ಮಂಗಳೂರು: ಒಂದಲ್ಲ..ಎರಡಲ್ಲ..ಬರೋಬ್ಬರಿ 7 ಲಕ್ಷ ರೂ ವಿದ್ಯುತ್ ಬಿಲ್, ಮನೆ ಮಾಲೀಕ ತಬ್ಬಿಬ್ಬು!
ಮಂಗಳೂರು, ಜೂನ್ 15: ರಾಜ್ಯ ಸರ್ಕಾರ ಗೃಹ ಜ್ಯೋತಿ ಯೋಜನೆ ಅಡಿಯಲ್ಲಿ ಇನ್ನೂರು ಯುನಿಟ್ ವಿದ್ಯುತ್ ಉಚಿತ ಎಂದು ಘೋಷಿಸಿದೆ. ಈ ನಡುವೆ ಈ ತಿಂಗಳಿನಲ್ಲಿ ಬಂದ ವಿದ್ಯುತ್ ದರ ಯದ್ವಾತದ್ವಾವಾಗಿದೆ. ವಿಪರೀತ ವಿದ್ಯುತ್ ಬಿಲ್ ಬಂದಿದೆ ಎನ್ನುವ ದೂರುಗಳು ಕೇಳಿಬರುತ್ತಿದ್ದು, ಕೆಲವರು ಈ ದುಬಾರಿ ವಿದ್ಯುತ್ ಬಿಲ್ ಕಟ್ಟಲ್ಲ ಎಂದು ಪಟ್ಟುಹಿಡಿದಿದ್ದಾರೆ.
ಈ ಎಲ್ಲಾ ಬೆಳವಣಿಗೆಗಳ ನಡುವೆ ಮಂಗಳೂರಿನಲ್ಲಿ ಶಾಕಿಂಗ್ ಘಟನೆ ಬೆಳಕಿಗೆ ಬಂದಿದೆ. ಮಂಗಳೂರಿನ ಉಳ್ಳಾಲದ ವ್ಯಕ್ತಿಯೊಬ್ಬರ ಮನೆಗೆ ಒಂದಲ್ಲ ಎರಡಲ್ಲ ಬರೋಬ್ಬರಿ 7 ಲಕ್ಷ ರೂಪಾಯಿ ವಿದ್ಯುತ್ ಬಿಲ್ ಬಂದಿದೆ. ತಮ್ಮ ಊಹೆಗೂ ನಿಲುಕದ 7 ಲಕ್ಷ ರೂಪಾಯಿ ವಿದ್ಯುತ್ ಬಿಲ್ ಕಂಡು ಮನೆಯ ಮಾಲೀಕ ಹೌಹಾರಿದ್ದಾರೆ.

ಉಳ್ಳಾಲ ಬೈಲ್ ನಿವಾಸಿ ಸದಾಶಿವ ಆಚಾರ್ಯ ಎನ್ನುವವರ ಮನೆಗೆ 7,71,072 ರೂಪಾಯಿ ವಿದ್ಯುತ್ ಬಿಲ್ ಬಂದಿದೆ. ಪ್ರತೀ ತಿಂಗಳು 3,000 ರೂಪಾಯಿ ಒಳಗೆ ವಿದ್ಯುತ್ ಬಿಲ್ ಬರುತ್ತಿತ್ತು. ಅಂತೆಯೇ ಸದಾಶಿವ ಆಚಾರ್ಯ ಅವರ ಮನೆಗೆ ಈ ತಿಂಗಳು ಸಹ ಮೆಸ್ಕಾಂನ ಗುತ್ತಿಗೆ ಪಡೆದ ಸಂಸ್ಥೆಯ ಮೀಟರ್ ರೀಡರ್ ಆಗಮಿಸಿ ಬಿಲ್ ನೀಡಿದ್ದಾರೆ. ಆದರೆ ಬಿಲ್ನ ಮೊತ್ತ ಗಮನಿಸಿದ ಮನೆ ಮಾಲೀಕರಿಗೆ ವಿದ್ಯುತ್ ಶಾಕ್ ಹೊಡೆದಷ್ಟೇ ಶಾಕ್ ಆಗಿದೆ.
ಬರೋಬ್ಬರಿ 7 ಲಕ್ಷ ರೂಪಾಯಿ ವಿದ್ಯುತ್ ಬಿಲ್ ನೋಡಿದ ಸದಾಶಿವ ಆಚಾರ್ಯ ತಕ್ಷಣ ರೀಡರ್ ಬಳಿ ವಿಚಾರಿಸಿದ್ದಾರೆ. ಅಲ್ಲೇ ಇದ್ದ ಸಿಬ್ಬಂದಿ ಕಚೇರಿಗೆ ತೆರಳಿ ವಿಚಾರಿಸುವಂತೆ ತಿಳಿಸಿದ್ದಾರೆ. ಮನೆಯಲ್ಲಿ ಕೇವಲ 99,338 ಯೂನಿಟ್ ವಿದ್ಯುತ್ ಖರ್ಚಾಗಿದೆ, ಪ್ರತಿ ತಿಂಗಳು ಮೂರು ಸಾವಿರದಷ್ಟು ಬಿಲ್ ಬರುತ್ತಿತ್ತು ಎಂದು ಮೆಸ್ಕಾಂ ಕಚೇರಿಗೆ ಸದಾಶಿವ ಆಚಾರ್ಯ ದೂರು ನೀಡಿದ್ದಾರೆ.

ವಿದ್ಯುತ್ ಬಿಲ್ ರಶೀದಿಯಲ್ಲಿ 99,338 ಯೂನಿಟ್ ಖರ್ಚಾಗಿದ್ದು 7,71,072 ರೂಪಾಯಿ ಬಿಲ್ ನಮೂದಿಸಲಾಗಿತ್ತು. ಸದಾಶಿವ ಆಚಾರ್ಯ ಮೆಸ್ಕಾಂನ ಚೆಂಬುಗುಡ್ಡೆ ಶಾಖೆಗೆ ತೆರಳಿ ಮಾಹಿತಿ ನೀಡಿದ್ದು, ಅಧಿಕಾರಿಗಳು ತಕ್ಷಣ ಸ್ಪಂದಿಸಿ ಪರಿಷ್ಕೃತ ಬಿಲ್ ನೀಡಿದ್ದಾರೆ.
ಈ ಬಗ್ಗೆ ಉಳ್ಳಾಲ ಮೆಸ್ಕಾಂ ಉಪವಿಭಾಗದ ಕಾರ್ಯನಿರ್ವಾಹಕ ಅಭಿಯಂತರ ದಯಾನಂದ ಸ್ಥಳೀಯ ಮಾಧ್ಯಮಗಳೊಂದಿಗೆ ಮಾತನಾಡಿದ್ದು, 'ಏಜೆನ್ಸಿಗಳ ಮುಖಾಂತರ ವಿದ್ಯುತ್ ಬಿಲ್ ಕಲೆಕ್ಷನ್ ಮಾಡಲಾಗುತ್ತದೆ. ಬಿಲ್ ರೀಡರ್ ಎಡವಟ್ಟಿನಿಂದ ತಪ್ಪಾಗಿ ವಿದ್ಯುತ್ ಬಿಲ್ ಮುದ್ರಣ ಆಗಿದೆ. ಬಿಲ್ನಲ್ಲಿ ಲೋಪ ಕಂಡು ಬಂದರೆ ಅದನ್ನು ಗ್ರಾಹಕರಿಗೆ ಕೊಡುವಂತಿಲ್ಲ. ತಕ್ಷಣವೇ ಸದಾಶಿವ ಆಚಾರ್ಯ ಅವರ ಮನೆ ಬಾಗಿಲಿಗೆ 2,833 ರೂಪಾಯಿಗಳ ಬಿಲ್ ಪರಿಷ್ಕೃತ ಬಿಲ್ ತಲುಪಿಸಲಾಗಿದೆ' ಎಂದು ವಿವರಿಸಿದ್ದಾರೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications