ಕಾಂಗ್ರೆಸ್ ನಾಯಕರನ್ನು ಕುತಂತ್ರದ ಮೂಲಕ ಬಂಧಿಸುವ ಕೆಲಸ ನಡೆಯುತ್ತಿದೆ - ಯು.ಟಿ.ಖಾದರ್
ಮಂಗಳೂರು, ಆಗಸ್ಟ್ 31: "ಡಿ.ಕೆ.ಶಿವಕುಮಾರ್ ಅವರನ್ನು ಇಡಿ ಹಾಗೂ ಆದಾಯ ತೆರಿಗೆ ಇಲಾಖೆ ಮೂಲಕ ಬಂಧಿಸುವ ಷಡ್ಯಂತ್ರ ನಡೆಯುತ್ತಿದೆ. ಕಾಂಗ್ರೆಸ್ ನಾಯಕರನ್ನು ಕುತಂತ್ರದಿಂದ ಬಂಧಿಸುವ ಕೆಲಸ ಮಾಡಲಾಗುತ್ತಿದೆ" ಎಂದು ಶಾಸಕ ಯು.ಟಿ.ಖಾದರ್ ಆರೋಪಿಸಿದ್ದಾರೆ.
ಮಂಗಳೂರಿನಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, "ಕಾನೂನಾತ್ಮಕವಾಗಿ ಡಿಕೆಶಿ ಅವರದ್ದೇ ರೀತಿ ಹೋರಾಟ ಮಾಡುತ್ತಾರೆ. ಡಿಕೆಶಿ ಜತೆ ನಾವಿದ್ದೇವೆ. ಕಾನೂನು ಹೋರಾಟದಲ್ಲಿಯೂ ಅವರು ಜಯಗಳಿಸುವ ವಿಶ್ವಾಸ ಇದೆ" ಎಂದರು.
"ಯುಪಿಎ ಸರಕಾರ ಆಡಳಿತದಲ್ಲಿದ್ದಾಗ ಆರ್ಬಿಐನಲ್ಲಿ 3.90 ಲಕ್ಷ ಕೋಟಿ ರೂಪಾಯಿ ಹಣ ಆರ್ಬಿಐನಲ್ಲಿತ್ತು. ಅದರಲ್ಲಿ 1.76 ಲಕ್ಷ ಕೋಟಿ ಹಣವನ್ನು ಕೇಂದ್ರ ಪಡೆದಿದೆ. ದೇಶಕ್ಕಾಗಿ ನಾವು ಈ ರೀತಿ ಮಾಡುತ್ತಿದ್ದೇವೆ ಎಂದು ಹೇಳಬಹುದು. ಆದರೆ ಪಾರದರ್ಶಕ ಆಡಳಿತದ ಬಗ್ಗೆ ಮಾತನಾಡುವ ಕೇಂದ್ರ ಸರ್ಕಾರ ಈ ಹಣವನ್ನು ಯಾಕಾಗಿ ಪಡೆದಿದೆ ಎಂಬುದನ್ನು ಜನಸಾಮಾನ್ಯರಿಗೆ ತಿಳಿಸಬೇಕು. ದೇಶದ ಆರ್ಥಿಕ ಪರಿಸ್ಥಿತಿ ಚಿಂತಾಜನಕವಾಗಿದ್ದು, ಇಂತಹ ಪರಿಸ್ಥಿತಿಯಲ್ಲಿ ಹೂಡಿಕೆಗೆ ಮುಂದಾಗುವವರು ಹಿಂದೇಟು ಹಾಕುತ್ತಾರೆ" ಎಂದು ಹೇಳಿದರು.
"ರಾಜ್ಯದ ಪ್ರವಾಹ ಪರಿಸ್ಥಿತಿಯ ಸಂದರ್ಭ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಭೇಟಿ ನೀಡಿ ಸಂತೈಸುತ್ತಾರೆ ಎಂದು ಇಲ್ಲಿನ ಸಂತ್ರಸ್ತರು ಕಾಯುತ್ತಿದ್ದರೆ, ಅವರು ಭೂತಾನ್ನ ಮಕ್ಕಳ ಜತೆ ಆಡುತ್ತಿರುವ ವರದಿ, ಚಿತ್ರಗಳು ಪತ್ರಿಕೆಗಳಲ್ಲಿ ಪ್ರಕಟವಾಗುತ್ತದೆ. ಇದೆಂತಹ ವಿಪರ್ಯಾಸ" ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಇದೇ ಸಂದರ್ಭ, "ಕರಾವಳಿಯಲ್ಲಿ ಉಗ್ರರು ನುಸುಳಿದ್ದಾರೆಂಬ ಮಾಹಿತಿ ಹರಿದಾಡುತ್ತಿದೆ. ಈ ಬಗ್ಗೆ ಉಡುಪಿ ಎಸ್ಪಿ ಕೇಳಿದರೆ ಮಾಹಿತಿ ಇಲ್ಲ. ಕರಾವಳಿ ಪಡೆಗೂ ಮಾಹಿತಿ ಇಲ್ಲ. ಬೀಟ್ ಪೊಲೀಸರು ಈ ಕುರಿತಾದ ಕರಪತ್ರ ಅಂಟಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಪೊಲೀಸ್ ವರಿಷ್ಠರಿಗೇ ಮಾಹಿತಿ ಇಲ್ಲದೆ ನೋಟೀಸು ಅಂಟಿಸುವ ಅಧಿಕಾರ ಬೀಟ್ ಪೊಲೀಸರಿಗೆ ನೀಡಿದವರು ಯಾರು? ಈ ಬಗ್ಗೆ ತನಿಖೆಯಾಗಬೇಕು" ಎಂದು ಕಿಡಿಕಾರಿದರು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications