ಮಂಗಳೂರು ಉದ್ಯಮಿಗೆ 50 ಲಕ್ಷ ಹಫ್ತಾಕ್ಕಾಗಿ ಕಲಿ ಯೋಗೀಶನಿಂದ ಬೆದರಿಕೆ ಕರೆ
ಮಂಗಳೂರು, ಮಾರ್ಚ್ 27: ಮಂಗಳೂರಿನಲ್ಲಿ ಮತ್ತೆ ಭೂಗತ ಲೋಕ ಸದ್ದು ಮಾಡಿದೆ. ನಗರದಲ್ಲಿ ಇತ್ತೀಚೆಗೆ ನಡೆದ ಸರಣಿ ಶೂಟೌಟ್ ಪ್ರಕರಣಗಳ ತನಿಖೆಯನ್ನು ಪೊಲೀಸರು ತೀವ್ರ ಗೊಳಿಸಿದ್ದ ಹಿನ್ನೆಲೆಯಲ್ಲಿ ಭೂಗತ ಪಾತಕಿಗಳು ತಮ್ಮ ಚಟುವಟಿಕೆ ಸ್ಥಗಿತಗೊಳಿಸಿದ್ದರು. ಆದರೆ ಈಗ ಮತ್ತೆ ತಮ್ಮ ಚಟುವಟಿಕೆ ಆರಂಭಿಸಿದ್ದಾರೆ.
ಮಂಗಳೂರಿನ ಉದ್ಯಮಿಯೊಬ್ಬರಿಗೆ ಭೂಗತ ಪಾತಕಿಯಿಂದ ಹಫ್ತಾಕ್ಕಾಗಿ ಬೆದರಿಕೆ ಕರೆ ಬಂದಿದೆ. ನಗರದ ಖ್ಯಾತ ಉದ್ಯಮಿ ಡಾ. ಅರುಣ್ ಕುಮಾರ್ ರೈ ಅವರಿಗೆ ಭೂಗತ ಪಾತಕಿ ಕಲಿ ಯೋಗಿಶ್ ನಿಂದ ಬೆದರಿಕೆ ಕರೆ ಬಂದಿದೆ ಎಂದು ಹೇಳಲಾಗಿದೆ.
ಡಾ. ಅರುಣ್ ಕುಮಾರ್ ರೈ, ನಗರದ ಪಂಪ್ವೆಲ್ನಲ್ಲಿರುವ ಭಾರತ್ ಆಗ್ರೋವೆಟ್ ಇಂಡಸ್ಟ್ರೀಸ್ನ ಮಾಲಕರಾಗಿದ್ದು ಭೂಗತ ಪಾತಕಿ ಕಲಿ ಯೋಗೀಶ್ ಎಂದು ಪರಿಚಯಿಸಿಕೊಂಡ ವ್ಯಕ್ತಿ ಕಳೆದ ಮಾರ್ಚ್ 17 ರಿಂದ ಮರ್ಚ್ 23ರವರೆಗೆ ನಾನಾ ಇಂಟರ್ನೆಟ್ ನಂಬರ್ ಗಳಿಂದ ಬೆದರಿಕೆ ಕರೆ ಮಾಡಿದ್ದಾನೆ ಎಂದು ಹೇಳಲಾಗಿದೆ.

ಡಾ. ಅರುಣ್ ಕುಮಾರ್ ರೈ ಅವರಿಗೆ ಜೀವ ಬೆದರಿಕೆ ಹಾಕಿರುವ ಕಲಿ ಯೋಗಿಶ್, 50ಲಕ್ಷ ರೂಪಾಯಿ ಹಫ್ತಾ ನೀಡಬೇಕು ಎಂದು ಬೇಡಿಕೆ ಇಟ್ಟಿದ್ದಾನೆ ಎಂದು ಹೇಳಲಾಗಿದೆ. ಹಣ ನೀಡದಿದ್ದಲ್ಲಿ ತನ್ನ ಪಂಟರ್ ಹುಡುಗರನ್ನು ಕಚೇರಿಗೆ ಕಳುಹಿಸುವುದಾಗಿ ಕಲಿ ಯೋಗಿಶ್ ಬೆದರಿಕೆ ಹಾಕಿದ್ದಾನೆ .
ಈ ಘಟನೆ ಕುರಿತು ನಗರದ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದ್ದು ದೂರವಾಣಿ ಕರೆಗಳ ದಾಖಲೆ ಆಧಾರದ ಮೇಲೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications