ಕಾಸರಗೋಡು: ರೈಲು ಡಿಕ್ಕಿಯಾಗಿ ಮಗು ಸೇರಿ ಮೂವರ ಸಾವು
ಮಂಗಳೂರು, ಜನವರಿ 31: ಹಳಿ ದಾಟುತ್ತಿದ್ದ ವೇಳೆ ರೈಲು ಡಿಕ್ಕಿ ಹೊಡೆದು ಇಬ್ಬರು ಮಹಿಳೆಯರು ಸೇರಿದಂತೆ ಮೂರು ವರ್ಷದ ಮಗು ಸಾವನ್ನಪ್ಪಿದ ದಾರುಣ ಘಟನೆ ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರ ರೈಲು ನಿಲ್ದಾಣ ಬಳಿ ನಡೆದಿದೆ.
ಮೃತಪ್ಟವರನ್ನು ಪೊಸೋಟ್ ನಿವಾಸಿಗಳಾದ ಅಮಿನಾ (45) ಆಯಿಷಾ (42) ಮತತ್ಉ ಮೂರು ವರ್ಷದ ಮಗು ತಾಮಿಲ್ ಎಂದು ಗುರುತಿಸಲಾಗಿದೆ.
ಮಂಜೇಶ್ವರದ ಮುಖ್ಯ ರಸ್ತೆಯಿಂದ ಇನ್ನೊಂದು ರಸ್ತೆಗೆ ತೆರಳಬೇಕಾದರೆ ರೈಲ್ವೇ ಹಳಿಗಳನ್ನು ದಾಟಲೇ ಬೇಕು. ಹೀಗಾಗಿ ಎಂದಿನಂತೆ ಇಂದೂ ಸ್ಥಳೀಯರು ರೈಲ್ವೇ ಹಳಿ ದಾಟುತ್ತಿದ್ದರು. ಈ ವೇಳೆ ಮಂಜೇಶ್ವರ ರೈಲು ನಿಲ್ದಾಣದ ಬಳಿ ಇಬ್ಬರು ಮಹಿಳೆಯರು ಮತ್ತು ಮಗು ಹಳಿ ದಾಟುತ್ತಿತ್ತು. ಈ ಸಂದರ್ಭ ಮಂಗಳೂರು ನಿಂದ ಕಾಸರಗೋಡು ಕಡೆ ತೆರಳುತ್ತಿದ್ದ ರೈಲು ಇವರಿಗೆ ಡಿಕ್ಕಿ ಹೊಡೆದಿದೆ.

ಒಂದು ರೈಲು ತೆರಳಿದ ನಂತರ ಇವರು ಹಳಿ ದಾಟುತ್ತಿದ್ದರು. ವೇಳೆ ಮತ್ತೊಂದು ಹಳಿಯಲ್ಲಿ ರೈಲು ವೇಗವಾಗಿ ಬಂದಿದ್ದು ಈ ಮೂವರಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಮಗು ಸೇರಿದಂತೆ ಮಹಿಳೆಯರಿಬ್ಬರ ದೇಹ ಸಂಪೂರ್ಣ ನಜ್ಜುಗುಜ್ಜಾಗಿದೆ.

ರೈಲ್ವೇ ಹಳಿ ದಾಟಲು ಓವರ್ ಬ್ರಿಡ್ಜ್ ಆಗಬೇಕೆಂದು ಸ್ಥಳೀಯರು ಹಲವಾರು ವರ್ಷಗಳಿಂದ ಒತ್ತಾಯಿಸುತ್ತಿದ್ದರೂ ಇಲ್ಲಿಯ ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದ ಜನರ ಬೇಡಿಕೆ ಈವರೆಗೆ ಈಡೇರಿರಲಿಲ್ಲ.ಇದೀಗ ಸರ್ಕಾರದ ನಿರ್ಲಕ್ಷ್ಯದಿಂದ ಮೂರು ಜನರು ಪ್ರಾಣ ಕಳೆದುಕೊಂಡಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications