ರಾಜ್ಯದಲ್ಲಿ ಅಬ್ಬರಿಸಿದ ಮುಂಗಾರು ಪೂರ್ವ ಮಳೆ: ಅಡಿಕೆ ಬೆಳೆಗಾರರಿಗೆ ನಷ್ಟ
ಮಂಗಳೂರು, ಏಪ್ರಿಲ್ 15: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವರುಣ ಆರ್ಭಟಿಸಿದ್ದು, ಪಶ್ಚಿಮ ಘಟ್ಟ ತಪ್ಪಲಿನ ತಾಲ್ಲೂಕುಗಳಲ್ಲಿ ಬಿರುಗಾಳಿ ಅಕ್ಷರಶಃ ಅಟ್ಟಹಾಸ ಮೆರೆದಿದೆ.
ಬಿರುಗಾಳಿ ಸಹಿತ ಮಳೆಗೆ ನೂರಾರು ಅಡಿಕೆ ಮರಗಳು, ತೆಂಗು, ವಿದ್ಯುತ್ ಕಂಬಗಳು ಧರೆಗುರುಳಿವೆ. ಬೆಳ್ತಂಗಡಿ ತಾಲ್ಲೂಕಿನಲ್ಲಿ ಬಿರುಗಾಳಿ ಜೊತೆಗೆ ಎರಡು ಗಂಟೆಗಳ ಕಾಲ ಭಾರೀ ಮಳೆಯಾಗಿದೆ. ಬೆಳ್ತಂಗಡಿ ತಾಲ್ಲೂಕಿನಾದ್ಯಾಂತ ಸುರಿದ ಭಾರೀ ಗಾಳಿ-ಮಳೆಗೆ ನೂರಾರು ಅಡಿಕೆ ಮರಗಳು ನೆಲಕ್ಕುರುಳಿವೆ.
ಬೆಳ್ತಂಗಡಿ ತಾಲೂಕಿನ ಗೇರುಕಟ್ಟೆ, ಓಡಿಲ್ನಾಳ, ಕುವೆಟ್ಟು, ಮೇಲಂತಬೆಟ್ಟು, ವೇಣೂರು, ಬಜಿರೆ, ನಾರಾವಿ ಸೇರಿದಂತೆ ಹಲವು ಕಡೆಗಳಲ್ಲಿ ಕೃಷಿ ಬೆಳೆಗಳಿಗೆ ಹಾನಿಯಾಗಿದೆ. ವೇಣೂರಿನ ಅಂಡಿಜೆ ಎಂಬಲ್ಲಿ ಮನೆಯ ಹಂಚಿನ ಮೇಲೆ ಮರ ಬಿದ್ದು, ಮನೆ ಭಾಗಶಃ ಹಾನಿಯಾಗಿದೆ.

ಗೇರುಕಟ್ಟೆಯ ವಾಣಿಜ್ಯ ಸಂಕೀರ್ಣದ ಹಂಚುಗಳೆಲ್ಲಾ ಬಿರುಗಾಳಿಗೆ ಹಾರಿಹೋಗಿದ್ದು, ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ. ವಿದ್ಯುತ್ ಕಂಬಗಳೂ ತುಂಡಾಗಿ ರಸ್ತೆಗೆ ಬಿದ್ದಿದ್ದು, ಕೆಲವು ಕಡೆಗಳಲ್ಲಿ ವಾಹನ ಸಂಚಾರಕ್ಕೂ ತೊಡಕು ಉಂಟಾಗಿದೆ.

ತಾಲೂಕಿನಲ್ಲಿ 50ಕ್ಕೂ ಹೆಚ್ಚು ವಿದ್ಯುತ್ ಕಂಬಗಳಿಗೆ ಹಾನಿಯಾಗಿದ್ದು, ಹಲವೆಡೆ ಜನ ವಿದ್ಯುತ್ ಬೆಳಕಿಲ್ಲದೆ ರಾತ್ರಿ ಕಳೆಯುವಂತಾಗಿದೆ. ಪ್ರಮುಖವಾಗಿ ಅಡಿಕೆ ಮರಗಳು ಬಿರುಗಾಳಿಗೆ ಮುರಿದುಬಿದ್ದಿದ್ದು, ಅಡಿಕೆ ಬೆಳೆಗಾರ ನಷ್ಟ ಅನುಭವಿಸುವಂತಾಗಿದೆ.

ಸುಳ್ಯ, ಪುತ್ತೂರು, ಬಂಟ್ವಾಳ, ಮೂಡಬಿದರೆ ತಾಲೂಕುಗಳಲ್ಲಿಯೂ ಭಾರೀ ಮಳೆ ಸುರಿದಿದ್ದು, ಮುಂಗಾರು ಪೂರ್ವ ಮಳೆ ಭಾರೀ ನಷ್ಟವನ್ನುಂಟು ಮಾಡಿದೆ. ಮುಂದಿನ ಮೂರುದಿನಗಳ ಕಾಲ ಇದೇ ರೀತಿಯ ಮಳೆ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಮಳೆ ಸುರಿಯುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ಜನ ಎಚ್ಚರಿಕೆಯಿಂದ ಇರಬೇಕಿದೆ.
-
Nimika Ratnakar: ದಾಂಪತ್ಯ ಜೀವನಕ್ಕೆ ಕಾಲಿಟ್ಟ 'ಕ್ರಾಂತಿ' ಬೆಡಗಿ ನಿಮಿಕಾ ರತ್ನಾಕರ್, ಮಂಗಳೂರಿನಲ್ಲಿ ನೆರವೇರಿತು ಮದುವೆ -
Viral: ಕಚೇರಿಗೆ ಬಂದ ಪೋಷಕರು, ಮ್ಯಾನೇಜರ್ ಬಳಿ ಮಗಳ ವರ್ತನೆ ಬಗ್ಗೆ ವಿಚಾರಣೆ: ಶಾಲಾ ದಿನಗಳನ್ನು ನೆನಪಿಸಿದ ವಿಡಿಯೋ -
2025ರ ದ್ವಿತೀಯ PUC ಪರೀಕ್ಷೆಯಲ್ಲಿ ವಿಜ್ಞಾನ, ವಾಣಿಜ್ಯ, ಕಲಾ ವಿಭಾಗದಲ್ಲಿ ಮಿಂಚಿದ ಪ್ರತಿಭೆಗಳು; ಇಲ್ಲಿದೆ ಟಾಪರ್ಗಳ ಪಟ್ಟಿ -
Gold Rate April 9: ಚಿನ್ನ - ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆ: ಬಂಗಾರ ಖರೀದಿದಾರರಿಗೆ ಸಂತೋಷದ ಸುದ್ದಿ -
ರಾಜ್ಯದ ಕಳೆದ 3 ವರ್ಷಗಳ ದ್ವಿತೀಯ PUC ಫಲಿತಾಂಶದ ಹೈಲೈಟ್ಸ್; ಮೇಲುಗೈ ಸಾಧಿಸಿದ ಜಿಲ್ಲೆಗಳು ಯಾವುವು? ಇಲ್ಲಿದೆ ಮಾಹಿತಿ -
ಹೈಟೆಕ್ ಬೆಂಗಳೂರು ಬಿಸಿನೆಸ್ ಕಾರಿಡಾರ್: 65ಮೀ ವಿಸ್ತರಣೆ, ಮೆಟ್ರೋ-ಸೈಕಲ್ ಟ್ರ್ಯಾಕ್ಗಳೂ ಲಭ್ಯ; ವಿನ್ಯಾಸ ವಿವರ -
Horoscope April 8: ಕೆಲವರಿಗೆ ಯಶಸ್ಸು, ಕೆಲವರಿಗೆ ಜಾಗ್ರತೆ ಸೂಚಿಸುವ ದಿನ ಭವಿಷ್ಯ -
Bengaluru Road: ಬನ್ನೇರುಘಟ್ಟ ರಸ್ತೆ ಪ್ರಯಾಣಿಕರಿಗೆ ಗುಡ್ನ್ಯೂಸ್: ಸಮಗ್ರ ಅಭಿವೃದ್ಧಿಗೆ ಜಿಬಿಎ ಮಾಸ್ಟರ್ ಪ್ಲಾನ್ -
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ -
Iran 10 Demands: ಕದನ ವಿರಾಮಕ್ಕೆ ಇರಾನ್ ವಿಧಿಸಿರುವ 10 ಷರತ್ತುಗಳ ವಿವರ ಇಲ್ಲಿದೆ, ನ್ಯೂಕ್ಲಿಯರ್ ಬೇಡ ಎಂದಿದ್ಯಾಕೆ -
ನಿಮ್ಮ ಸಂಬಳಕ್ಕೆ ಎಷ್ಟು ಬೆಲೆಯ ಮನೆ ಖರೀದಿಸಬಹುದು? Viral ಆಗುತ್ತಿದೆ ಬೆಂಗಳೂರಿನ ಸಿಎ ತಿಳಿಸಿದ 20-30-40 ರೂಲ್ -
Bengaluru Rent House: ಬೆಂಗಳೂರಲ್ಲಿ 1 BHK ಬಾಡಿಗೆ ಮನೆ ಸ್ಕ್ಯಾಮ್; 30,000 ಕೊಟ್ಟರೂ ಒಳ್ಳೆ ಮನೆ ಸಿಗ್ತಿಲ್ಲ, ವೈರಲ್ ಪೋಸ್ಟ್












Click it and Unblock the Notifications