ಗೋಲಿಬಾರ್ಗೆ ಯು ಟಿ ಖಾದರ್ ನೇರ ಹೊಣೆ; ಬಿ ಎಲ್ ಸಂತೋಷ್
ಮಂಗಳೂರು, ಡಿಸೆಂಬರ್ 20: ಪೌರತ್ವ ತಿದ್ದುಪಡಿ ಕಾನೂನು ವಿರೋಧಿಸಿ ನಿನ್ನೆ ಮಂಗಳೂರಿನಲ್ಲಿ ನಡೆದ ಗೋಲಿಬಾರ್ಗೆ ಮಾಜಿ ಸಚಿವ ಯು ಟಿ ಖಾದರ್ ನೇರ ಹೊಣೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೊಷ್ ಆರೋಪಿಸಿದ್ದಾರೆ.
ಈ ಕುರಿತು ಗುರುವಾರ ತಡರಾತ್ರಿ ಟ್ವೀಟ್ ಮಾಡಿರುವ ಅವರು, 'ಸಂವಿಧಾನ ಬದ್ದವಾಗಿ ಜಾರಿಗೆ ತಂದಿರುವ ಕಾಯ್ದೆಯನ್ನು ವಿರೋಧಿಸಿ, ಯು ಟಿ ಖಾದರ್ ಜನರು ರೊಚ್ಚಿಗೇಳಲು ಕಾರಣರಾಗಿದ್ದಾರೆ. ಅವರ ವಿರುದ್ಧ ಕಾನೂನಿನಡಿ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕು. ಖಾದರ್ ಹೇಳಿಕೆ ಪ್ರಚೋದನೆಗೆ ಕಾರಣವಾಗಿದೆ. ಹೀಗಾಗಿಯೇ ಪ್ರಾಣ ಹಾನಿಯಾಗಿದೆ. ಘಟನೆಗೆ ನೇರ ಹೊಣೆ ಅವರೇ. ದೇಶದ ಏಕತೆಗಾಗಿ ಪೌರತ್ವ ಕಾನೂನು ಬಂದಿದೆ. ಶಾಂತಿ ಕಾಪಾಡೋಣ' ಎಂದು ಟ್ವೀಟ್ ಮಾಡಿದ್ದಾರೆ.

ಬುಧವಾರ ಪೌರತ್ವ ತಿದ್ದುಪಡಿ ಕಾನೂನಿನ ಕುರಿತು ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುವಾಗ ಶಾಸಕ ಯು ಟಿ ಖಾದರ್, 'ಕಾನೂನು ಜಾರಿಗೊಳಿಸಿದರೆ ಕರ್ನಾಟಕ ಹೊತ್ತಿ ಉರಿಯುತ್ತೆ' ಎಂದು ಪ್ರಚೋದನಾತ್ಮಕ ಹೇಳಿಕೆ ನೀಡಿದ್ದರು. ಇದು ವ್ಯಾಪಕ ವಿವಾದ ಸೃಷ್ಟಿಸಿತ್ತು. ರಾಷ್ಟ್ರೀಯ ಪೌರತ್ವ ತಿದ್ದುಪಡಿ ಕಾನೂನು ವಿರೋಧಿಸಿ ಗುರುವಾರ ಮಂಗಳೂರಿನಲ್ಲಿ ನಿಷೇದಾಜ್ಞೆ ಇದ್ದರೂ ಹಲವು ಸಂಘಟನೆಗಳು ಪ್ರತಿಭಟನೆಗೆ ಕರೆ ಕೊಟ್ಟಿದ್ದವು. ಇದೇ ವೇಳೆ ಪ್ರತಿಭಟನೆ ಹಿಂಸೆಗೆ ತಿರುಗಿದಾಗ ಪೊಲೀಸರಿಂದ ನಡೆದ ಗೋಲಿಬಾರ್ ನಲ್ಲಿ ಮಂಗಳೂರಿನ ಇಬ್ಬರು ಮೃತಪಟ್ಟು, ಐವರು ಗಂಭೀರವಾಗಿ ಗಾಯಗೊಂಡಿದ್ದರು.
-
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಎಲೆಕ್ಷನ್ ಇವತ್ತೇ ನಡೆದರೆ ತಮಿಳುನಾಡು, ಕೇರಳಂ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಗೆಲುವು? ಸಮೀಕ್ಷೆ ನೀಡಿದ ಮಾಹಿತಿ ಇಲ್ಲಿದೆ -
ಟೀಂ ಇಂಡಿಯಾ ಕ್ರಿಕೆಟರ್ ಕುಲದೀಪ್ ಯಾದವ್ ಕೈಹಿಡಿದ ವಂಶಿಕಾ ಚಡ್ಡಾ ಯಾರು? -
Bengaluru: 1 ತಿಂಗಳು ಬದುಕೋಕೆ ಇಷ್ಟೊಂದು ಖರ್ಚಾಗುತ್ತಾ? ಯುವತಿಯ ಪೋಸ್ಟ್ ಕಂಡು ಬೆಚ್ಚಿಬಿದ್ದ ನೆಟ್ಟಿಗರು












Click it and Unblock the Notifications