರುವುದಾಗಿ ತಿಳಿಸಿದ್ದಾಗಿಯೂ ಅವರು ತಿಳಿಸಿದ್ದಾರೆ. ಅದನ್ನು ತನಿಖೆ ಮಾಡುತ್ತಿದ್ದೇವೆ ಎಂದು ಪೊಲೀಸ್ ಆಯುಕ್ತರು ಹೇಳಿದ್ದಾರೆ.

ಬೆಂಗಳೂರಿನ ಡ್ಯಾನಿಯಲ್ ಎಂಬಾತನಿಂದ ಈ ಇಬ್ಬರು ಬಂಧಿತ ಆರೋಪಿಗಳು ನಕಲಿ ನೋಟುಗಳನ್ನು ಪಡೆದುಕೊಂಡು ಮಂಗಳೂರಿನಲ್ಲಿ ಓಡಾಡುತ್ತಿದ್ದರು. ಜ. 2 ರಂದು ನಗರದ ನಂತೂರು ಎಂಬಲ್ಲಿ ವಾಹನ ತಪಾಸಣೆಯನ್ನು ಪೊಲೀಸರು ನಡೆಸುತ್ತಿದ್ದ ಸಂದರ್ಭದಲ್ಲಿ ಸ್ಕೂಟರ್ ವೊಂದು ಅತಿವೇಗದಿಂದ ಹೋಯಿತು. ಇದನ್ನು ಹಿಡಿದು ತಪಾಸಣೆ ನಡೆಸಿದಾಗ ಖೋಟಾ ನೋಟು ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.
ನಕಲಿ ನೋಟಗಳನ್ನು ಡ್ಯಾನಿಯಲ್ನಿಂದ ಪಡೆದುಕೊಂಡಿದ್ದು, ಇದಕ್ಕೂ ಮುಂಚೆ ಡ್ಯಾನಿಯಲ್ ಖೋಟಾ ನೋಟು ಪ್ರಕರಣದಲ್ಲಿ ಬೆಂಗಳೂರಿನಲ್ಲಿ ಬಂಧಿಸಲ್ಪಟ್ಟಿದ್ದಾನೆ. ಈ ಖೋಟಾ ನೋಟನ್ನು ಡ್ಯಾನಿಯಲ್ ತಮಿಳುನಾಡಿನ ಕೊಯಮುತ್ತೂರಿನಲ್ಲಿ ಮುದ್ರಿಸಿ ವಿತರಿಸಿದ್ದ ಎಂದು ಬಂಧಿತರು ತಿಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿ ನಿಜಾಂನ ವಿರುದ್ದ 2015ರಲ್ಲಿ ವಿಟ್ಲದಲ್ಲಿ ಕೊಲೆ ಪ್ರಕರಣ, 2015 ರಲ್ಲಿ ಮಂಗಳೂರು ಕಾರಗೃಹದಲ್ಲಿ ಕೊಲೆ ಪ್ರಕರಣ, 2017 ರಲ್ಲಿ ಕೊಡಗಿನ ಕುಶಾಲನಗರ ಠಾಣೆಯಲ್ಲಿ ದರೋಡೆ ಪ್ರಕರಣ, 2018 ರಲ್ಲಿ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ಮತ್ತು ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ನಡೆದ ಸುಲಿಗೆ ಪ್ರಕರಣ ದಾಖಲಾಗಿದೆ. ಆರೋಪಿ ರಾಫೀ ವಿರುದ್ದ ಉರ್ವ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದೆ. ಆರೋಪಿಗಳನ್ನು ಪತ್ತೆ ಹಚ್ಚಿದ ಪೊಲೀಸ್ ತಂಡಕ್ಕೆ 10 ಸಾವಿರ ರೂ. ನಗದು ಬಹುಮಾನ ನೀಡಲಾಗುವುದು ಎಂದು ತಿಳಿಸಿದ್ದಾರೆ.
-
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ












Click it and Unblock the Notifications