ತುರ್ತು ನಿರ್ಗಮನ ದ್ವಾರ ಕಡ್ಡಾಯ ಆದೇಶ ಪಾಲನೆ
ಮಂಗಳೂರು, ಜೂ. 24 : ವೋಲ್ವೊ ಬಸ್ ದುರಂತದ ಬಳಿಕ ಎಚ್ಚೆತ್ತುಕೊಂಡಿದ್ದ ಸಾರಿಗೆ ಇಲಾಖೆ ಖಾಸಗಿ ಮತ್ತು ಸರ್ಕಾರಿ ಬಸ್ಸುಗಳಲ್ಲಿ ತುರ್ತು ನಿರ್ಗಮನ ದ್ವಾರ ಕಡ್ಡಾಯಗೊಳಿಸಿ ಆದೇಶ ಹೊರಡಿಸಿತ್ತು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಲ್ಲಾ ಬಸ್ಸುಗಳಿಗೆ ತುರ್ತು ನಿರ್ಗಮನ ದ್ವಾರ ಆಳವಡಿಸಲಾಗಿದೆ ಎಂದು ಸಾರಿಗೆ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಮಂಗಳೂರು ಪ್ರಾದೇಶಿಕ ಸಾರಿಗೆ ಅಧಿಕಾರಿ ಅಫ್ಜಲ್ ಅಹಮದ್ ಖಾನ್ ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಉಡುಪಿ ಮತ್ತು ಮಂಗಳೂರು ಜಿಲ್ಲೆಗಳಲ್ಲಿ ಖಾಸಗಿ ಮತ್ತು ಕೆಎಸ್ಆರ್ ಟಿಸಿ ಬಸ್ಸುಗಳಿಗೆ ತುರ್ತು ನಿರ್ಗಮನ ದ್ವಾರ ಆಳವಡಿಸಲಾಗಿದೆ ಎಂದು ಹೇಳಿದ್ದಾರೆ. [ಹೈದರಾಬಾದಿನ ಬಸ್ ದುರಂತದ ಚಿತ್ರಗಳು]

ಸಾರಿಗೆ ಇಲಾಖೆ ಬಸ್ಸುಗಳ ಸಂಚಾರದ ಮೇಲೆ ಕಣ್ಣಿಟ್ಟಿದ್ದು, ತುರ್ತು ನಿರ್ಗಮನ ದ್ವಾರವಿಲ್ಲದ ಬಸ್ಸುಗಳನ್ನು ವಶಕ್ಕೆ ಪಡೆಯಲಾಗುತ್ತದೆ ಎಂದು ಹೇಳಿದ್ದಾರೆ. ಸರ್ಕಾರ ನೀಡಿರುವ ಅಂತಿಮ ಗಡುವು ಏ.ಪ್ರಿಲ್ 30ರಂದು ಅಂತ್ಯಗೊಂಡಿದ್ದು, ತುರ್ತು ನಿರ್ಗಮನ ದ್ವಾರವಿಲ್ಲದ 35 ಬಸ್ಸುಗಳನ್ನು ವಶಪಡಿಸಿಕೊಂಡು ಮಾಲೀಕರಿಗೆ ಎಚ್ಚರಿಕೆ ನೀಡಲಾಗಿದೆ ಎಂದು ಅಹಮದ್ ಖಾನ್ ತಿಳಿಸಿದರು. [ಬಸ್ಸುಗಳಲ್ಲಿ ತುರ್ತುನಿರ್ಗಮನ ಕಡ್ಡಾಯ]
ಕೆಎಸ್ಆರ್ ಟಿಸಿ ವ್ಯವಸ್ಥಾಪಕ ನಿರ್ದೇಶಕ ಎನ್.ಮಂಜುನಾಥ್ ಪ್ರಸಾದ್ ಸಂಸ್ಥೆಯ ಎಲ್ಲಾ ಬಸ್ಸುಗಳಲ್ಲಿ ತುರ್ತು ನಿರ್ಗಮನ ದ್ವಾರವನ್ನು ಅಳವಡಿಸಲಾಗಿದೆ ಎಂದು ಹೇಳಿದ್ದಾರೆ. ಉಡುಪಿ ಮತ್ತು ಮಂಗಳೂರು ವ್ಯಾಪ್ತಿಯಲ್ಲಿನ ಸುಮಾರು 3000 ಬಸ್ಸುಗಳು ಈ ಆದೇಶವನ್ನು ಪಾಲನೆ ಮಾಡಿವೆ ಎಂದು ಕೆನರಾ ಬಸ್ ಮಾಲೀಕರ ಸಂಘದ ಅಧ್ಯಕ್ಷ ರಾಜವರ್ಮ ಬಳ್ಳಾಲ್ ಹೇಳಿದ್ದಾರೆ.
2013ರಲ್ಲಿ ಆಂಧ್ರಪ್ರದೇಶದ ಮೆಹಬೂಬ್ ನಗರ ಮತ್ತು ಕರ್ನಾಟಕ ಹಾವೇರಿಯಲ್ಲಿ ವೋಲ್ವೋ ಬಸ್ಸುಗಳಿಗೆ ಬೆಂಕಿ ಹೊತ್ತಿಕೊಂಡು ಪ್ರಯಾಣಿಕರು ಸಾವನ್ನಪ್ಪಿದ ಬಳಿಕ ಖಾಸಗಿ ಮತ್ತು ಸರ್ಕಾರಿ ವೋಲ್ವೊ ಬಸ್ಸುಗಳಲ್ಲಿ ತುರ್ತು ನಿರ್ಗಮನ ದ್ವಾರವನ್ನು ಕಡ್ಡಾಯಗೊಳಿಸಿ ಸರ್ಕಾರ ಆದೇಶ ಹೊರಡಿಸಿತ್ತು.
-
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ












Click it and Unblock the Notifications