ಮಂಗಳೂರು : ಕುಖ್ಯಾತ ಗ್ಯಾಂಗ್ ನ ಇಬ್ಬರು ರೌಡಿಗಳ ಬಂಧನ
ಮಂಗಳೂರು, ನವೆಂಬರ್ 23 : ಮಂಗಳೂರಿನ ನಟೋರಿಯಸ್ ಗ್ಯಾಂಗ್ ಟಾರ್ಗೇಟ್ ಗ್ರೂಪ್ ನ ಇಬ್ಬರನ್ನು ಮಂಗಳೂರು ರೌಡಿ ನಿಗ್ರಹ ದಳದ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ . ಮಂಗಳೂರು ಪೊಲೀಸರು ನಡೆಸಿದ 2 ಪ್ರತ್ಯೇಕ ಕಾರ್ಯಚರಣೆಯಲ್ಲಿ ಈ ಇಬ್ಬರನ್ನು ಬಂಧಿಸಲಾಗಿದೆ.
ಮಂಗಳೂರು ಹೊರವಲಯದ ಉಳ್ಳಾಲದ ಮೇಲಂಗಡಿ ದರ್ಗಾ ನಿವಾಸಿಯಾದ ಸುಮೋ ಇಮ್ರಾನ್ ಅಲಿಯಾಸ್ ಇಮ್ರಾನ್ ಮತ್ತು ಇಲ್ಯಾಸ್ ಎಂಬವವರನ್ನು ಬಂಧಿಸುವಲ್ಲಿ ಮಂಗಳೂರು ದಕ್ಷಿಣ ರೌಡಿ ನಿಗ್ರಹದ ದಳದ ಪೊಲೀಸರು ಯಶಸ್ವಿಯಾಗಿದ್ದಾರೆ.

ಮಂಗಳೂರು ದಕ್ಷಿಣ ಉಪ ವಿಭಾಗದ ರೌಡಿ ನಿಗ್ರಹ ದಳದ ಮತ್ತು ಮಂಗಳೂರು ದಕ್ಷಿಣ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಿಗೆ , ಇಮ್ರಾನ್ ಮುಂಬಾಯಿಯ ದಾದರ್ ರೈಲ್ವೆ ನಿಲ್ದಾಣದ ಬಳಿಯಲ್ಲಿರುವ ವುಡ್ ಲ್ಯಾಂಡ್ ಗೆಸ್ಟ್ ಹೌಸ್ ಲಾಡ್ಜ್ ನಲ್ಲಿ ವಾಸವಾಗಿರುವ ಬಗ್ಗೆ ದೊರೆತ ಮಾಹಿತಿ ದೊರೆತಿತ್ತು.
ಈ ಹಿನ್ನೆಲೆಯಲ್ಲಿ ಮುಂಬಯಿ ನಗರಕ್ಕೆ ತೆರಳಿದ್ದ ರೌಡಿ ನಿಗ್ರಹದಳದ ಸಿಬ್ಬಂದಿ ಗೆಸ್ಟ್ ಹೌಸ್ ಮೇಲೆ ದಾಳಿ ಮಾಡಿ ಸುರ್ಮೋ ಇಮ್ರಾನ್ ನನ್ನು ಬಂಧಿಸಿದ್ದಾರೆ. ಈತನ ವಿರುದ್ದ ಬಜ್ಪೆ ,ಉಳ್ಳಾಲ ಮತ್ತು ಯಲ್ಲಾಪುರ ಪೋಲಿಸ್ ಠಾಣೆಗಳಲ್ಲಿ ಒಟ್ಟು 3 ವಾರಂಟ್ ಗಳಿದ್ದು ನ್ಯಾಯಲಯಾಕ್ಕೆ ಹಾಜರಾಗದೇ ಇದ್ದು ತಲೆ ಮರೆಸಿಕೊಂಡಿರುವುದಾಗಿದೆ. ಈತನ ವಿರುದ್ದ ನಗರದ ಉಳ್ಳಾಲ, ಬಜ್ಪೆ, ಮತ್ತು ಯಲ್ಲಾಪುರ ಠಾಣೆಗಳಲ್ಲಿ ಕೊಲೆಯತ್ನ,ದರೋಡೆ,ದರೋಡೆಗೆ ಯತ್ನ ಮೊದಲಾದ ಸುಮಾರು 9 ಪ್ರಕರಣಗಳು ಧಾಖಲಾಗಿದೆ.
ಈ ನಡುವೆ ಈ ನಟೋರಿಯಸ್ ಟಾರ್ಗೆಟ್ ಗ್ಯಾಂಗ್ ನ ಇನ್ನೊಬ್ಬ ಸದಸ್ಯ ನಗರದ ಜಪ್ಪು ಕುಡುಪಾಡಿ ಮಸೀದಿ ಬಳಿಯ ಫ್ಲ್ಯಾಟ್ ಒಂದರಲ್ಲಿ ವಾಸವಾಗಿರುವ ಬಗ್ಗೆ ಖಚಿತ ಮಾಹಿತಿ ರೌಡಿ ನಿಗ್ರಹ ದಳದ ಪೊಲೀಸರಿಗೆ ದೊರೆತಿತ್ತು . ಮಾಹಿತಿ ಖಚಿತಪಡಿಸಿಕೊಂಡ ಪೊಲೀಸರು ಫ್ಲ್ಯಾಟ್ ಮೇಲೆ ದಾಳಿ ನಡೆಸಿ ಇಲ್ಯಾಸ್ ಎಂಬುವರನ್ನು ಬಂಧಿಸಿದ್ದಾರೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications