ಉಳ್ಳಾಲದಲ್ಲಿ ಸರಕಾರಿ ಆಸ್ಪತ್ರೆ ಕಟ್ಟಿಸಲು DYFI ಆಗ್ರಹ
ಮಂಗಳೂರು, ಡಿಸೆಂಬರ್, 14: ಮಂಗಳೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಸಮುದಾಯ ಆಸ್ಪತ್ರೆಗಳನ್ನು ಸ್ಥಾಪಿಸುವಂತೆ ಒತ್ತಾಯಿಸಿ ಡಿವೈ ಎಫ್ ಐ ಉಳ್ಳಾಲ ವಲಯ ಸಮಿತಿ ಆಗ್ರಹಿಸಿದೆ.
ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ನೇತೃತ್ವದಲ್ಲಿ ಮಂಗಳವಾರ ಉಳ್ಳಾಲದಲ್ಲಿ ಪ್ರತಿಭಟನೆ ನಡೆಯಿತು. ಈ ವೇಳೆ ಮಾತನಾಡಿದ ಅವರು,3 0, 000 ಜನಸಂಖ್ಯೆಗೆ ಒಂದು ಪ್ರಾಥಮಿಕ ಆರೋಗ್ಯ ಕೇಂದ್ರ ಎಂದು ರಾಜ್ಯ ಸರಕಾರ ಹೇಳುತ್ತಿದೆ.
ಆದರೆ, ಮಂಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು ಮೂರುವರೆ ಲಕ್ಷ ಜನಸಂಖ್ಯೆ ಇದೆ. ಆ ಪ್ರಕಾರ ಇಲ್ಲಿ ಕನಿಷ್ಠ 12 ಆರೋಗ್ಯ ಕೇಂದ್ರ ಇರಬೇಕಿತ್ತು. ಈಗ ನಮ್ಮ ಕ್ಷೇತ್ರದಲ್ಲಿ ಇರುವುದು ಕೇವಲ 5 ಸಾರ್ವಜನಿಕ ಆಸ್ಪತ್ರೆಗಳು ಮಾತ್ರ ಎಂದು ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಇನ್ನು 1 ಲಕ್ಷ ಜನಸಂಖ್ಯೆಗೆ 40 ಬೆಡ್ ಗಳುಳ್ಳ ಒಂದು ಸಮುದಾಯ ಆಸ್ಪತ್ರೆ ಬೇಕು ಎಂದು ಸರಕಾರ ಹೇಳಿದೆ. ಆದರೆ, ನಮ್ಮ ಈ ಕ್ಷೇತ್ರದಲ್ಲಿ ಒಂದೇ ಒಂದು ಸಮುದಾಯ ಆಸ್ಪತ್ರೆ ಇಲ್ಲ.
ಇದರಿಂದ ನಮ್ಮ ಭಾಗದಲ್ಲಿ ಸಾಲು-ಸಾಲು ಖಾಸಗಿ ಆಸ್ಪತ್ರೆಗಳು ತಲೆ ಎತ್ತಿವೆ. ಈ ಆಸ್ಪತ್ರೆಗಳು ಮೆಡಿಕಲ್ ಕಾಲೇಜ್ ನಡೆಸುವ ಉದ್ದೇಶದಿಂದ ಇದೇ ಹೊರತು ಜನರ ಸೇವೆ ಕೊಡುವ ಉದ್ದೇಶದಿಂದಲ್ಲ ಎಂದು ಆರೋಪಿಸಿದರು.
ಅಲ್ಲದೇ ಇಲ್ಲಿನ ಖಾಸಗಿ ಆಸ್ಪತ್ರೆಗಳು ಕಾನೂನಿನ ಯಾವುದೇ ನಿಯಮಗಳನ್ನು ಪಾಲಿಸದೆ ಜನರಿಂದ ಬೇಕಾಬಿಟ್ಟಿ ಹಣ ಸುಲಿಗೆ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ವಿವಿಧ ಬೇಡಿಕೆಗಳು: ಪ್ರತಿ ಗ್ರಾಮಗಳಲ್ಲೂ ಜನಸಂಖ್ಯೆಗೆ ಅನುಗುಣವಾಗಿ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸಬೇಕು. ಮಂಗಳೂರು ವಿಧಾನಸಭಾ ಕ್ಷೇತ್ರದ ಹೋಬಳಿ ಕೇಂದ್ರಗಳಲ್ಲಿ ಮೂರು ಸಮುದಾಯ ಆಸ್ಪತ್ರೆಗಳನ್ನು ನಿರ್ಮಿಸಬೇಕು.
ಖಾಸಗಿ ಆಸ್ಪತ್ರೆಗಳಲ್ಲಿ ದರಪಟ್ಟಿ ಪ್ರಕಟಿಸುವುದು, ರೋಗಿಯ ಕಡೆಯವರಿಗೆ ದರಪಟ್ಟಿ ನೀಡುವುದು ಮುಂತಾದ ನಿಯಮಗಳನ್ನು ಪಾಲಿಸುವಂತೆ ಸೂಕ್ತ ಕ್ರಮ ಕೈಗೊಳ್ಳಬೇಕು. ಜಿಲ್ಲಾ ಆರೋಗ್ಯ ಸೇವೆ ನಿಯಂತ್ರಣ ಪ್ರಾಧಿಕಾರದ ಸಭೆ ಕರೆಯಬೇಕು.
ಜಿಲ್ಲೆಯಲ್ಲಿ ಒಂದು ಸರಕಾರಿ ಮೆಡಿಕಲ್ ಕಾಲೇಜು ಸ್ಥಾಪಿಸಬೇಕೆಂದು ಸರಕಾರಕ್ಕೆ ಬೇಡಿಕೆಗಳನ್ನು ಮನವಿಯಲ್ಲಿ ಸಲ್ಲಿಸಿದರು.
-
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
ವೈಭವ್ ಸೂರ್ಯವಂಶಿ ಅದೃಷ್ಟದ ಮೇಲೆ ಸವಾರಿ ಮಾಡುತ್ತಿದ್ದಾರೆ: ಕೊಡಗಿನ ರಾಬಿನ್ ಉತ್ತಪ್ಪ ಎಚ್ಚರಿಕೆಯ ಸಲಹೆ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ












Click it and Unblock the Notifications