ಮಂಗಳೂರು : ವ್ಯಾಪಾರಿಗಳ ಜಗಳದಲ್ಲಿ ಜನರಿಗೆ ಮೀನಿನ ಲಾಭ
ಮಂಗಳೂರು, ಅಕ್ಟೋಬರ್ 08 : ಉಪ್ಪಿನಂಗಡಿಯ ಆಲಂಕಾರು ಪೇಟೆಯಲ್ಲಿ ಮೀನಿನ ಸುಗ್ಗಿ ಆರಂಭವಾಗಿದೆ. ಇಬ್ಬರು ವ್ಯಾಪಾರಿಗಳ ನಡುವಿನ ಪೈಪೋಟಿಯಿಂದಾಗಿ ಸ್ಥಳೀಯರಿಗೆ ಹೆಚ್ಚು ಉಪಯೋಗವಾಗುತ್ತಿದ್ದು, ಕಡಿಮೆ ಬೆಲೆಗೆ ಮೀನು ತಿನ್ನುವ ಅವಕಾಶ ಸಿಕ್ಕಿದೆ.
ಕಳೆದ ಕೆಲವು ದಿನಗಳಿಂದ ಭಾರೀ ದರ ಏರಿಕೆ ಕಂಡಿದ್ದ ಬಂಗಡೆ ಮೀನು ಬುಧವಾರ ಬೆಳಗ್ಗೆ ಅಲಂಕಾರಿನಲ್ಲಿ 100 ರೂಪಾಯಿಗೆ 4ಕೆಜಿ ದೊರೆಯುತ್ತಿತ್ತು. ಸಂಜೆಯ ವೇಳೆಗೆ ಮಾರುಕಟ್ಟೆಯಲ್ಲಿ 100 ರೂಪಾಯಿಗೆ 5ಕೆಜಿ ಬಂಗಡೆ ಮತ್ತು ಭೂತಾಯಿ ಮೀನು ಮಾರಾವಾಗಿದೆ. [ಮಂಗಳೂರು : 8 ಲಕ್ಷ ರೂ.ಗಳ ಮೀನು ಕಳವು!]

ಮಾರುಕಟ್ಟೆ ಮತ್ತು ರಸ್ತೆ ಬದಿ ವ್ಯಾಪಾರಿಗಳ ನಡುವಿನ ತೀವ್ರ ಪೈಪೋಟಿಯೇ ಮೀನನ ದರ ಇಳಿಕೆಗೆ ಕಾರಣವಾಗಿದೆ. 'ಇಬ್ಬರ ಪೈಪೋಟಿಯಿಂದಾಗಿ ಗ್ರಾಹಕರಿಗೆ ಲಾಭವಾಗುತ್ತಿದೆ. ಕಡಿಮೆ ಬೆಲೆಗೆ ಸಿಕ್ಕಿದ ಮೀನು ತೆಗೆದುಕೊಂಡು ಹೋಗುತ್ತಿದ್ದೇವೆ' ಎಂದು ಸಂತಸ ವ್ಯಕ್ತಪಡಿಸುತ್ತಿದ್ದಾರೆ ಸ್ಥಳೀಯರು. [ಕರಾವಳಿ ತೀರ ಮಂಗಳೂರಿನಲ್ಲಿ ತಿನ್ನಲು ಮೀನು ಸಿಕ್ತಿಲ್ಲ!]
ಪೈಪೋಟಿಗೆ ಕಾರಣವೇನು? : ಆಲಂಕಾರು ಪೇಟೆಯಲ್ಲಿನ ಖಾಸಗಿ ಮೀನು ಮಾರುಕಟ್ಟೆಯಲ್ಲಿ ಕಳೆದ ಕೆಲವು ವರ್ಷಗಳಿಂದ ಉಪ್ಪಿನಂಗಡಿ ಮೂಲದ ವ್ಯಾಪಾರಿಯೊಬ್ಬರು ಮೀನು ಮಾರಾಟ ಮಾಡುತ್ತಿದ್ದರು. ಆದರೆ, ಕಳೆದ ಕೆಲವು ದಿನಗಳ ಹಿಂದೆ ಉಪ್ಪಿನಂಗಡಿ ಮೂಲದ ಮತ್ತೊಬ್ಬ ವ್ಯಾಪಾರಿ ಮಾರುಕಟ್ಟೆ ಸಮೀಪವೇ ಲಾರಿ ನಿಲ್ಲಿಸಿಕೊಂಡು ವ್ಯಾಪಾರ ಆರಂಭಿಸಿದ್ದಾರೆ.
ಮಾರುಕಟ್ಟೆಯಲ್ಲಿನ ಮೀನಿಗಿಂತ ಲಾರಿಯ ಮೀನಿನ ವ್ಯಾಪಾರಿಯ ಕಡಿಮೆ ದರದಲ್ಲಿ ಮಾರಾಟ ಮಾಡುವುದರಿಂದ ಜನರು ಅತ್ತ ಹೋಗಲು ಆರಂಭಿಸಿದರು. ಇದರಿಂದಾಗಿ ಇಬ್ಬರ ನಡುವೆ ಸಣ್ಣ ಜಗಳ ಆರಂಭವಾಗಿತ್ತು. ಆದರೆ, ಲಾರಿಯ ವ್ಯಾಪಾರಿ ಮಾತ್ರ ಮೀನು ಮಾರಾಟ ಮುಂದುವರೆಸಿದ್ದ. [ಮೀನುಪ್ರಿಯರ ಜಿಹ್ವಾ ಚಾಪಲ್ಯ ತಣಿಸಲು ಮತ್ಸ್ಯ ಭವನ]
ಖಾಸಗಿ ಮಾರುಕಟ್ಟೆಯ ಮಾಲೀಕ ಇಬ್ಬರ ಜಗಳ ನೋಡಿ, ಮಾರುಕಟ್ಟೆ ವ್ಯಾಪಾರಿಯನ್ನು ಅಲ್ಲಿಂದ ತೆರವುಗೊಳಿಸಿದ್ದಾರೆ. ಈಗ ವ್ಯಾಪಾರಿಗಳು ರಸ್ತೆಬದಿಯಲ್ಲಿಯೇ ಅಂಗಡಿ ಹಾಕಿಕೊಂಡು ವ್ಯಾಪಾರ ಮಾಡುತ್ತಿದ್ದಾರೆ. ವಿವಾದ ನೋಡಿ ಗ್ರಾಮ ಪಂಚಾಯಿತಿ ವ್ಯಾಪಾರಿಗಳ ಸಭೆ ಕರೆದು ಅನುಮತಿ ಪಡೆಯುವಂತೆ ಸೂಚನೆ ನೀಡಿತು.
ಪಂಚಾಯತಿಯ ನಿಯಮದಂತೆ ಎಲ್ಲಾ ಹಸಿ ಮೀನು ಮಾರಾಟಗಾರರು 2016ರ ಮಾರ್ಚ್ 31ರ ತನಕದ ಪರವಾನಿಗೆಗಾಗಿ 20 ಸಾವಿರ ರೂ. ಪಾವತಿ ಮಾಡಬೇಕಾಗಿತ್ತು. ಆಗ, ಖಾಸಗಿ ಮಾರುಕಟ್ಟೆ ಮಾಲೀಕ ಕೆಲಲಾರಿಯಲ್ಲಿ ಮೀನು ಮಾರುತ್ತಿದ್ದವರಿಗೆ ಮಾರುಕಟ್ಟೆಯಲ್ಲಿ ವ್ಯಾಪಾರಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ.
ಇದರಿಂದ ಕೋಪಗೊಂಡಿರುವ ಹಳೆಯ ಮಾರುಕಟ್ಟೆ ಮೀನು ವ್ಯಾಪಾರಿ ದರ ಕಡಿತ ಮಾಡಿ ರಸ್ತೆಯಲ್ಲಿ ಮಾರಾಟ ಮಾಡುತ್ತಿದ್ದಾರೆ. ಈತನಿಗೆ ಬುದ್ಧಿ ಕಲಿಸಬೇಕೆಂದು ನೂತನ ಮಾರುಕಟ್ಟೆ ವ್ಯಾಪಾರಿಯೂ ದರ ಕಡಿತಮಾಡಿದ್ದಾರೆ. ಇದರಿಂದ ಗ್ರಾಹಕರಿಗೆ ಕಡಿಮೆ ಬೆಲೆಯಲ್ಲಿ ಮೀನು ಸಿಗುತ್ತಿದೆ.
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಏಪ್ರಿಲ್ 11ರ ದರಪಟ್ಟಿ












Click it and Unblock the Notifications