ಚಪ್ಪಲಿಯಲ್ಲಿ ಹೊಡೆಯಬೇಕು, ಖಾದರ್ ಹೇಳಿಕೆ ವಿರುದ್ದ ತಿರುಗಿ ಬಿದ್ದ ಹಿಂದೂ ಸಂಘಟನೆಗಳು
ವಿವಾದಾತ್ಮಕ ಹೇಳಿಕೆ ನೀಡಿದ ಸಚಿವ ಖಾದರ್ ವಿರುದ್ಧ ಹಿಂದೂ ಸಂಘಟನೆ ಕಾರ್ಯಕರ್ತರು ತಿರುಗಿ ಬಿದ್ದಿದ್ದು, ಕೊಲ್ಯದಲ್ಲಿ ಕಾರ್ಯಕ್ರಮಕ್ಕೆ ಭೇಟಿ ನೀಡಲಿದ್ದ ಸಚಿವರ ವಿರುದ್ಧ ಘೋಷಣೆ ಕೂಗಿ, ಕರಿಬಾವುಟ ಪ್ರದರ್ಶಿಸಿ ಆಕ್ರೋಶ ವ್ಯಕ್ತಪಡಿಸಿದರು.
ಮಂಗಳೂರು: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಭೇಟಿ ವಿರೋಧಿಸಿದವರು, ಪಿಣರಾಯಿಯವರ ಚಪ್ಪಲಿಗೂ ಸಮಾನರಲ್ಲ. ದೇಶಕ್ಕೆ ಅಂಬೇಡ್ಕರ್ ನೀಡಿರುವ ಸಂವಿಧಾನವನ್ನು ಗೌರವಿಸದವರನ್ನು ಚಪ್ಪಲಿಯಲ್ಲಿ ಹೊಡೆಯಬೇಕು ಅಂತ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಯು. ಟಿ. ಖಾದರ್ ವಿವಾದಾತ್ಮಕ ಹೇಳಿಕೆ ನೀಡಿದ್ದರು.
ಇದೀಗ ವಿವಾದಾತ್ಮಕ ಹೇಳಿಕೆ ನೀಡಿದ ಸಚಿವ ಖಾದರ್ ವಿರುದ್ಧ ಹಿಂದೂ ಸಂಘಟನೆ ಕಾರ್ಯಕರ್ತರು ತಿರುಗಿ ಬಿದ್ದಿದ್ದಾರೆ. ಭಾನುವಾರ ಕೊಲ್ಯದಲ್ಲಿ ಕಾರ್ಯಕ್ರಮಕ್ಕೆ ಭೇಟಿ ನೀಡಲಿದ್ದ ಸಚಿವರ ವಿರುದ್ಧ ಘೋಷಣೆ ಕೂಗಿ, ಕರಿಬಾವುಟ ಪ್ರದರ್ಶಿಸಿ ಆಕ್ರೋಶ ವ್ಯಕ್ತಪಡಿಸಿದರು.[ಸಾರ್ವಜನಿಕ ಆಸ್ತಿ ನಷ್ಟವನ್ನು ಬಂದ್ ಕರೆ ಕೊಟ್ಟವರಿಂದಲೇ ವಸೂಲಿ: ರೈ]

ಕೊಲ್ಯ ಶಾರದಾ ಸಭಾ ಭವನದಲ್ಲಿ ಆಯೋಜಿಸಲಾಗಿದ್ದ ಪೌರ ಸನ್ಮಾನ ಕಾರ್ಯಕ್ರಮದಲ್ಲಿ ಸಚಿವ ಯು.ಟಿ.ಖಾದರ್ ಮುಖ್ಯ ಅತಿಥಿಯಾಗಿದ್ದರು. ಈ ವಿಚಾರ ತಿಳಿದ ಹಿಂದೂ ಸಂಘಟನೆಯ 100 ಕ್ಕೂ ಅಧಿಕ ಕಾರ್ಯಕರ್ತರು ಸಂಜೆ 5.30ರಿಂದ ಕಪ್ಪು ಬಾವುಟ ಹಿಡಿದು ಜಮಾಯಿಸಿದ್ದರು.[ಗಾಂಧಿ ಹತ್ಯೆಯನ್ನು ಸಂಭ್ರಮಿಸಿದವರಿಂದ ದೇಶಭಕ್ತಿ ಕಲಿಯಬೇಕಿಲ್ಲ: ಕೇರಳ ಸಿಎಂ]
ಎರಡು ಗಂಟೆಗಳವರೆಗೆ ರಸ್ತೆಬದಿಯೇ ಸಚಿವರ ಆಗಮನಕ್ಕಾಗಿ ಹಿಂದೂ ಸಂಘಟನೆ ಕಾರ್ಯಕರ್ತರು ಹಾಗೂ ಬಿಜೆಪಿ ಮುಖಂಡರು ಕಾದಿದ್ದಾರೆ. ಈ ವೇಳೆ ಸಚಿವ ಖಾದರ್ ಬೆಂಗಳೂರಿಗೆ ತೆರಳಿದ ವಿಚಾರ ತಿಳಿದು ಅವರ ವಿರುದ್ಧ ಘೋಷಣೆ ಕೂಗಿ ಬಂದ ದಾರಿಗೆ ಸುಂಕವಿಲ್ಲವೆಂದು ಸ್ಥಳದಿಂದ ತೆರಳಿದ್ದಾರೆ. ಸ್ಥಳಕ್ಕೆ ಉಳ್ಳಾಲ ಪೊಲೀಸರು ಭೇಟಿ ನೀಡಿ ಬಂದೋಬಸ್ತ್ ಏರ್ಪಡಿಸಿದ್ದರು.[ಸಂವಿಧಾನ ಗೌರವಿಸದವರನ್ನು ಚಪ್ಪಲಿಯಲ್ಲಿ ಹೊಡೆಯಬೇಕು -ಖಾದರ್]
ಇನ್ನು ಒನ್ ಇಂಡಿಯಾ ಕನ್ನಡಕ್ಕೆ ಪ್ರತಿಕ್ರಿಯಿಸಿದ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಯು ಟಿ ಖಾದರ್ , ಸಂವಿಧಾನಾತ್ಮಕವಾಗಿ ಆಯ್ಕೆಯಾದ ನೆರೆ ರಾಜ್ಯದ ಮುಖ್ಯಮಂತ್ರಿಗಳು, ಅದರಲ್ಲೂ 70 ವರ್ಷದ ಹಿರಿಯರು ಗೌರವಾನ್ವಿತ ಸ್ಥಾನದಲ್ಲಿರುವವರು ಜಿಲ್ಲೆಗೆ ಬರುವ ಸಂದರ್ಭದಲ್ಲಿ, ಗೊಂದಲ ಸೃಷ್ಟಿಸಿ ಜಿಲ್ಲೆಯ ಗೌರವ ಮತ್ತು ಸಂಸ್ಕೃತಿಗೆ ಧಕ್ಕೆಯಾದ ನೋವಿನಿಂದ ನನ್ನ ಭಾವನೆಗಳನ್ನು ಸ್ವಯಂ ಆಗಿ ವ್ಯಕ್ತಪಡಿಸಿದ್ದೇನೆ. ಇದು ಯಾರನ್ನೂ ಅವಮಾನ ಮಾಡುವ ಉದ್ದೇಶದಿಂದ ಮಾತನಾಡಿಲ್ಲ," ಎಂದು ಸ್ಪಷ್ಟಪಡಿಸಿದ್ದಾರೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications