ದೀಪಕ್ ರಾವ್ ಸಹೋದರನಿಗೆ ಕೆಐಒಸಿಎಲ್ ನಲ್ಲಿ ಉದ್ಯೋಗ: ಅನಂತ ಕುಮಾರ್ ಹೆಗಡೆ
ಮಂಗಳೂರ, ಜನವರಿ 19: ಮಂಗಳೂರು ಹೊರವಲಯದ ಕಾಟಿಪಳ್ಳದಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ದೀಪಕ್ ರಾವ್ ಮನೆಗೆ ಗುರುವಾರ ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತ ಕುಮಾರ್ ಹೆಗಡೆ ಭೇಟಿ ನೀಡಿದರು.
ದೀಪಕ್ ರಾವ್ ಕುಟುಂಬ ಸದಸ್ಯರ ಜತೆ ಮಾತುಕತೆ ನಡೆಸಿದ ಸಚಿವರು ದೀಪಕ್ ರಾವ್ ತಾಯಿಗೆ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಮಾತು ಬಾರದ ದೀಪಕ್ ಸಹೋದರ ಸತೀಶ್ ಗೆ ಕೆಐಒಸಿಎಲ್ ನಲ್ಲಿ ಕೆಲಸ ಕೊಡಿಸುವ ಭರವಸೆ ನೀಡಿದ ಸಚಿವರು, ಈ ಸಂಬಂಧ ಕೆಐಒಸಿಎಲ್ ಸಂಸ್ಥೆಯ ಮುಖ್ಯಸ್ಥರ ಜತೆ ಈಗಾಗಲೇ ಮಾತುಕತೆ ನಡೆಸಿರುವುದಾಗಿ ತಿಳಿಸಿದರು.
ಇದೇ ಸಂದರ್ಭದಲ್ಲಿ ವೈಯಕ್ತಿಕ ನೆಲೆಯಲ್ಲಿ 25 ಸಾವಿರ ರೂಪಾಯಿ ಚೆಕ್ ನ್ನು ದೀಪಕ್ ರಾವ್ ಕುಟುಂಬಕ್ಕೆ ಸಚಿವರು ನೀಡಿದರು.

ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, "ಮೃತರಾದ ದೀಪಕ್ ರಾವ್ ಅವರನ್ನು ಮರಳಿ ಪಡೆಯಲು ಸಾಧ್ಯವಿಲ್ಲ . ಆದರೆ ಕುಟುಂಬ ನಿರ್ವಹಣೆ ದೃಷ್ಟಿಯಿಂದ ದೀಪಕ್ ಸಹೋದರ ಸತೀಶ್ ಅವರಿಗೆ ಉದ್ಯೋಗದ ವ್ಯವಸ್ಥೆ ಮಾಡಲಾಗಿದೆ," ಎಂದು ತಿಳಿಸಿದ ಅವರು, "ಹಿಂದೂ ಸಮಾಜದ ಜತೆ ನಾನಿದ್ದೇನೆ," ಎಂದು ಹೇಳಿದರು.

ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್, ಬಿಜೆಪಿ ಮುಖಂಡ ಡಾ. ಭರತ್ ಶೆಟ್ಟಿ ಮತ್ತಿತರರು ಈ ಸಂದರ್ಭ ಉಪಸ್ಥಿತರಿದ್ದರು .
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications