Get Updates
Get notified of breaking news, exclusive insights, and must-see stories!

ಆರ್ ಟಿಐ ಕಾರ್ಯಕರ್ತ ಅವ್ಯವಹಾರ ಬಯಲು ಮಾಡಿದ್ದಕ್ಕೆ ಉಜಿರೆ ಗ್ರಾಪಂ ಉಪಾಧ್ಯಕ್ಷೆ ಮಾಡಿದ್ದೇನು?

ಮಂಗಳೂರು, ಡಿಸೆಂಬರ್ 05: ಅಕ್ರಮ ಬಯಲಿಗೆಳೆದ ಸಿಟ್ಟಿಗೆ ಗ್ರಾಮ ಪಂಚಾಯತ್ ಉಪಾಧ್ಯಕ್ಷೆಯೊಬ್ಬರು ಆರ್‌ಟಿಐ ಕಾರ್ಯಕರ್ತನ ಮೇಲೆ ಬಿಸಿ ನೀರು ಎರಚಿ ಗಂಭೀರವಾಗಿ ಗಾಯಗೊಳಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.

ಉಜಿರೆಯ ಆರ್.ಟಿ.ಐ ಕಾರ್ಯಕರ್ತ ಬಾಲಸುಬ್ರಹ್ಮಣ್ಯ ಭಟ್(41) ಮೇಲೆ ಉಜಿರೆ ಗ್ರಾಮ ಪಂಚಾಯತ್ ನ ಉಪಾಧ್ಯಕ್ಷೆ ವಿನುತಾ ರಜತ್ ಗೌಡ ಬಿಸಿನೀರು ಎರಚಿದ್ದಾರೆ.

ಉಜಿರೆ ಗ್ರಾಮದ ಮಲೆಬೆಟ್ಟಿನಲ್ಲಿರುವ ವಿನುತಾ ರಜತ್ ಗೌಡ ಅವರ ಮನೆಯ ಅಂಗಳದಲ್ಲಿ ಮಂಗಳವಾರ ಸಂಜೆ ( ಡಿಸೆಂಬರ್ 04) ಈ ಘಟನೆ ನಡೆದಿದೆ. ಬಸವ ವಸತಿ ಯೋಜನೆಯಲ್ಲಿ ಅವ್ಯವಹಾರ ನಡೆದ ಬಗ್ಗೆ ಆರ್ ಟಿ ಐ ಕಾರ್ಯಕರ್ತ ಬಾಲಸುಬ್ರಹ್ಮಣ್ಯ ಭಟ್ ದೂರು ನೀಡಿದ್ದರು.

Ujire Panchayath VP splashed boiling water on RTI activist

ಯೋಜನೆಯಲ್ಲಿ ನಡೆದ ಅವ್ಯವಹಾರದ ಬಗ್ಗೆ ಆರ್.ಟಿ.ಐ ಮೂಲಕ ದಾಖಲೆಗಳನ್ನು ಪಡೆದಿದ್ದ ಬಾಲಸುಬ್ರಹ್ಮಣ್ಯ ಭಟ್‌ ರಾಜೀವ ಗಾಂಧಿ ವಸತಿ ನಿಗಮಕ್ಕೆ ದೂರು ನೀಡಿದ್ದರು. ಈ ಅವ್ಯವಹಾರದ ಬಗ್ಗೆ ತನಿಖೆಗೆ ಆಗಮಿಸಿದ್ದ ಅಧಿಕಾರಿಗಳ ಸಮ್ಮುಖದಲ್ಲೇ ಈ ಘಟನೆ ನಡೆದಿರುವುದು ತಿಳಿದು ಬಂದಿದೆ.

ಬೆಳ್ತಂಗಡಿ ತಾಲೂಕು ಪಂಚಾಯತ್ ಇ.ಓ ಕುಸುಮಾಧರ್ ಮುಂದೆ ಈ ಘಟನೆ ನಡೆದಿದ್ದು, ಗಂಭೀರವಾಗಿ ಗಾಯಗೊಂಡ ಬಾಲಸುಬ್ರಹ್ಮಣ್ಯ ಭಟ್ ಗೆ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪ್ರಕರಣ ದಾಖಲಿಸಲಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+