ಪಿಪಿಇ ಕಿಟ್ ಧರಿಸದೇ ಸೋಂಕಿತನ ಅಂತ್ಯಸಂಸ್ಕಾರದಲ್ಲಿ ಭಾಗಿ; ಯುಟಿ ಖಾದರ್ ಬಗ್ಗೆ ವಿರೋಧ
ಮಂಗಳೂರು, ಜೂನ್ 24 : ಕೊರೊನಾ ವೈರಸ್ ಸೋಂಕಿನಿಂದ ಸಾವನ್ನಪ್ಪಿದ್ದ ವೃದ್ಧರೊಬ್ಬರ ಅಂತ್ಯಸಂಸ್ಕಾರವನ್ನು ಶಾಸಕ ಯು.ಟಿ.ಖಾದರ್ ಪಿಪಿಇ ಕಿಟ್ ಧರಿಸದೇ ನೆರವೇರಿಸಿದ್ದಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ.
ಜೂನ್ 7 ರಂದು ಬೆಂಗಳೂರಿನಿಂದ ಬಂದಿದ್ದ 70 ವರ್ಷದ ವೃದ್ಧ, ಮಂಗಳೂರಿನ ಕೊವಿಡ್ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಕೊರೊನಾ ಸೋಂಕಿಗೆ ಮಂಗಳವಾರ ಬಲಿಯಾಗಿದ್ದರು. ಮಂಗಳೂರಿನ ಬೋಳಾರ ಮಸೀದಿಯ ಸ್ಮಶಾನದಲ್ಲಿ ಅಂತ್ಯಸಂಸ್ಕಾರ ನಡೆದಿದ್ದು, ಆ ಸಂದರ್ಭ ಆರೋಗ್ಯ ಇಲಾಖೆ ಸಿಬ್ಬಂದಿ ಜೊತೆ ಶಾಸಕ ಖಾದರ್ ಕೂಡ ಅಂತ್ಯಸಂಸ್ಕಾರ ಕಾರ್ಯ ಮಾಡಿದ್ದಾರೆ.
ಕೊರೊನಾ ವಿರುದ್ಧ ಹೋರಾಡಿದವರಿಗೇ ಸಂಬಳ ಇಲ್ಲ!; ಯು.ಟಿ.ಖಾದರ್ ಆರೋಪ
ಗುಂಡಿ ತೆಗೆದು ಸ್ವತಃ ಮೃತದೇಹವನ್ನು ಗುಂಡಿಯಲ್ಲಿಟ್ಟು ಮಣ್ಣು ಮುಚ್ಚಿದ್ದಾರೆ. ಆದರೆ ಈ ಸಮಯದಲ್ಲಿ ಅವರು ಪಿಪಿಇ ಕಿಟ್ ಧರಿಸದೇ ಅಂತ್ಯ ಸಂಸ್ಕಾರ ಕಾರ್ಯ ನಡೆಸಿರುವುದಕ್ಕೆ ವಿರೋಧ ವ್ಯಕ್ತವಾಗಿದೆ.
ಒಬ್ಬ ಜನಪ್ರತಿನಿಧಿಯಾಗಿ ಹೀಗೆ ಪಿಪಿಇ ಕಿಟ್ ಧರಿಸದೇ ಅಂತ್ಯಸಂಸ್ಕಾರ ನೆರವೇರಿಸದ್ದಕ್ಕೆ ವಿರೋಧ ವ್ಯಕ್ತವಾಗಿದೆ. ಖಾದರ್ ಕೊರೊನಾ ವೈರಸ್ ಬಗ್ಗೆ ನಿರ್ಲಕ್ಷ್ಯ ತೋರಿದ್ದಾರೆ ಎಂದು ಆರೋಪಿಸಲಾಗಿದೆ.