ಕ್ರೀಡೋತ್ಸವಕ್ಕೆ ಬಂದ ಇಬ್ಬರು ಸುರತ್ಕಲ್ ನಲ್ಲಿ ಸಮುದ್ರಪಾಲು
ಮಂಗಳೂರು, ಜುಲೈ 8: ಕೆಸರುಗದ್ದೆ ಕ್ರೀಡೋತ್ಸವಕ್ಕೆ ಬಂದವರು ಸಮುದ್ರದಲ್ಲಿ ನೀರು ಪಾಲಾದ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ ಸಮೀಪದ ಸಸಿಹಿತ್ಲು ಎಂಬಲ್ಲಿ ಜುಲೈ 7ರ ಭಾನುವಾರ ನಡೆದಿದೆ. ಸಸಿಹಿತ್ಲು ಅಗ್ಗಿದಕಳಿಯದಲ್ಲಿ ಭಾನುವಾರ ನಡೆದ ಕೆಸರುಗದ್ದೆ ಕ್ರೀಡೋತ್ಸವಕ್ಕೆ ಬಂದ ಬಜಪೆ ಯುವಟೈಗರ್ ತಂಡದ 7 ಜನ ಕ್ರೀಡಾಳುಗಳು ಒಂದು ಸುತ್ತಿನ ಕ್ರೀಡೋತ್ಸವ ಮುಗಿಸಿ ಅದರಲ್ಲಿ 4 ಮಂದಿ ಸ್ನಾನಕ್ಕೆಂದು ಸಮುದ್ರಕ್ಕಿಳಿದಿದ್ದರು.
ಈ ಸಂದರ್ಭದಲ್ಲಿ ಕಾವೂರು ನಿವಾಸಿ ಗುರುಪ್ರಸಾದ್, ಬಜಪೆ ಸಿದ್ದಾರ್ಥನಗರದ ನಿವಾಸಿ ಸುಚಿತ್ ನೀರು ಪಾಲಾಗಿದ್ದು, ಸೃಜನ್ ಮತ್ತು ಕಾರ್ತಿಕ್ ಅವರನ್ನು ಸ್ಥಳೀಯರು ಪಾರು ಮಾಡಿ ಖಾಸಗಿ ಅಸ್ಪತ್ರೆಗೆ ದಾಖಲಿಸಿದ್ದಾರೆ.

ಏಕಾಏಕಿ ನಾಲ್ಕು ಮಂದಿ ಸಮುದ್ರದ ಅಲೆಯಲ್ಲಿ ಸಿಲುಕಿಕೊಂಡಾಗ ಸ್ಥಳೀಯರು ಇಬ್ಬರನ್ನು ರಕ್ಷಿಸಲು ಸಾಧ್ಯವಾಯಿತಾದರೂ ಇನ್ನಿಬ್ಬರು ಕಡಲಿನ ಅಬ್ಬರದ ಸೆಳೆತಕ್ಕೊಳಗಾದರು. ಘಟನೆ ನಡೆದ ಸ್ಥಳದಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಜನರು ಸೇರಿದ್ದರು. ಸುರತ್ಕಲ್ ಠಾಣೆಯ ಪೊಲೀಸರು ಸ್ಥಳಕ್ಕೆ ತೆರಳಿ ತನಿಖೆ ನಡೆಸಿದ್ದಾರೆ.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ












Click it and Unblock the Notifications