ಪಿಲಿಕುಳ ನಿಸರ್ಗ ಧಾಮದಲ್ಲಿ ಆಯುಷ್ ಹಬ್ಬ ಸಂಭ್ರಮ
ಮಂಗಳೂರು, ಡಿ. 20: ಆಯುರ್ವೇದ, ಯೋಗ, ಸಿದ್ದ, ಹೋಮಿಯೋಪತಿ ಒಳಗೊಂಡ ಆಯುಷ್ ಉತ್ಪನ್ನಗಳ ಪ್ರಚಾರ ಹಾಗೂ ಮಾರಾಟಕ್ಕಾಗಿ ಆಯೋಜನೆಗೊಂಡಿರುವ ಎರಡು ದಿನಗಳ ಅಯುಷ್ ಹಬ್ಬಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಪಿಲಿಕುಳ ದ ಡಾ. ಶಿವರಾಮ ಕಾರಂತ ನಿಸರ್ಗ ಧಾಮದಲ್ಲಿ ಆಯುಷ್ ಹಬ್ಬ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ನೆರವೇರಿಸಿದರು. ಆರೋಗ್ಯ ಸಚಿವ ಯು.ಟಿ.ಖಾದರ್ ಅವರು ಉಚಿತ ಆಯುಷ್ ಆರೋಗ್ಯ ತಪಾಸಣಾ ಶಿಬಿರ ಮತ್ತು ಆಯುಷ್ ಆರೋಗ್ಯ ಕಾರ್ಡ್ ವಿತರಣೆಗೆ ಚಾಲನೆ ನೀಡಿ, ಹಬ್ಬದಲ್ಲಿ ಭಾಗವಹಿಸಿದ ಆಸಕ್ತರಿಗೆ ಉಚಿತ ಆರೋಗ್ಯ ಕಾರ್ಡ್ ವಿತರಿಸಿದರು.[ಪಿಲಿಕುಳದಲ್ಲಿ ನೂತನ ಮತ್ಸ್ಯಾಲಯ ಆರಂಭ]
ಅಷ್ಟೇ ಅಲ್ಲದೇ ಹಬ್ಬದಲ್ಲಿ ತಜ್ಞ ವೈದ್ಯರಿಂದ ಉಚಿತ ಆರೋಗ್ಯ ತಪಾಸಣೆ ಹಾಗೂ 250 ಬಗೆಯ ವಿವಿಧ ಪಥ್ಯಾಹಾರಗಳ ಪ್ರದರ್ಶನವನ್ನು ಕೂಡ ಹಮ್ಮಿಕೊಳ್ಳಲಾಯಿತು.
ಆಯುಷ್ ಆಹಾರ ಮೇಳ, ಗವ್ಯ ಚಿಕಿತ್ಸೆ, ದೇಶೀ ಗೋವು ತಳಿಗಳ ಪ್ರದರ್ಶನ, ಸೌಂದರ್ಯ ಚಿಕಿತ್ಸೆ ಬಗ್ಗೆ ಪರಿಚಯ,ಜೀವನಶೈಲಿ ನಿರ್ವಹಣೆ ಬಗ್ಗೆ ಕಾರ್ಯಾಗಾರ, ಆರೋಗ್ಯಪೂರ್ಣ ಜೀವನಕ್ಕೆ ಅಗತ್ಯ ದಿನಚರಿ, ಆಹಾರ- ವಿಹಾರಗಳ ಕುರಿತಂತೆ ಸಾರ್ವಜನಿಕರಿಗೆ ಮಾಹಿತಿ ಕಾರ್ಯಾಗಾರ, ಹಬ್ಬದಲ್ಲಿ ಪಥ್ಯಾಹಾರಗಳ ಪ್ರದರ್ಶನದ ಜೊತೆಗೆ ಸುಮಾರು 40 ಬಗೆಯ ವಿವಿಧ ಪಥ್ಯಾಹಾರಗಳು ಸಾರ್ವಜನಿಕರಿಗೆ ರಿಯಾಯಿತಿ ದರದಲ್ಲಿ ಲಭ್ಯವಿತ್ತು.

ಅಯುಷ್ ಹಬ್ಬಕ್ಕೆ ಉತ್ತಮ ಪ್ರತಿಕ್ರಿಯೆ
ಪಿಳಿಕುಳದ ಡಾ. ಶಿವರಾಮ ಕಾರಂತ ನಿಸರ್ಗ ಧಾಮದಲ್ಲಿ ಆಯುಷ್ ಹಬ್ಬ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ನೆರವೇರಿಸಿದರು. ಆರೋಗ್ಯ ಸಚಿವ ಯು.ಟಿ.ಖಾದರ್ ಅವರು ಉಚಿತ ಆಯುಷ್ ಆರೋಗ್ಯ ತಪಾಸಣಾ ಶಿಬಿರ ಮತ್ತು ಆಯುಷ್ ಆರೋಗ್ಯ ಕಾರ್ಡ್ ವಿತರಣೆಗೆ ಚಾಲನೆ ನೀಡಿದರು.

ಮಂಗರಸ 'ಸೂಪ ಶಾಸ್ತ್ರ' ವಿವರಣೆ
ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ನ್ಯಾಚುರೋಪತಿ ಹಾಗೂ ಯೋಗ ವಿಜ್ಞಾನ ಕೇಂದ್ರದ ವಿದ್ಯಾರ್ಥಿಗಳು ವಿವಿಧ ಬಗೆಯ ಆಹಾರ ಉತ್ಪನ್ನಗಳನ್ನು ಪ್ರದರ್ಶಿಸಿದ್ದಾರೆ. ಆಹಾರ ಬಳಕೆ ಅಡುಗೆ ಬಗ್ಗೆ 15ನೇ ಶತಮಾನದಲ್ಲೇ ಮಂಗರಸ 'ಸೂಪ ಶಾಸ್ತ್ರ' ದಲ್ಲಿ ವಿವರಿಸಿದ್ದಾನೆ ಎಂದು ಕಾಲೇಜಿನ ಪ್ರೊಫೆಸರ್ ರಾಘವೇಂದ್ರ ಉಡುಪ ಹೇಳಿದರು.

ಆಯುಷ್ ಹಬ್ಬದ ಅಧ್ಯಕ್ಷೆ ಸಂಭ್ರಮ
ಜಿಲ್ಲಾ ಆಯುಷ್ ಅಧಿಕಾರಿ,ಡಾ.ದೇವದಾಸ್, ಆಯುಷ್ ಹಬ್ಬದ ಅಧ್ಯಕ್ಷೆ ಡಾ.ಆಶಾಜ್ಯೋತಿ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಆಶಾ ತಿಮ್ಮಪ್ಪ, ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಬಿ.ಎ ಮೊಯ್ದೀಯಿನ್ ಬಾವಾ, ಆಯುಷ್ ಇಲಾಖೆ ನಿರ್ದೇಶಕ ಸುಭಾಷ್ ಕೆ ಮಾಲ್ಕೇಡೆ, ಹೋಮಿಯೋಪತಿ ಬೋರ್ಡ್ ಅಧ್ಯಕ್ಷ ಡಾ.ಬಿ.ಟಿ.ರುದ್ರೇಶ್, ಪಿಲಿಕುಳ ನಿಸರ್ಗಧಾಮದ ಕಾರ್ಯನಿರ್ವಾಹಕ, ನಿರ್ದೇಶಕ ಪ್ರಭಾಕರ್ ಶರ್ಮ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಾರ್ವಜನಿಕರನ್ನು ಸೆಳೆಯುವಲ್ಲಿ ಯಶಸ್ವಿ
ಅಡುಗೆ ಮನೆ, ತಯಾರಿ, ಬಡಿಸುವುದು, ಕಾಯಿಲೆ ಮುಕ್ತ ವಾತಾವರಣದ ಬಗ್ಗೆ ಸರಳವಾಗಿ ವಿವರಣೆ ಭಾವ ಮಿಸ್ರಾ ಬರೆದ ಭಾವ ಪ್ರಕಾಶ ಕೃತಿಯಲ್ಲೂ ಸಿಗುತ್ತದೆ ಎಂದರು. ಆಯುಷ್ ಹಬ್ಬದ ಪ್ರದರ್ಶನ ಹಾಗೂ ಮಾರಾಟಕ್ಕಿರುವ ವಿವಿಧ ಬಗೆಯ ಆಹಾರ, ಆರೋಗ್ಯ ಉತ್ಪನ್ನಗಳು ಸಾರ್ವಜನಿಕರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications