ಕಸಾಯಿಖಾನೆ ವಿವಾದದ ಕುರಿತು ಪ್ರಧಾನಿಗೆ ಪತ್ರ ಬರೆಯಲಿರುವ ಖಾದರ್
ಮಂಗಳೂರು, ಅಕ್ಟೋಬರ್. 16: ಮಂಗಳೂರಿನ ಕುದ್ರೋಳಿ ಕಸಾಯಿಖಾನೆ ಕುರಿತು ವಿವಾದ ಸೃಷ್ಟಿಯಾಗಿರುವುದಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯುಟಿ ಖಾದರ್ ಬೇಸರ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸ್ವಚ್ಛತೆಯ ದೃಷ್ಠಿಯಿಂದ ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯಡಿ ಕುದ್ರೋಳಿ ಕಸಾಯಿಖಾನೆಯನ್ನು ಅಭಿವೃದ್ಧಿಪಡಿಸುವ ಬಗ್ಗೆ ಎದ್ದಿರುವ ವಿವಾದ, ವಿರೋಧ ಹೇಳಿಕೆಗಳು ಬೇಸರ ತಂದಿವೆ.
ಈ ಬಗ್ಗೆ ಪ್ರಧಾನ ಮಂತ್ರಿ ಹಾಗೂ ಕೇಂದ್ರ ನಗರಾಭಿವೃದ್ಧಿ ಸಚಿವರಿಗೆ ಪತ್ರ ಬರೆಯುತ್ತೇನೆ. ನಗರದ ಅಭಿವೃದ್ಧಿ ಹಾಗೂ ಸ್ವಚ್ಛತೆಯ ದೃಷ್ಟಿಯಿಂದ ಕುದ್ರೋಳಿ ಕಸಾಯಿಖಾನೆ ಅಭಿವೃದ್ಧಿಗೆ 15 ಕೋಟಿ ರೂಪಾಯಿಗಳ ಪ್ರಸ್ತಾವನೆಯನ್ನು ಸ್ಮಾರ್ಟ್ ಸಿಟಿ ಸಲಹಾ ಮಂಡಳಿ ಸಭೆಯಲ್ಲಿ ಪ್ರಸ್ತಾಪಪಡಿಸಿದ್ದೆ ಅಷ್ಟೇ.

ಈ ಪ್ರಸ್ತಾವನೆ ಮಂಡಳಿಯ ಸಭೆಯಲ್ಲಿ ಅಂಗೀಕಾರಗೊಂಡು ಇದೀಗ ಕೇಂದ್ರ ನಗರಾಭಿವೃದ್ಧಿ ಸಚಿವಾಲಯಕ್ಕೆ ಅನುಮತಿಗೆ ರವಾನೆಯಾಗಿದೆ. ಆದರೆ ಈ ನಡುವೆ ಕಸಾಯಿಖಾನೆ ಅಭಿವೃದ್ಧಿ ವಿರುದ್ಧ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿ ಇಲ್ಲ ಸಲ್ಲದ ಹೇಳಿಕೆ ನೀಡುತ್ತಿದ್ದಾರೆ. ಅಸಂವಿಧಾನಿಕ ಭಾಷೆ ಬಳಸಿ ನಿಂದಿಸುತ್ತಿರುವುದು ವಿಷಾದನೀಯ ಎಂದು ಬೇಸರ ವ್ಯಕ್ತಪಡಿಸಿದರು.
ಈ ವಿಷಯದಲ್ಲಿ ಆರೋಪ ಪ್ರತ್ಯಾಪರೋಪಗಳ ಮೂಲಕ ಜನರ ಮಧ್ಯೆ ಗೊಂದಲ ಸೃಷ್ಟಿಸುವುದು ಬೇಡ. ಅದಕ್ಕಾಗಿ ತಾನು ಪ್ರಧಾನಿ ಹಾಗೂ ಕೇಂದ್ರ ಸಚಿವರಿಗೆ ಪತ್ರ ಬರೆದು, ಅದರಲ್ಲಿ ವಿಚಾರವನ್ನು ಸಮಗ್ರವಾಗಿ ಪ್ರಸ್ತಾಪಿಸುವುದಾಗಿ ಅವರು ತಿಳಿಸಿದರು. ಇದಕ್ಕೆ ಅನುಮತಿ ನೀಡುವ ಬಗ್ಗೆ ಕೇಂದ್ರ ಸರಕಾರವೇ ನಿರ್ಧರಿಸಲಿ.
ಇದೇ ವೇಳೆ ಗೋಶಾಲೆಗೂ ಅನುದಾನ ನೀಡುವ ವಿಚಾರವನ್ನು ಪ್ರಸ್ತಾಪಿಸುತ್ತೇನೆ. ಪ್ರಧಾನ ಮಂತ್ರಿ ಹಾಗೂ ಕೇಂದ್ರ ಸಚಿವರಿಂದ ಬರುವ ಉತ್ತರ, ಪ್ರತಿಕ್ರಿಯೆ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications