ಡ್ರೋನ್ ದಾಳಿಗೆ ಕಾಸರಗೋಡಿನ ಇಬ್ಬರು ಐಸಿಸ್ ಉಗ್ರರು ಬಲಿ
ಮನೆ ಬಿಟ್ಟು ಐಸಿಸ್ ಸಂಘಟನೆ ಸೇರಿದ್ದ ಕಾಸರಗೋಡು ಮೂಲದ ಇಬ್ಬರು ಯುವಕರು ಅಫ್ಘಾನಿಸ್ತಾನದಲ್ಲಿ ನಡೆದ ಡ್ರೋನ್ ದಾಳಿಗೆ ಬಲಿಯಾಗಿದ್ದಾರೆ ಎಂದು ತಿಳಿದು ಬಂದಿದೆ.
ಮಂಗಳೂರು, ಫೆಬ್ರವರಿ 27: ಮನೆ ಬಿಟ್ಟು ಐಸಿಸ್ ಸಂಘಟನೆ ಸೇರಿದ್ದ ಕಾಸರಗೋಡು ಮೂಲದ ಇಬ್ಬರು ಯುವಕರು ಅಫ್ಘಾನಿಸ್ತಾನದಲ್ಲಿ ನಡೆದ ಡ್ರೋನ್ ದಾಳಿಗೆ ಬಲಿಯಾಗಿದ್ದಾರೆ ಎಂದು ತಿಳಿದು ಬಂದಿದೆ.
ಮೃತರಲ್ಲಿ ಒಬ್ಬ ಕಾಸರಗೋಡು ಪಡನ್ನದ ಹಫೀಸುದ್ದೀನ ಎಂದು ಗುರುತಿಸಲಾಗಿದೆ. ಈ ಕುರಿತು ಹಫೀಸ್ ಮನೆಯವರಿಗೆ ಟೆಲಿಗ್ರಾಂ ಮೊಬೈಲ್ ಆ್ಯಪ್ ಮೂಲಕ ಅಶ್ಫಕ್ ಮಜೀದ್ ಎಂಬ ಮತ್ತೊಬ್ಬ ಉಗ್ರನಿಂದ ಮಾಹಿತಿ ಬಂದಿದೆ ಎಂದು ಎನ್ಐಎ ಮೂಲಗಳು ಹೇಳಿವೆ.[ಐಸಿಸ್ ನ ಲೈಂಗಿಕ ಕ್ರೌರ್ಯಕ್ಕೆ ನಲುಗಿದವಳ ಕರುಳು ಹಿಂಡುವ ಕಥೆ]

ಒಟ್ಟಾರೆ ಇಲ್ಲಿವರೆಗೆ ಕೇರಳದಿಂದ 21 ಜನ ಐಸಿಸ್ ಸಂಘಟನೆ ಸೇರಿದ್ದಾರೆ ಎನ್ನಲಾಗಿದೆ. ಇದರಲ್ಲಿ 2016ರಲ್ಲೇ 17 ಜನ ಐಸಿಸ್ ಸಂಘಟನೆ ಸೇರಿದ್ದರೆ, ಇದರಲ್ಲಿ 11 ಜನ ಕಾಸರಗೋಡಿನ ಪಡನ್ನಾ ನಿವಾಸಿಗಳಾಗಿದ್ದಾರೆ. ಇವರಲ್ಲಿ ಈಗ ಇಬ್ಬರು ಸಾವನ್ನಪ್ಪಿದ್ದಾರೆ.
ಅಫ್ಘಾನಿಸ್ತಾನದಲ್ಲಿರುವ ಐಸಿಸ್ ನೆಲೆಗಳ ಮೇಲೆ ನಿರಂತರ ಬಾಂಬ್ ದಾಳಿ ನಡೆಯುತ್ತಿದ್ದು, ಶನಿವಾರ ನಡೆದ ಡ್ರೋನ್ ದಾಳಿಯಲ್ಲಿ ಒಟ್ಟು 7 ಜನ ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ಮಾಧ್ಯಮಗಳು ಹೇಳಿವೆ. ಇದರಲ್ಲಿ ಇಬ್ಬರು ಕರ್ನಾಟಕದ ಕಾಸರಗೋಡಿನವರಾಗಿದ್ದಾರೆ.[ಐಸಿಸ್ ನಂಟು, ಕಾಸರಗೋಡಿನ ವ್ಯಕ್ತಿ ದೆಹಲಿಯಲ್ಲಿ ಬಂಧನ]
ಹಫೀಸುದ್ದೀನ್ ಮೊದಲು ಕೊಲ್ಲಿ ರಾಷ್ಟ್ರಗಳಲ್ಲಿ ಉದ್ಯೋಗದಲ್ಲಿದ್ದ. ಉತ್ತಮ ಸಂಬಳವನ್ನೂ ಪಡೆಯುತ್ತಿದ್ದ ಎನ್ನಲಾಗಿದೆ. ಆದರೆ ರಜೆಗೆಂದು ಊರಿಗೆ ಬಂದಿದ್ದವ ಅಬ್ದುಲ್ ರಶೀದ್ ಎಂಬಾತನ ಸಂಪರ್ಕಕ್ಕೆ ಬಂದು ಐಸಿದ್ ಉಗ್ರ ಸಂಘಟನೆ ಸೇರಿದ್ದ.
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications