ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊರೊನಾವೈರಸ್ ಮಧ್ಯೆ ಮಾನವೀಯತೆ ಮೆರೆದ ಉಪ್ಪಿನಂಗಡಿ ಪೊಲೀಸರು

|
Google Oneindia Kannada News

ಮಂಗಳೂರು, ಮೇ 30: ಉಡುಪಿ ಮೂಲದ ವ್ಯಕ್ತಿಯೋರ್ವರು ಉಪ್ಪಿನಂಗಡಿಯಲ್ಲಿ ಹೊಟೆಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದರು. ಆ ವ್ಯಕ್ತಿಯು ಲಾಕ್‌ಡೌನ್‌ ಹಿನ್ನೆಲೆಯಲ್ಲಿ ನೆಕ್ಕಿಲಾಡಿ ಎಂಬಲ್ಲಿ ವಾಸವಾಗಿದ್ದನು.

Recommended Video

ಗಾಂಧೀಜಿ ಬಳಿ ಹೋಗಿ ಪ್ರಶ್ನೆ ಕೇಳಿದ ಮಂಗಳೂರಿನ ಯುವಕ..! | Mangalore | Mahatma Gandhi

ಉಡುಪಿ ಮೂಲದ ಹೋಟೆಲ್ ಕೆಲಸಗಾರ ಮೇ 27 ರಂದು ಇವರು ಕುಸಿದು ಬಿದ್ದು ಮೃತಪಟ್ಟಿದ್ದು, ಸದರಿ ವ್ಯಕ್ತಿ ಜ್ವರದಿಂದ ಬಳಲುತ್ತಿದ್ದರು ಎಂದು ವದಂತಿ ಹಬ್ಬಿತ್ತು. ಈ ಹಿನ್ನೆಲೆಯಲ್ಲಿ ಕೊರೊನಾ ವೈರಸ್‌ ಭಯದಿಂದ ಯಾರೂ ನೆರವಿಗೆ ಬರದಿದ್ದರಿಂದ ಶವ ಸಂಸ್ಕಾರ ಮಾಡಲೂ ಆಗದೆ, ಶವವನ್ನು ಊರಿಗೆ ಸಾಗಿಸಲೂ ಆಗದೆ ಮನೆಯವರು ಅಸಹಾಯಕರಾಗಿ ಪೊಲೀಸ್‌ ಠಾಣೆಯ ಬಾಗಿಲಲ್ಲಿ ಕಾಯುವ ಸ್ಥಿತಿ ಎದುರಾಯಿತು.

ಮಂಗಳೂರಿನಲ್ಲಿ ಚಿಕಿತ್ಸೆ ಸಿಗದೆ ಮಗು ಸತ್ತ ಪ್ರಕರಣ; ತನಿಖೆಗೆ ಡಿಸಿ ಆದೇಶಮಂಗಳೂರಿನಲ್ಲಿ ಚಿಕಿತ್ಸೆ ಸಿಗದೆ ಮಗು ಸತ್ತ ಪ್ರಕರಣ; ತನಿಖೆಗೆ ಡಿಸಿ ಆದೇಶ

ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ನೆರವಿಗೆ ಆಗಮಿಸಿದ ಉಪ್ಪಿನಂಗಡಿ ಪೋಲಿಸ್ ಠಾಣಾಧಿಕಾರಿ ಡಿ.ಎನ್‌ ಈರಯ್ಯನವರು ಖಾಸಗಿ ಆ್ಯಂಬುಲೆನ್ಸ್ ಚಾಲಕರೋರ್ವರ ಮನವೊಲಿಸಿ ಆತನಿಗೆ ಪಿಪಿಇ ಉಡುಪನ್ನು ಒದಗಿಸಿದರು.

Uppinangady Police Helps To Shift Dead Body To Govt Hopsital

ನಂತರ ಶವವನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ಸಾಗಿಸುವಲ್ಲಿ ಯಶಸ್ವಿಯಾದರು. ತಮ್ಮ ಬಿಡುವು ರಹಿತ ಕರ್ತವ್ಯದ ಹೊರತಾಗಿಯೂ ಸದಾ ಸಾರ್ವಜನಿಕರ ಸಂಕಷ್ಟಕ್ಕೆ ಸ್ಪಂದಿಸುವ ಉಪ್ಪಿನಂಗಡಿ ಪೊಲೀಸ್‌ ಠಾಣಾಧಿಕಾರಿ ಮತ್ತು ಸಿಬ್ಬಂದಿಗಳು ಸಾರ್ವಜನಿಕ ವಲಯದಲ್ಲಿ ಪ್ರಶಂಸೆಗೆ ಪಾತ್ರರಾಗಿದ್ದಾರೆ.

English summary
Uppinangady Police officer DN Eraiaha Helps to shift dead body to Puttur government hospital.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X