ಪುತ್ತೂರಿನ ಮದುವೆ ಕಾರ್ಯಕ್ರಮಕ್ಕೆ ಬಂದ ಯೋಗಿ ಆದಿತ್ಯನಾಥ್!
ಮಂಗಳೂರು, ಜುಲೈ 10: ಆ ಮದುವೆ ಮನೆಯಲ್ಲಿ ಸಡಗರವಿತ್ತು, ಸಂಭ್ರಮವಿತ್ತು. ನೂತನ ವಧುವರರು ಹೊಸ ಜೀವನಕ್ಕೆ ಕಾಲಿಟ್ಟ ಖುಷಿಯಲ್ಲಿದ್ದರು. ಮನೆ ಮಂದಿ, ಕುಟುಂಬಿಕರು ಸಂತೋಷದ ಸಾಗರದಲ್ಲಿ ತೇಲಾಡುತ್ತಿದ್ದರೆ, ಅಲ್ಲಿಗೆ ಯೋಗಿ ಆದಿತ್ಯನಾಥ್ ಧಿಡೀರ್ ಭೇಟಿ ನೀಡಿದರು.
ಹತ್ತಾರು ಜನ ಹಿಂಬಾಲಕರು, ಭಧ್ರತಾ ಸಿಬ್ಬಂದಿ ಕೂಡಾ ಇದ್ದರು. ಎಲ್ಲರೂ ಏನಾಗುತ್ತಿದೆ ಅಂತಾ ನೋಡುವಷ್ಟರಲ್ಲೇ ವೇದಿಕೆ ಮೇಲೇರಿದ ಯೋಗಿ ನೂತನ ವಧುವರರಿಗೆ ಆಶೀರ್ವದಿಸಿದ್ದಾರೆ. ಒಂದು ಕ್ಷಣ ಅವಕ್ಕಾದ ಜನರಿಗೆಲ್ಲಾ ಮತ್ತೆ ಗೊತ್ತಾಗಿದ್ದು, ಇದು ಯೋಗಿ ಆದಿತ್ಯನಾಥ್ ಅಲ್ಲ, ಯೋಗಿ ತರನೇ ಇರುವ ವ್ಯಕ್ತಿ ಅಂತಾ.
ಇಂತಹ ಆಶ್ಚರ್ಯಕರ ದೃಶ್ಯ ಕಂಡು ಬಂದಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ದೊಡ್ಡಡ್ಕ ಎಂಬ ಊರಿನಲ್ಲಿ. ದೊಡ್ಡಡ್ಕದ ರತ್ನಾವತಿ ಮತ್ತು ನಾರಾಯಣ ಎಂಬ ದಂಪತಿಯ ಪುತ್ರ ಲೋಕೇಶ್ ಬಲ್ಯಾಯ ವಿವಾಹ ಕಾರ್ಯಕ್ರಮ ವರನ ಮನೆಯಲ್ಲಿ ನಡೆಯುತ್ತಿತ್ತು.

ಕಾವ್ಯಶ್ರೀ ಎಂಬುವವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಲೋಕೇಶ್ಗೆ ಯೋಗಿಯ ಗೆಟಪ್ನಲ್ಲಿ ಬಂದು ಸರ್ಪ್ರೈಸ್ ಕೊಟ್ಟಿದ್ದು ದೊಡ್ಡಡ್ಕದ ಸುಬ್ರಹ್ಮಣ್ಯ ಬಲ್ಯಾಯ ಎಂಬುವವರು.

ಜುಲೈ 7ರಂದು ಈ ಮದುವೆ ಕಾರ್ಯಕ್ರಮ ನಡೆದಿದ್ದು, ಸಿಮೀತ ಸಂಖ್ಯೆಯಲ್ಲಿ ಜನ ಸೇರಿದ್ದರು. ಈ ವೇಳೆ ಏನಾದರೂ ಒಂದು ವಿಭಿನ್ನವಾಗಿ ಇರಬೇಕು ಅಂತಾ ಯೋಚಿಸಿದ ಸುಬ್ರಹ್ಮಣ್ಯ ಯೋಗಿ ಗೆಟಪ್ನಲ್ಲಿ ಮದುವೆ ಮನೆಗೆ ಪ್ರವೇಶಿಸಿದ್ದಾರೆ. ಸುಬ್ರಹ್ಮಣ್ಯರಿಗೆ ಅಂಗರಕ್ಷಕ ಮತ್ತು ಸಂಗಡಿಗರಾಗಿ ಹಲವರು ಸಾಥ್ ನೀಡಿದರು. ಈ ಎಲ್ಲಾ ದೃಶ್ಯವನ್ನು ಛಾಯಾಗ್ರಾಹಕ ಅರುಣ್ ಪುತ್ತೂರು ಸೆರೆ ಹಿಡಿದಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
Recommended Video
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications