ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪಿಪಿಇ ಕಿಟ್ ಧರಿಸದೇ ಸೋಂಕಿತನ ಅಂತ್ಯಸಂಸ್ಕಾರದಲ್ಲಿ ಭಾಗಿ; ಯುಟಿ ಖಾದರ್ ಬಗ್ಗೆ ವಿರೋಧ

By ಮಂಗಳೂರು ಪ್ರತಿನಿಧಿ
|
Google Oneindia Kannada News

ಮಂಗಳೂರು, ಜೂನ್ 24 : ಕೊರೊನಾ ವೈರಸ್ ಸೋಂಕಿನಿಂದ ಸಾವನ್ನಪ್ಪಿದ್ದ ವೃದ್ಧರೊಬ್ಬರ ಅಂತ್ಯಸಂಸ್ಕಾರವನ್ನು ಶಾಸಕ ಯು.ಟಿ.ಖಾದರ್ ಪಿಪಿಇ ಕಿಟ್ ಧರಿಸದೇ ನೆರವೇರಿಸಿದ್ದಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ.

ಜೂನ್ 7 ರಂದು ಬೆಂಗಳೂರಿನಿಂದ ಬಂದಿದ್ದ 70 ವರ್ಷದ ವೃದ್ಧ, ಮಂಗಳೂರಿನ ಕೊವಿಡ್ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಕೊರೊನಾ ಸೋಂಕಿಗೆ ಮಂಗಳವಾರ ಬಲಿಯಾಗಿದ್ದರು. ಮಂಗಳೂರಿನ ಬೋಳಾರ ಮಸೀದಿಯ ಸ್ಮಶಾನದಲ್ಲಿ ಅಂತ್ಯಸಂಸ್ಕಾರ ನಡೆದಿದ್ದು, ಆ ಸಂದರ್ಭ ಆರೋಗ್ಯ ಇಲಾಖೆ ಸಿಬ್ಬಂದಿ ಜೊತೆ ಶಾಸಕ ಖಾದರ್ ಕೂಡ ಅಂತ್ಯಸಂಸ್ಕಾರ ಕಾರ್ಯ ಮಾಡಿದ್ದಾರೆ.

ಕೊರೊನಾ ವಿರುದ್ಧ ಹೋರಾಡಿದವರಿಗೇ ಸಂಬಳ ಇಲ್ಲ!; ಯು.ಟಿ.ಖಾದರ್ ಆರೋಪಕೊರೊನಾ ವಿರುದ್ಧ ಹೋರಾಡಿದವರಿಗೇ ಸಂಬಳ ಇಲ್ಲ!; ಯು.ಟಿ.ಖಾದರ್ ಆರೋಪ

ಗುಂಡಿ ತೆಗೆದು ಸ್ವತಃ ಮೃತದೇಹವನ್ನು ಗುಂಡಿಯಲ್ಲಿಟ್ಟು ಮಣ್ಣು ಮುಚ್ಚಿದ್ದಾರೆ. ಆದರೆ ಈ ಸಮಯದಲ್ಲಿ ಅವರು ಪಿಪಿಇ ಕಿಟ್ ಧರಿಸದೇ ಅಂತ್ಯ ಸಂಸ್ಕಾರ ಕಾರ್ಯ ನಡೆಸಿರುವುದಕ್ಕೆ ವಿರೋಧ ವ್ಯಕ್ತವಾಗಿದೆ.

UT Khader Didnt Wear PPE Kit And Involved In Funeral Of Corona Infected Person

ಒಬ್ಬ ಜನಪ್ರತಿನಿಧಿಯಾಗಿ ಹೀಗೆ ಪಿಪಿಇ ಕಿಟ್ ಧರಿಸದೇ ಅಂತ್ಯಸಂಸ್ಕಾರ ನೆರವೇರಿಸದ್ದಕ್ಕೆ ವಿರೋಧ ವ್ಯಕ್ತವಾಗಿದೆ. ಖಾದರ್ ಕೊರೊನಾ ವೈರಸ್ ಬಗ್ಗೆ ನಿರ್ಲಕ್ಷ್ಯ ತೋರಿದ್ದಾರೆ ಎಂದು ಆರೋಪಿಸಲಾಗಿದೆ.

English summary
UT Khader did not wear PPE kit for the funeral of a person who died by coronavirus infection became controversy
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X