ಸೌದಿಯ ಕುರಿಮಂದೆಯಲ್ಲಿ ಸಿಕ್ಕಿಕೊಂಡ ಇಬ್ಬರು ಮಂಗಳೂರಿಗರು!
ಉತ್ತಮ ಉದ್ಯೋಗದ ಕನಸು ಹೊತ್ತು ಸೌದಿ ಅರೇಬಿಯಾಗೆ ತೆರಳಿದ್ದ ಮಂಗಳೂರಿನ ದಾಮೋದರ ಶೆಟ್ಟಿಗಾರ್ ಹಾಗೂ ಪುನೀತ್ ಜಯರಾಜ್ ಮೋಸಹೋಗಿ ಕುರಿ ಫಾರ್ಮ್ ಒಂದರಲ್ಲಿ ಕೆಲಸ ನಿರ್ವಹಿಸುವಂತಾಗಿದೆ!
ಮಂಗಳೂರು : ಆಟೋ ಸ್ಪ್ರೇ ಪೈಂಟರುಗಳಾಗಿ ಕೆಲಸ ನಿರ್ವಹಿಸಲು ಕಳೆದ ವರ್ಷ ಡಿಸೆಂಬರ್ ತಿಂಗಳಲ್ಲಿ ಸೌದಿ ಅರೇಬಿಯಾಗೆ ಹಲವು ಕನಸುಗಳನ್ನು ಹೊತ್ತು ತೆರಳಿದ್ದ ಗಂಜಿಮಠದ ಗಾಂಧಿನಗರ ನಿವಾಸಿ ದಾಮೋದರ ಶೆಟ್ಟಿಗಾರ್ (31) ಹಾಗೂ ಮುಲ್ಕಿಯ ಪುನೀತ್ ಜಯರಾಜ್ (25) ಮೋಸಹೋಗಿ ಕುರಿ ಫಾರ್ಮ್ ಒಂದರಲ್ಲಿ ಕೆಲಸ ನಿರ್ವಹಿಸುವಂತಾಗಿದೆ!
ಮೋಸ ಹೋಗಿರುವ ಈ ಇಬ್ಬರೂ ಈಗ ತಮ್ಮ ತವರು ದೇಶಕ್ಕೆ ಮರಳಲು ಸಹಾಯ ಮಾಡುವಂತೆ ಅಲ್ಲಿನ ಭಾರತೀಯ ದೂತಾವಾಸ ಕಚೇರಿಗೆ ಮನವಿ ಮಾಡಿದ್ದಾರೆ.[ಅಪರಿಚಿತರಿಂದ 40,000 ರೂ. ಡ್ರಾ, ಪ್ರಧಾನಿಗೆ ಮಂಗಳೂರಿಗನ ಮೊರೆ]

ಇಬ್ಬರೂ ಕುರಿ ಫಾರ್ಮಿನಲ್ಲಿ ಬಿಸಿಲಿನ ತಾಪಕ್ಕೆ ಬಸವಳಿದಿರುವ ಹೊರತಾಗಿ ಉಪಾಯವಿಲ್ಲದೆ ದುಡಿಯುತ್ತಿದ್ದಾರೆ. ಅಲ್ಲಿ ಅವರಿಗೆ ಆಹಾರ ಒದಗಿಸಲಾಗುತ್ತಿದೆಯಾದರೂ ಇಲ್ಲಿಯ ತನಕ ವೇತನ ನೀಡಲಾಗಿಲ್ಲವೆಂದೂ ದೂರಲಾಗಿದೆ.
ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಆನ್ಲೈನ್ ದೂರು ಸಲ್ಲಿಕೆ ವ್ಯವಸ್ಥೆಯ ಮೂಲಕ ಭಾರತೀಯ ದೂತಾವಾಸಕ್ಕೆ ಎಪ್ರಿಲ್ 4ರಂದು ಇಬ್ಬರೂ ದೂರು ದಾಖಲಿಸಿ ತಮ್ಮ ಬವಣೆಯನ್ನು ವಿವರಿಸಿದ್ದಾರೆ. ಉದ್ಯೋಗ, ವೀಸಾ ಮುಂತಾದವುಗಳಿಗೆ ಇಬ್ಬರೂ ತಮ್ಮ ಏಜಂಟರಿಗೆ ತಲಾ ರೂ 78,000 ನೀಡಿದ್ದರೆಂದೂ ತಿಳಿದುಬಂದಿದೆ.

ಈ ಬಗ್ಗೆ ಏಜನ್ಸಿಗೆ ದೂರಿದ್ದರೂ ಬೇಗನೇ ಸೂಕ್ತ ಉದ್ಯೋಗ ಒದಗಿಸಲಾಗುವುದು ಎಂದು ಹೇಳುತ್ತಿದ್ದಾರೆಯೇ ವಿನಹ ಏನೂ ಮಾಡುತ್ತಿಲ್ಲ ಎಂದು ಇಬ್ಬರು ಯುವಕರೂ ಹೇಳುತ್ತಾರೆ. ಸಮಸ್ಯೆ ಸಾಲದೆಂಬಂತೆ ಅವರ ಪಾಸ್ ಪೋರ್ಟುಗಳನ್ನು ಅವರ ವೀಸಾ ಸ್ಪಾನ್ಸರ್ ವಶಪಡಿಸಿಕೊಂಡಿದ್ದಾರೆನ್ನಲಾಗಿದೆ.
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications