ಮಂಗಳೂರು : ಕುಖ್ಯಾತ ಗ್ಯಾಂಗ್ ನ ಇಬ್ಬರು ರೌಡಿಗಳ ಬಂಧನ
ಮಂಗಳೂರು, ನವೆಂಬರ್ 23 : ಮಂಗಳೂರಿನ ನಟೋರಿಯಸ್ ಗ್ಯಾಂಗ್ ಟಾರ್ಗೇಟ್ ಗ್ರೂಪ್ ನ ಇಬ್ಬರನ್ನು ಮಂಗಳೂರು ರೌಡಿ ನಿಗ್ರಹ ದಳದ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ . ಮಂಗಳೂರು ಪೊಲೀಸರು ನಡೆಸಿದ 2 ಪ್ರತ್ಯೇಕ ಕಾರ್ಯಚರಣೆಯಲ್ಲಿ ಈ ಇಬ್ಬರನ್ನು ಬಂಧಿಸಲಾಗಿದೆ.
ಮಂಗಳೂರು ಹೊರವಲಯದ ಉಳ್ಳಾಲದ ಮೇಲಂಗಡಿ ದರ್ಗಾ ನಿವಾಸಿಯಾದ ಸುಮೋ ಇಮ್ರಾನ್ ಅಲಿಯಾಸ್ ಇಮ್ರಾನ್ ಮತ್ತು ಇಲ್ಯಾಸ್ ಎಂಬವವರನ್ನು ಬಂಧಿಸುವಲ್ಲಿ ಮಂಗಳೂರು ದಕ್ಷಿಣ ರೌಡಿ ನಿಗ್ರಹದ ದಳದ ಪೊಲೀಸರು ಯಶಸ್ವಿಯಾಗಿದ್ದಾರೆ.

ಮಂಗಳೂರು ದಕ್ಷಿಣ ಉಪ ವಿಭಾಗದ ರೌಡಿ ನಿಗ್ರಹ ದಳದ ಮತ್ತು ಮಂಗಳೂರು ದಕ್ಷಿಣ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಿಗೆ , ಇಮ್ರಾನ್ ಮುಂಬಾಯಿಯ ದಾದರ್ ರೈಲ್ವೆ ನಿಲ್ದಾಣದ ಬಳಿಯಲ್ಲಿರುವ ವುಡ್ ಲ್ಯಾಂಡ್ ಗೆಸ್ಟ್ ಹೌಸ್ ಲಾಡ್ಜ್ ನಲ್ಲಿ ವಾಸವಾಗಿರುವ ಬಗ್ಗೆ ದೊರೆತ ಮಾಹಿತಿ ದೊರೆತಿತ್ತು.
ಈ ಹಿನ್ನೆಲೆಯಲ್ಲಿ ಮುಂಬಯಿ ನಗರಕ್ಕೆ ತೆರಳಿದ್ದ ರೌಡಿ ನಿಗ್ರಹದಳದ ಸಿಬ್ಬಂದಿ ಗೆಸ್ಟ್ ಹೌಸ್ ಮೇಲೆ ದಾಳಿ ಮಾಡಿ ಸುರ್ಮೋ ಇಮ್ರಾನ್ ನನ್ನು ಬಂಧಿಸಿದ್ದಾರೆ. ಈತನ ವಿರುದ್ದ ಬಜ್ಪೆ ,ಉಳ್ಳಾಲ ಮತ್ತು ಯಲ್ಲಾಪುರ ಪೋಲಿಸ್ ಠಾಣೆಗಳಲ್ಲಿ ಒಟ್ಟು 3 ವಾರಂಟ್ ಗಳಿದ್ದು ನ್ಯಾಯಲಯಾಕ್ಕೆ ಹಾಜರಾಗದೇ ಇದ್ದು ತಲೆ ಮರೆಸಿಕೊಂಡಿರುವುದಾಗಿದೆ. ಈತನ ವಿರುದ್ದ ನಗರದ ಉಳ್ಳಾಲ, ಬಜ್ಪೆ, ಮತ್ತು ಯಲ್ಲಾಪುರ ಠಾಣೆಗಳಲ್ಲಿ ಕೊಲೆಯತ್ನ,ದರೋಡೆ,ದರೋಡೆಗೆ ಯತ್ನ ಮೊದಲಾದ ಸುಮಾರು 9 ಪ್ರಕರಣಗಳು ಧಾಖಲಾಗಿದೆ.
ಈ ನಡುವೆ ಈ ನಟೋರಿಯಸ್ ಟಾರ್ಗೆಟ್ ಗ್ಯಾಂಗ್ ನ ಇನ್ನೊಬ್ಬ ಸದಸ್ಯ ನಗರದ ಜಪ್ಪು ಕುಡುಪಾಡಿ ಮಸೀದಿ ಬಳಿಯ ಫ್ಲ್ಯಾಟ್ ಒಂದರಲ್ಲಿ ವಾಸವಾಗಿರುವ ಬಗ್ಗೆ ಖಚಿತ ಮಾಹಿತಿ ರೌಡಿ ನಿಗ್ರಹ ದಳದ ಪೊಲೀಸರಿಗೆ ದೊರೆತಿತ್ತು . ಮಾಹಿತಿ ಖಚಿತಪಡಿಸಿಕೊಂಡ ಪೊಲೀಸರು ಫ್ಲ್ಯಾಟ್ ಮೇಲೆ ದಾಳಿ ನಡೆಸಿ ಇಲ್ಯಾಸ್ ಎಂಬುವರನ್ನು ಬಂಧಿಸಿದ್ದಾರೆ.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications