Get Updates
Get notified of breaking news, exclusive insights, and must-see stories!

'ಖಾದರ್ ಪ್ರವೇಶಿಸಿದ ದೇವಾಲಯಕ್ಕೆ ಮತ್ತೊಮ್ಮೆ ಬ್ರಹ್ಮ ಕಲಶ ಆಗಲೇಬೇಕು'

ಮಂಗಳೂರು, ಏಪ್ರಿಲ್ 05 : 'ಸಚಿವ ಯು.ಟಿ. ಖಾದರ್ ಎಂಬ ಕೊಳಕು ಮನುಷ್ಯ, ಗೋಮಾಂಸ ಭಕ್ಷಣೆ ಮಾಡುವಂತಹ ವ್ಯಕ್ತಿಯನ್ನು ಪವಿತ್ರ ದೇವಾಲಯಕ್ಕೆ ಕರೆಸಿ ಪ್ರಸಾದ ನೀಡುತ್ತಿರುವುದು ಎಷ್ಟು ಸರಿ?' ಎಂದು ಆರ್‌ಎಸ್‌ಎಸ್ ಮುಖಂದ ಡಾ.ಕಲ್ಲಡ್ಕ ಪ್ರಭಾಕರ ಭಟ್ ಕಿಡಿಕಾರಿದ್ದಾರೆ.

ಬಂಟ್ವಾಳದ ಕೈರಂಗಳದಲ್ಲಿರುವ ಅಮೃತ ಧಾರಾ ಗೋಶಾಲೆಯಲ್ಲಿ ನಡೆದ ದನಗಳ್ಳತನವನ್ನು ಖಂಡಿಸಿ, ಗೋವು ಕಳ್ಳರನ್ನು ಬಂಧಿಸುವಂತೆ ಒತ್ತಾಯತಿಸಿ ಬುಧವಾರ ಕೈಗೊಳ್ಳಲಾಗಿದ್ದ ಅಮರಣಾಂತ ಉಪವಾಸ ಸತ್ಯಾಗ್ರಹದಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್ ಪಾಲ್ಗೊಂಡಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಡಾ. ಕಲ್ಲಡ್ಕ ಪ್ರಭಾಕರ ಭಟ್, ಸಚಿವ ಖಾದರ್ ವಿರುದ್ಧ ಹೇಳಿಕೆ ನೀಡಿದ್ದರು. 'ಖಾದರ್ ಪ್ರವೇಶಿಸಿದ ದೇವಾಲಯದಲ್ಲಿ ಇನ್ನೊಮ್ಮೆ ಬ್ರಹ್ಮ ಕಲಶಾಭಿಷೇಕ ನಡೆಸಬೇಕು' ಎಂದು ಹೇಳಿದ್ದರು. ಕಲ್ಲಡ್ಕ ಪ್ರಭಾಕರ್ ಭಟ್ ಅವರ ಹೇಳಿಕೆಯ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

UT Khadar entered temples should have another Brahmakalasa says Prabhakar Bhat

ಡಾ. ಪ್ರಭಾಕರ ಭಟ್ ಅವರು, 'ಗೋಭಕ್ಷಣೆ ಮಾಡುವ ಖಾದರ್‌ಗೆ ಇಲ್ಲಿದ್ದ ಭೂತ ನೇಮದ ಬೂಳ್ಯ ಕೊಡ್ತಾರೆ. ಮಂಡೆ ಶುದ್ಧವಿಲ್ಲದ ದೈವ ಕಟ್ಟುವ ವ್ಯಕ್ತಿ ಕೊಳಕು ಖಾದರ್‌ಗೆ ಪ್ರಸಾದ ಕೊಡ್ತಾರೆ. ಯಾವ ದೇವಸ್ಥಾನಕ್ಕೆ ಈ ಖಾದರ್ ಬಂದಿದ್ದಾನೋ ಅದಕ್ಕೆ ಮತ್ತೊಂದು ಬ್ರಹ್ಮಕಲಶ ವಿಧಿವಿಧಾನ ನೆರವೇರಲೇ ಬೇಕು' ಎಂದು ಹೇಳಿಕೆ ನೀಡಿದ್ದರು.

'ದೇವಸ್ಥಾನಕ್ಕೆ ರಸ್ತೆ ಮಾಡಿದ್ದಾರೆ ಎಂದು ಯು.ಟಿ.ಖಾದರ್ ಅವರನ್ನು ದೇಗುಲದೊಳಗೆ ಕರೆದೊಯ್ಯುತ್ತೀರಿ. ನಾಚಿಗೆಯಾಗುವುದಿಲ್ಲವೇ?. ಅವನೇನು ಅವನ ಅಪ್ಪನ ಹಣದಿಂದ ರಸ್ತೆ ಮಾಡಿಸಿಲ್ಲ. ಜನರ ತೆರಿಗೆಯ ಹಣದಿಂದ ರಸ್ತೆ ನಿರ್ಮಾಣ ಮಾಡಿಸಿದ್ದಾನೆ' ಎಂದು ಭಟ್ ಆಕ್ರೋಶ ವ್ಯಕ್ತಪಡಿಸಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+