ಮಂಗಳೂರಿನ ವಿವಿಧೆಡೆ ರಾಷ್ಟ್ರೀಯ ಏಕತಾ ಓಟ: ಯಾರೆಲ್ಲಾ ಭಾಗವಹಿಸಿದ್ದರು?
ಮಂಗಳೂರು, ಅಕ್ಟೋಬರ್. 31: ಸರ್ದಾರ್ ವಲ್ಲಭಭಾಯ್ ಪಟೇಲ್ ಜಯಂತಿ ಅಂಗವಾಗಿ ನಡೆಯುವ ರಾಷ್ಟ್ರೀಯ ಏಕತಾ ಓಟವನ್ನು ದಕ್ಷಿಣಕನ್ನಡ ಜಿಲ್ಲೆಯ ಎಲ್ಲಾ 8 ವಿಧಾನಸಭಾ ಕ್ಷೇತ್ರಗಳಲ್ಲಿ ಇಂದು ಬುಧವಾರ ಆಯೋಜಿಸಲಾಗಿತ್ತು.
ಮಂಗಳೂರು ಉತ್ತರ, ಮಂಗಳೂರು ದಕ್ಷಿಣ , ಪುತ್ತೂರು, ಬಂಟ್ವಾಳ, ಬೆಳ್ತಂಗಡಿ ಸೇರಿದಂತೆ ಸುಳ್ಯದಲ್ಲಿ ಕೂಡ ಏಕತಾ ಓಟ ನಡೆಯಿತು. ಪುತ್ತೂರಿನಲ್ಲಿ ಆಯೋಜಿಸಲಾಗಿದ್ದ ಏಕತಾ ಓಟ ಪುತ್ತೂರು ಅಂಜನೇಯ ಮಂತ್ರಾಲಯದಿಂದ ದರ್ಬೆ ವೃತ್ತದವರೆಗೆ ಸಾಗಿತು. ಓಟದಲ್ಲಿ ನೂರಾರು ಜನ ಪಾಲ್ಗೊಂಡಿದ್ದರು. ಶಾಸಕ ಸಂಜೀವ ಮಠಂದೂರು ಓಟಕ್ಕೆ ಚಾಲನೆ ನೀಡಿದರು.

ನಗರದ ಕದ್ರಿಯಲ್ಲಿ ಆಯೋಜಿಸಲಾಗಿದ್ದ ಏಕತೆಗಾಗಿ ಓಟದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಭಾಗವಹಿಸಿದ್ದರು.

ಮಂಗಳೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಘಟಕದ ವತಿಯಿಂದ ಸರ್ದಾರ್ ವಲ್ಲಭಭಾಯ್ ಪಟೇಲ್ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ ಏಕತಾ ಓಟವನ್ನು ಮುಖಂಡರಾದ ಟಿ.ಜಿ. ರಾಜಾರಾಂ ಭಟ್ ಉದ್ಘಾಟಿಸಿದರು. ಎರಡೂ ಕಾಲುಗಳಲ್ಲೂ ಬಲವಿಲ್ಲದಿದ್ದರೂ ಎರಡು ಕಿ.ಮೀ. ಏಕತಾ ಓಟದಲ್ಲಿ ನರಿಂಗಾನ ಪಡ್ಪುವಿನ ಪಿ.ಇಬ್ರಾಹಿಂ ಪಾಲ್ಗೊಂಡರು.

ಮಂಗಳೂರು ಉತ್ತರ ಕ್ಷೇತ್ರ ಸುರತ್ಕಲ್ ನಲ್ಲಿ ಕೂಡ ಇಂದು ಏಕತಾ ಓಟ ಆಯೋಜಿಸಲಾಗಿತ್ತು. ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ ಮತ್ತಿತರರು ಓಟದಲ್ಲಿ ಪಾಲ್ಗೊಂಡರು. ಬೆಳ್ತಂಗಡಿ, ಸುಳ್ಯದಲ್ಲೂ ಬಿಜೆಪಿ ವತಿಯಿಂದ ಏಕತಾ ಓಟ ಆಯೋಜಿಸಿದ್ದರು.
-
Iran 10 Demands: ಕದನ ವಿರಾಮಕ್ಕೆ ಇರಾನ್ ವಿಧಿಸಿರುವ 10 ಷರತ್ತುಗಳ ವಿವರ ಇಲ್ಲಿದೆ, ನ್ಯೂಕ್ಲಿಯರ್ ಬೇಡ ಎಂದಿದ್ಯಾಕೆ -
Karnataka Rain: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಈ ಭಾಗಗಳಲ್ಲಿ ಭಾರೀ ಮಳೆ: ಐಎಂಡಿ -
ನಿಮ್ಮ ಸಂಬಳಕ್ಕೆ ಎಷ್ಟು ಬೆಲೆಯ ಮನೆ ಖರೀದಿಸಬಹುದು? Viral ಆಗುತ್ತಿದೆ ಬೆಂಗಳೂರಿನ ಸಿಎ ತಿಳಿಸಿದ 20-30-40 ರೂಲ್ -
Gold Rate April 8: ಯುದ್ಧ ನಿಂತ ಬೆನ್ನಲ್ಲೇ ಚಿನ್ನ - ಬೆಳ್ಳಿ ಬೆಲೆ ಭಾರೀ ಹೆಚ್ಚಳ, ಎಷ್ಟಿದೆ ಇಂದಿನ ಚಿನ್ನದ ಬೆಲೆ -
Bengaluru Road: ಬನ್ನೇರುಘಟ್ಟ ರಸ್ತೆ ಪ್ರಯಾಣಿಕರಿಗೆ ಗುಡ್ನ್ಯೂಸ್: ಸಮಗ್ರ ಅಭಿವೃದ್ಧಿಗೆ ಜಿಬಿಎ ಮಾಸ್ಟರ್ ಪ್ಲಾನ್ -
ಇರಾನ್ ಹೇಳಿಕೆಯಲ್ಲಿ ಗೊಂದಲ ಸೃಷ್ಟಿಸಿದ HE ಪದ: ಇದು ಉದ್ದೇಶಪೂರ್ವಕವೇ? ಮಂಜುನಾಥ ಕೊಳ್ಳೇಗಾಲ ವಿಶ್ಲೇಷಣೆ -
Bengaluru Rent House: ಬೆಂಗಳೂರಲ್ಲಿ 1 BHK ಬಾಡಿಗೆ ಮನೆ ಸ್ಕ್ಯಾಮ್; 30,000 ಕೊಟ್ಟರೂ ಒಳ್ಳೆ ಮನೆ ಸಿಗ್ತಿಲ್ಲ, ವೈರಲ್ ಪೋಸ್ಟ್ -
Iran-US-Israel War: ಪಾಕಿಸ್ತಾನದ ಮಧ್ಯಪ್ರವೇಶದಿಂದಾಗಿ ಇರಾನ್ ಮೇಲೆ ವಿನಾಶಕಾರಿ ಬಾಂಬ್ ದಾಳಿ ಇಲ್ಲ: ಡೊನಾಲ್ಡ್ ಟ್ರಂಪ್ -
IIT Baba Love Story: ಬೆಂಗಳೂರು ಮೂಲದ ಪ್ರತೀಕಾ ಕೈಹಿಡಿದ ಐಐಟಿ ಬಾಬಾ ಅಲಿಯಾಸ್ ಅಭಯ್ ಸಿಂಗ್ -
ಇರಾನ್-ಅಮೆರಿಕ ಯುದ್ಧದಲ್ಲಿ ಶರಣಾಗಿದ್ದು ಪಾಕಿಸ್ತಾನ: ಕೃಷ್ಣಭಟ್ ಬರಹ -
US-Iran ceasefire: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಶೇ. 20ರಷ್ಟು ದಾಖಲೆಯ ಕುಸಿತ -
Election Commission: ಚುನಾವಣೆ ಸಮಯದಲ್ಲೇ ಭಾರತೀಯ ಚುನಾವಣಾ ಆಯೋಗದ ಟ್ವೀಟ್ ಎಡವಟ್ಟು, ಬಿಜೆಪಿ ಪರ ಎಂದ ವಿರೋಧ ಪಕ್ಷಗಳು












Click it and Unblock the Notifications