ಮಂಗಳೂರಲ್ಲಿ ಕಾರಿನ ಗಾಜು ಒಡೆದ್ರು, 5 ಲಕ್ಷ ದೋಚಿದ್ರು
ಮಂಗಳೂರು, ಅಕ್ಟೋಬರ್, 16 : ಪಾರ್ಕ್ ಮಾಡಿದ್ದ ಕಾರಿನ ಗಾಜು ಒಡೆದು ಐದು ಲಕ್ಷ ರೂ. ಕಳವು ಮಾಡಿದ ಘಟನೆ ಅಕ್ಡೋಬರ್ 15ರ ಗುರುವಾರದಂದು ಬೆಳಗಿನ ವೇಳೆಯಲ್ಲಿ ಜನನಿಬಿಡ ಪ್ರದೇಶವಾದ ಮಂಗಳೂರಿನ ಕೆ.ಎಸ್.ರಾವ್ ರಸ್ತೆ ಬಳಿ ಈ ಘಟನೆ ನಡೆದಿದೆ.
ಬಂಟ್ವಾಳ ಮೂಲದ ವಕೀಲ ಅರುಣ್ ಶೆಟ್ಟಿ ಐದು ಲಕ್ಷ ಕಳೆದುಕೊಂಡ ವ್ಯಕ್ತಿ. ಇವರು ಕೆ.ಎಸ್. ರಾವ್ ರಸ್ತೆಯಲ್ಲಿರುವ ಎಕ್ಸೆಲ್ ಮಾಲ್ ನ ಜೋಯ್ ಅಲುಕ್ಕಾಸ್ ಚಿನ್ನಾಭರಣ ಮಳಿಗೆ ಮುಂಭಾಗ ತಮ್ಮ ಕಾರನ್ನು ಪಾರ್ಕ್ ಮಾಡಿದ್ದರು. ಈ ಸಮಯದಲ್ಲಿ ಕಳ್ಳರು ತಮ್ಮ ಕೈಚಳಕ ಪ್ರದರ್ಶಿಸಿದ್ದಾರೆ.[ಬೆಂಗಳೂರು: ಉದ್ಯಮಿಗೆ ಕಾರ್ ಬಾನೆಟ್ ತೋರಿಸಿ 15 ಲಕ್ಷ ದೋಚಿದ!]
ಯಾರು ಇಲ್ಲದ ಸಮಯಕ್ಕಾಗಿ ಹೊಂಚು ಹಾಕುತ್ತಿದ್ದ, ಬೈಕಿನಲ್ಲಿ ಬಂದ ಇಬ್ಬರು ಖದೀಮರು ಕಾರಿನ ಹಿಂದಿನ ಬಾಗಿಲ ಗಾಜು ಒಡೆದು 5 ಲಕ್ಷ ನಗದನ್ನು ದೋಚಿ ಕ್ಷಣ ಮಾತ್ರದಲ್ಲಿ ಪರಾರಿಯಾಗಿದ್ದಾರೆ. ಕಳ್ಳರ ಜಾಲಕ್ಕಾಗಿ ತೀವ್ರ ಶೋಧ ಕೈಗೊಂಡಿದ್ದಾರೆ.[ಗಾಡಿ ಪಂಚರ್ ಎಂದು ಕೆಳಕ್ಕೆ ಬಗ್ಗಿದರೆ 15ಲಕ್ಷ ರು. ಮಂಗಮಾಯ!]
ಈ ಪ್ರಕರಣ ನಗರದ ಬಂದರು ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದು, ಪೊಲೀಸರು ಜೋಯ್ ಅಲುಕ್ಕಾಸ್ ನಲ್ಲಿ ಅಳವಡಿಸಲಾಗಿರುವ ಸಿ.ಸಿ ಕ್ಯಾಮರದ ಸಹಾಯದಿಂದ ಕಳವು ಪ್ರಕರಣದ ಬಗ್ಗೆ ದಾಖಲೆಗಳನ್ನು ಸಂಗ್ರಹಿಸಿದ್ದಾರೆ. ಕೆಲವು ದಿನಗಳಲ್ಲಿ ಕಳ್ಳರನ್ನು ಪತ್ತೆ ಮಾಡುವ ಭರವಸೆ ನೀಡಿದ್ದಾರೆ.