ಪೋಳ್ಯ ಮನೆ ಸ್ಫೋಟ ಪ್ರಕರಣ: ಮತ್ತೆರಡು ಕಚ್ಚಾ ಬಾಂಬ್ ಗಳು ಪತ್ತೆ
ಮಂಗಳೂರು, ಅಕ್ಟೋಬರ್. 16: ಪುತ್ತೂರು ತಾಲೂಕಿನ ಕಬಕ ಸಮೀಪದ ಪೋಳ್ಯ ಎಂಬಲ್ಲಿ ಬಾಂಬ್ ಅಳವಡಿಸಿ ಮನೆ ಸ್ಫೋಟಿಸಲು ಯತ್ನಿಸಿದ ಪ್ರಕರಣವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿ ತನಿಖೆ ಚುರುಕುಗೊಳಿಸಿದ್ದಾರೆ.
ಈ ನಡುವೆ ಪರಿಶೀಲನೆ ವೇಳೆ ಪೊಲೀಸರು ಮನೆಗೆ ಅಳವಡಿಸಿ ಸ್ಫೋಟಿಸದ ಮತ್ತೆರಡು ಜೀವಂತ ಕಚ್ಚಾ ಬಾಂಬ್ ಪತ್ತೆ ಹಚ್ಚಿದ್ದಾರೆ.
ಪೋಳ್ಯದಲ್ಲಿ ಸಿನಿಮೀಯ ಶೈಲಿಯಲ್ಲಿ ಬಾಂಬ್ ಸ್ಫೋಟಿಸಿದ ದುಷ್ಕರ್ಮಿ, ಮಹಿಳೆ ಗಂಭೀರ
ಈ ಹಿನ್ನೆಲೆಯಲ್ಲಿ ಘಟನೆ ನಡೆದ ಸ್ಥಳಕ್ಕೆ ಎಫ್ ಎಸ್ಎಲ್ ತಂಡ ಹಾಗೂ ಶ್ವಾನದಳ ಶೋಧಕಾರ್ಯ ನಡೆಸಿದೆ. ಈ ಸ್ಫೋಟಕಗಳನ್ನು ಜೆಲ್ ಬೇಸ್ಡ್ ಅಮೋನಿಯಂ ನೈಟ್ರೇಟ್ ನಿಂದ ತಯಾರಿಸಲಾಗಿದೆ ಎಂದು ಎಫ್ ಎಸ್ಎಲ್ ತಂಡದ ಆಧಿಕಾರಿಗಳು ತಿಳಿಸಿದ್ದಾರೆ.
ರಾಯಚೂರು ನಿಗೂಢ ಸ್ಫೋಟ: ಬಾಂಗ್ಲಾ ರಾಸಾಯನಿಕ ಕಾರಣ
ಸೋಮವಾರ ತಡ ರಾತ್ರಿ ಸ್ಫೋಟ ಸಂಭವಿಸಿದ್ದು, ನಾರಾಯಣ ಪ್ರಸಾದ್ ಅವರ ಮನೆಯಲ್ಲಿ ಸುಮಾರು 3 ತಿಂಗಳ ಹಿಂದೆ ಕೆಲಸಕ್ಕೆ ಇದ್ದ ಬಾಬು ಯಾನೆ ಬಾಲು ಈ ಕೃತ್ಯ ಎಸಗಿದ್ದಾನೆ ಎಂದು ಶಂಕಿಸಲಾಗಿದೆ. ಕೆಲಸಕ್ಕಿದ್ದ ಬಾಬು ವನ್ನು 3 ತಿಂಗಳ ಹಿಂದೆ ನಾರಾಯಣ್ ಪ್ರಸಾದ್ ಕೆಲಸದಿಂದ ತೆಗೆದು ಹಾಕಿದ್ದರು .
ಆ ದ್ವೇಷದಿಂದ ಬಾಬು ಈ ಕೃತ್ಯವನ್ನು ಎಸಗಿರುವ ಬಗ್ಗೆ ಶಂಕೆಯಿದ್ದು, ಪರಾರಿಯಾಗಿರುವ ಆರೋಪಿಯ ಪತ್ತೆಗೆ ಪೊಲೀಸ್ ಅಧಿಕಾರಿಗಳು ವಿಶೇಷ ತಂಡವನ್ನು ರಚಿಸಿದ್ದಾರೆ.