ಉಡುಪಿಯ ಸಿನಿಶೆಟ್ಟಿಗೆ ಮಿಸ್ ಇಂಡಿಯಾ ಗೌರವ-ಮನೆಯಲ್ಲಿ ಹಬ್ಬದ ವಾತಾವರಣ
ಉಡುಪಿ: ಕರಾವಳಿಯ ಮತ್ತೊಂದು ಬೆಡಗಿ ಮಿಸ್ ಇಂಡಿಯಾ ಗೌರವಕ್ಕೆ ಪಾತ್ರರಾಗಿದ್ದಾರೆ. ಉಡುಪಿ ಮೂಲದ ಸಿನಿ ಶೆಟ್ಟಿಗೆ ಮಿಸ್ ಇಂಡಿಯಾ ಅವಾರ್ಡ್ ಗೌರವ ಲಭ್ಯವಾಗಿದ್ದು, ಉಡುಪಿಯ ಸಿನಿ ಶೆಟ್ಟಿ ಕುಟುಂಬಸ್ಥರ ಮನೆಯಲ್ಲಿ ಸಂತಸದ ವಾತಾವರಣ ನಿರ್ಮಾಣ ಆಗಿದೆ.
ಸಿನಿ ಸಾಧನೆಯನ್ನು ನೆನಪಿಸಿ ಕುಟುಂಬ ಸಂತಸಪಟ್ಟಿದೆ. ಸಿನಿ ಶೆಟ್ಟಿ ಉಡುಪಿಯ ಕಾಪು ತಾಲೂಕಿನ ಇನ್ನಂಜೆ ಗ್ರಾಮದ ಮಡುಂಬು ನಿವಾಸಿಯಾಗಿದ್ದು, ಹುಟ್ಟಿ ಬೆಳೆದಿದ್ದೆಲ್ಲಾ ಮುಂಬೈಯಲ್ಲಿಯೇ. ಆದರೆ ವರ್ಷಕ್ಕೊಮ್ಮೆ ಹುಟ್ಟೂರಿಗೆ ಬಂದು ಕುಟುಂಬದವರೊಂದಿಗೆ ಬೆರೆಯುತ್ತಿದ್ದರು. ಸಿನಿ ಶೆಟ್ಟಿ ತಂದೆ ಸದಾನಂದ ಶೆಟ್ಟಿ ಎಂಬತ್ತರ ದಶಕದಲ್ಲಿ ಮುಂಬೈಗೆ ತೆರಳಿದ್ದರು..ಮುಂಬೈಯಲ್ಲಿ ಹೋಟೆಲ್ ಉದ್ಯಮ ಮಾಡುತ್ತಿರುವ ಸದಾನಂದ ಶೆಟ್ಟಿ ಯಶಸ್ವಿ ಉದ್ಯಮಿಯಾಗಿದ್ದಾರೆ.
ಮಹಾರಾಷ್ಟ್ರದಲ್ಲಿ ಹುಟ್ಟಿ ಬೆಳೆದಿರುವ ಸಿನಿ
ಕಲಿಕೆ, ನೃತ್ಯ, ಮಾಡಲಿಂಗ್ ನಲ್ಲೂ ಸಿನಿ ಪರಿಣಿತೆ. ನಮ್ಮ ಮನೆಯ ಮಗಳು ಮುಂದೊಂದು ದಿನ ವಿಶ್ವಸುಂದರಿಯೂ ಆಗುತ್ತಾಳೆ ಅಂತಾ ಸಿನಿ ಶೆಟ್ಟಿ ಅಜ್ಜ, ಅಜ್ಜಿ ಖುಷಿ ವ್ಯಕ್ತಪಡಿಸಿದ್ದಾರೆ. ಇನ್ನಂಜೆ ಮಡುಂಬು ವಿನ ಹುಡುಗಿ ಈಗ ಮಿಸ್ ಇಂಡಿಯಾ ಬೆಡಗಿ ಆಗಿರೋದು ಮನೆಯಲ್ಲಿ ಹಬ್ಬದ ವಾತವರಣ ಮೂಡಿಸಿದೆ. ಕರ್ನಾಟಕವನ್ನು ಪ್ರತಿನಿಧಿಸಿ ಮಿಸ್ ಇಂಡಿಯಾ ಆಗಿ ಹೊರಹೊಮ್ಮಿರುವ ಸಿನಿ ಶೆಟ್ಟಿ,ಈಗಲೂ ನಿರಂತರವಾಗಿ ಅಜ್ಜ-ಅಜ್ಜಿ ಜೊತೆ ನಿಕಟ ಸಂಪರ್ಕ ಹೊಂದಿದ್ದಾರೆ.

ಸಿನಿ ಶೆಟ್ಟಿ ಮಿಸ್ ಇಂಡಿಯಾ ಆಗಿ ಆಯ್ಕೆಯಾಗುತ್ತಿದ್ದಂತೆ ಕುಟುಂಬದಲ್ಲಿ ಸಂತಸ ಮೇಳೈಸಿದೆ. ಕಾಪುವಿನ ಮಡಂಬುವಿನಲ್ಲಿರುವ ಕುಟುಂಬಸ್ಥರಲ್ಲಿ ಎಲ್ಲಿಲ್ಲದ ಸಂತಸ ಮೂಡಿಸಿದೆ. ಸಿನಿ ಶೆಟ್ಟಿಯ ತಂದೆ ಸದಾನಂದ ಶೆಟ್ಟಿ ಕಾಪು ಇನ್ನಂಜೆಯ ಮಡುಂಬು ಮೂಲದವರು. ಊರಿನಲ್ಲಿ ಕೃಷಿ ಮಾಡುತ್ತಾ, ಸದಾನಂದ ಶೆಟ್ಟಿ ವಿದ್ಯಾಭ್ಯಾಸ ನಡೆಸಿದ್ದರು. 80ರ ದಶಕದಲ್ಲಿ ಶಿಕ್ಷಣ ಪೂರೈಸಿ ದೂರದ ಮುಂಬೈಗೆ ಸದಾನಂದ ಶೆಟ್ಟಿ ಹೋಗಿದ್ದಾರೆ. ಅವತ್ತಿನಿಂದಲೂ ಕಷ್ಟ ಸುಖ ಪ್ರತಿಯೊಂದು ಸಂದರ್ಭದಲ್ಲಿ ತನ್ನೂರಿಗೆ ಬರುತ್ತಾರೆ. ಈಗಲೂ ವರ್ಷಕ್ಕೆ ಮೂರ್ನಾಲ್ಕು ಸಲ ಕುಟುಂಬ ಸಮೇತ ತನ್ನ ಮನೆಯಾದ ಇನ್ನಂಜೆಗೆ ಸದಾನಂದ ಶೆಟ್ಟಿ ಬರುತ್ತಾರೆ.
ಸಿನಿ ಶೆಟ್ಟಿಯ ಸಾಧನೆ ಹಂಚಿಕೊಂಡ ಕುಟುಂಬ
ಸಿನಿ ಶೆಟ್ಟಿ ಮಿಸ್ ಇಂಡಿಯಾ ಆಗಿ ಆಯ್ಕೆ ಆಗಿರುವ ಬಗ್ಗೆ ಸಿನಿ ಅಜ್ಜ ರಾಮಣ್ಣ ಖುಷಿ ಹಂಚಿಕೊಂಡಿದ್ದಾರೆ. ಸಿನಿ ಶೆಟ್ಟಿ ಮಿಸ್ ಇಂಡಿಯಾ ಆಗಿ ಘೋಷಣೆಯಾಗುತ್ತಿದ್ದಂತೆ, ಸ್ವತಃ ಸದಾನಂದ ಶೆಟ್ಟರು ಊರಿಗೆ ಕರೆ ಮಾಡಿ ಈ ಸಂತೋಷದ ವಿಷಯ ಹಂಚಿಕೊಂಡಿದ್ದಾರೆ. ಸಿನಿ ಶೆಟ್ಟಿಯ ಪ್ರತಿಯೊಂದು ಸಾಧನೆಯನ್ನು ಮಡುಂಬುವಿನಲ್ಲಿರುವ ಆಕೆಯ ಬಂಧುಗಳು ಹತ್ತಿರದಿಂದ ಗಮನಿಸಿದ್ದಾರೆ. ವರ್ಷಕ್ಕೊಮ್ಮೆಯಾದರೂ ಆಕೆ ಊರಿಗೆ ಬಂದಾಗ, ಆಕೆ ತಮ್ಮೊಂದಿಗೆ ಒಡನಾಡುತ್ತಿದ್ದ ರೀತಿಯನ್ನು ನೆನಪಿಸಿಕೊಂಡು ಅಜ್ಜ ರಾಮಣ್ಣ ಶೆಟ್ಟಿ ಖುಷಿ ಪಟ್ಟಿದ್ದಾರೆ.

ತುಳು ಮಾತನಾಡುವ ಸಿನಿ ಶೆಟ್ಟಿ
ಸಿನಿ ಊರಿಗೆ ಬಂದಾಗಲೆಲ್ಲ ನಮ್ಮ ಮಕ್ಕಳೊಂದಿಗೆ ಆಟವಾಡಿ ಕಾಲಕಳೆಯುತ್ತಾಳೆ. ನಾನು ಮುಂಬಯಿ ಹೋದಾಗ ಸಿನಿ ಭರತನಾಟ್ಯ ಸ್ಪರ್ಧೆ ನೋಡಲು ಹೋಗಿದ್ದೆ. ಚೆನ್ನಾಗಿ ತುಳು ಮಾತನಾಡುವ ಸಿನಿ ಶೆಟ್ಟಿ, ಊರಿಗೆ ಬಂದಾಗೆಲ್ಲ ಇಲ್ಲಿನ ಕೃಷಿ,ಗದ್ದೆ, ದೈವದೇವರ ಕಾರ್ಯಕ್ರಮ,ಮನೆಯ ದನಗಳ ಜೊತೆಬೆರೆತು ಸಂತೋಷ ಪಡುತ್ತಾಳೆ. ಕೃಷಿ, ದನ, ಕರು ಇವೆಲ್ಲದರ ಜೊತೆಗೆ ಊರಲ್ಲಿ ಹೆಚ್ಚಿನ ಸಮಯ ಕಳೆಯುತ್ತಾಳೆ. ಭರತನಾಟ್ಯದಲ್ಲೂ ಸಿನಿ ಶೆಟ್ಟಿ ಪ್ರವೀಣೆಯಾಗಿದ್ದಾರೆ. ದೈವ ದೇವರ ಮೇಲೆ ಸಿನಿ ಶೆಟ್ಟಿಗೆ ಅಪಾರ ಭಕ್ತಿ ಇದೆ. ಸಿನಿ ತಂದೆ ತಾಯಿಗೂ ದೈವ ದೇವರ ಮೇಲೆ ಅಪಾರ ನಂಬಿಕೆ. ಸಿನಿ ತುಂಬಾ ಚೂಟಿ ಹುಡುಗಿ ಅವಳು ಇನ್ನು ಎತ್ತರಕ್ಕೆ ಬೆಳೆಯಲಿ ಅಂತಾ ಸಿನಿ ಅಜ್ಜ ರಾಮಣ್ಣ ಶೆಟ್ಟಿ ಹೇಳಿದ್ದಾರೆ.

ಇನ್ನು ಸಿನಿ ಅಜ್ಜಿ ಶಶಿಕಲಾ ಶೆಟ್ಟಿ ಮಾತನಾಡಿ, ಸಿನಿ ಶೆಟ್ಟಿ ಬಹಳ ಚೂಟಿ ಹುಡುಗಿ. ಚಿಕ್ಕಂದಿನಿಂದಲೂ ಆಕೆಯನ್ನು ಗಮನಿಸುತ್ತಿದ್ದೇವೆ. ಊರು, ಹಳ್ಳಿ, ಹಳ್ಳಿ ಯ ವಾತವರಣ ಎಲ್ಕವೂ ಆಕೆಗೆ ಇಷ್ಟ. ನಾವು ಮುಂಬೈಗೆ ಹೋದಾಗ ಬಹಳ ಆತ್ಮೀಯವಾಗಿ ನಮ್ಮ ಜೊತೆ ಇರುತ್ತಾಳೆ. ಅವಳು ಮಿಸ್ ವರ್ಲ್ಡ್ ಆಗುತ್ತಾಳೆ ಅಂತಾ ಹೇಳಿದ್ದಾರೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications