ಗೂಂಡಾ ವರ್ತನೆಗೆ ಮುಗ್ಧ ಉಳ್ಳಾಲದ ವಿದ್ಯಾರ್ಥಿ ಬಲಿ, ಖಾಸಗಿ ಬಸ್ ಸಿಬ್ಬಂದಿ ಬಂಧನ
ಮಂಗಳೂರು, ಸೆಪ್ಟೆಂಬರ್, 19: ಮಂಗಳೂರಿನ ಖಾಸಗಿ ಬಸ್ಗಳ ಗೂಂಡಾ ವರ್ತನೆಗೆ ಮುಗ್ಧ ವಿದ್ಯಾರ್ಥಿಯೋರ್ವ ಬಲಿ ಆಗಿದ್ದಾರೆ. ನಾವೇನು ಮಾಡಿದರೂ ಏನೂ ಆಗಲ್ಲ ಅಂದುಕೊಂಡಿದ್ದ ಖಾಸಗಿ ಬಸ್ನವರು ಇದೀಗ ಪೊಲೀಸರ ಅತಿಥಿ ಆಗಿದ್ದಾರೆ.
ಮಂಗಳೂರಿನ ಉಳ್ಳಾಲದ ತ್ಯಾಗರಾಜ್, ಮಮತಾ ಕರ್ಕೇರ ಅವರ ಪುತ್ರ, 16 ವರ್ಷದ ಯಶರಾಜ್ ಸೆಪ್ಟೆಂಬರ್ 7ರಂದು ಖಾಸಗಿ ಸಿಟಿ ಬಸ್ನಲ್ಲಿ ಬರುತ್ತಿದ್ದ. ಉಳ್ಳಾಲದ ನೇತ್ರಾವತಿ ಸೇತುವೆಯ ಬಳಿ ಹೆದ್ದಾರಿಯಲ್ಲಿ ಬಾಲಕ ಯಶರಾಜ್ ಬಸ್ನಿಂದ ಕೆಳಗಡೆ ಬಿದ್ದಿದ್ದ. ಬಸ್ ತುಂಬಿದ್ದರಿಂದ ಬಾಲಕ ಫುಟ್ ಬೋರ್ಡ್ ಮೇಲೆ ನಿಂತಿದ್ದು, ಆಗ ಹೊರಗೆ ಬಿದ್ದಿದ್ದಾನೆ. ಪರಿಣಾಮ ಬಾಲಕ ಯಶರಾಜ್ ತಲೆಯ ಭಾಗಕ್ಕೆ ತೀವ್ರ ಗಾಯವಾಗಿದ್ದು, ಆತನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಂತಾಜನಕ ಸ್ಥಿತಿಯಲ್ಲಿದ್ದ ಯಶರಾಜ್ನನ್ನು ಬದುಕಿಸಲು ವೈದ್ಯರು ಶತ ಪ್ರಯತ್ನ ಮಾಡಿದ್ದಾರೆ. ಕೊನೆಗೆ ಕಳೆದ ಮಂಗಳವಾರ ಸಂಜೆ ಮೆದುಳು ನಿಷ್ಕ್ರಿಯ ಆಗಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಖಾಸಗಿ ಬಸ್ ಚಾಲಕ, ನಿರ್ವಾಹಕ ಅಂದರ್
ಮಗನನ್ನು ಕಳೆದುಕೊಂಡ ದುಃಖದ ನಡುವೆಯೂ ಹೆತ್ತವರು ಅಂಗಾಂಗ ದಾನ ಮಾಡಿದ್ದಾರೆ. ಮಗನ ಸಾವಿಗೆ ಕಾರಣವಾದ ಖಾಸಗಿ ಬಸ್ನವರ ವಿರುದ್ದ ಕ್ರಮಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಹಾಗೂ ಪೊಲೀಸರಿಗೆ ದೂರು ನೀಡಿದ್ದರು. ಮೃತ ಬಾಲಕನ ಪೋಷಕರ ದೂರಿನ ಮೇರೆಗೆ ಇಂದು ಬಸ್ನ ಚಾಲಕ, ನಿರ್ವಾಹಕನನ್ನು ಪೊಲೀಸರು ಬಂಧಿಸಿದ್ದಾರೆ.

KA 19 AA 0833 ನಂಬರ್ ಖಾಸಗಿ ಬಸ್ನ ಚಾಲಕ ಕಾರ್ತಿಕ್ ಶೆಟ್ಟಿ, ನಿರ್ವಾಹಕ ದಂಶೀರ್ನನ್ನು ಬಂಧಿಸಿದ್ದು, ಬಸ್ಸನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಖಾಸಗಿ ಬಸ್ಗಳ ನಿರ್ಲಕ್ಷ್ಯ ಮತ್ತು ಅತೀ ವೇಗದಿಂದ ಯಶ್ರಾಜ್ ಸಾವನ್ನಪ್ಪಿದ್ದಾನೆ. ಪುಟ್ ಬೋರ್ಡ್ನಲ್ಲಿ ಪ್ರಯಾಣಿಕರನ್ನು ತುಂಬಿಸಿ ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ಯಶ್ರಾಜ್ ಪೋಷಕರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಹಾಗೂ ಪೊಲೀಸರಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಮಂಗಳೂರು ಸೌತ್ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 304 ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಮುಗಿಲು ಮುಟ್ಟಿದ್ದ ಮೃತನ ಕುಟುಂಬಸ್ಥರ ಆಕ್ರಂದನ
ಮಗನನ್ನು ಕಳೆದುಕೊಂಡ ದುಃಖದ ನಡುವೆಯೂ ಹೆತ್ತವರು ಅಂಗಾಂಗ ದಾನಕ್ಕೆ ಒಪ್ಪಿದ್ದು, ಅದರಂತೆ ರಾಜ್ಯ ಸರ್ಕಾರದ ಜೀವ ಸಾರ್ಥಕತೆ ತಂಡದವರು ಅಂಗಾಂಗ ಕಸಿ ಮಾಡಿದ್ದಾರೆ. ಕಿಡ್ನಿ, ಲಿವರ್ ಅನ್ನು ಕಸಿ ಮಾಡಲಾಗಿದೆ ಎಂದು ವೈದ್ಯರ ಮೂಲಗಳು ತಿಳಿಸಿವೆ. ಯಶರಾಜ್ ಒಬ್ಬನೇ ಮಗನಾಗಿದ್ದು, ಇನ್ನೊಬ್ಬಳು ತಂಗಿ 5ನೇ ತರಗತಿ ಓದುತ್ತಿದ್ದಾಳೆ. ಯಶರಾಜ್ನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟುವಂತಿದೆ. ಅಂಗಾಂಗ ಕಸಿ ಮಾಡುವ ಸಂದರ್ಭದಲ್ಲಿಯೂ ಸ್ನೇಹಿತರು, ಸಂಬಂಧಿಕರು ಆಸ್ಪತ್ರೆಗೆ ಆಗಮಿಸಿದ್ದರು. ಮಂಗಳೂರಿನಲ್ಲಿ ಖಾಸಗಿ ಬಸ್ಗಳ ಹಾವಳಿ ಹಿಂದಿನಿಂದಲೂ ನಡೆಯುತ್ತಲೇ ಇದೆ. ಅದೇ ರೀತಿ ರಸ್ತೆ ಕೂಡ ಹಾಳಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ.
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ












Click it and Unblock the Notifications