ಆರ್ ಟಿಐ ಕಾರ್ಯಕರ್ತ ಅವ್ಯವಹಾರ ಬಯಲು ಮಾಡಿದ್ದಕ್ಕೆ ಉಜಿರೆ ಗ್ರಾಪಂ ಉಪಾಧ್ಯಕ್ಷೆ ಮಾಡಿದ್ದೇನು?
ಮಂಗಳೂರು, ಡಿಸೆಂಬರ್ 05: ಅಕ್ರಮ ಬಯಲಿಗೆಳೆದ ಸಿಟ್ಟಿಗೆ ಗ್ರಾಮ ಪಂಚಾಯತ್ ಉಪಾಧ್ಯಕ್ಷೆಯೊಬ್ಬರು ಆರ್ಟಿಐ ಕಾರ್ಯಕರ್ತನ ಮೇಲೆ ಬಿಸಿ ನೀರು ಎರಚಿ ಗಂಭೀರವಾಗಿ ಗಾಯಗೊಳಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.
ಉಜಿರೆಯ ಆರ್.ಟಿ.ಐ ಕಾರ್ಯಕರ್ತ ಬಾಲಸುಬ್ರಹ್ಮಣ್ಯ ಭಟ್(41) ಮೇಲೆ ಉಜಿರೆ ಗ್ರಾಮ ಪಂಚಾಯತ್ ನ ಉಪಾಧ್ಯಕ್ಷೆ ವಿನುತಾ ರಜತ್ ಗೌಡ ಬಿಸಿನೀರು ಎರಚಿದ್ದಾರೆ.
ಉಜಿರೆ ಗ್ರಾಮದ ಮಲೆಬೆಟ್ಟಿನಲ್ಲಿರುವ ವಿನುತಾ ರಜತ್ ಗೌಡ ಅವರ ಮನೆಯ ಅಂಗಳದಲ್ಲಿ ಮಂಗಳವಾರ ಸಂಜೆ ( ಡಿಸೆಂಬರ್ 04) ಈ ಘಟನೆ ನಡೆದಿದೆ. ಬಸವ ವಸತಿ ಯೋಜನೆಯಲ್ಲಿ ಅವ್ಯವಹಾರ ನಡೆದ ಬಗ್ಗೆ ಆರ್ ಟಿ ಐ ಕಾರ್ಯಕರ್ತ ಬಾಲಸುಬ್ರಹ್ಮಣ್ಯ ಭಟ್ ದೂರು ನೀಡಿದ್ದರು.

ಯೋಜನೆಯಲ್ಲಿ ನಡೆದ ಅವ್ಯವಹಾರದ ಬಗ್ಗೆ ಆರ್.ಟಿ.ಐ ಮೂಲಕ ದಾಖಲೆಗಳನ್ನು ಪಡೆದಿದ್ದ ಬಾಲಸುಬ್ರಹ್ಮಣ್ಯ ಭಟ್ ರಾಜೀವ ಗಾಂಧಿ ವಸತಿ ನಿಗಮಕ್ಕೆ ದೂರು ನೀಡಿದ್ದರು. ಈ ಅವ್ಯವಹಾರದ ಬಗ್ಗೆ ತನಿಖೆಗೆ ಆಗಮಿಸಿದ್ದ ಅಧಿಕಾರಿಗಳ ಸಮ್ಮುಖದಲ್ಲೇ ಈ ಘಟನೆ ನಡೆದಿರುವುದು ತಿಳಿದು ಬಂದಿದೆ.
ಬೆಳ್ತಂಗಡಿ ತಾಲೂಕು ಪಂಚಾಯತ್ ಇ.ಓ ಕುಸುಮಾಧರ್ ಮುಂದೆ ಈ ಘಟನೆ ನಡೆದಿದ್ದು, ಗಂಭೀರವಾಗಿ ಗಾಯಗೊಂಡ ಬಾಲಸುಬ್ರಹ್ಮಣ್ಯ ಭಟ್ ಗೆ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪ್ರಕರಣ ದಾಖಲಿಸಲಾಗಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications