ನಾಗಾರಾಧನೆಗೆ ಭೂಮಿ ಬಿಟ್ಟುಕೊಟ್ಟ ಯುಟಿ ಖಾದರ್ ಕುಟುಂಬ
ಮಂಗಳೂರು, ಆಗಸ್ಟ್ 5: ಇಂದು ಶ್ರಾವಣ ಮಾಸದ ಮೊದಲ ಹಬ್ಬವಾಗಿ ನಾಗರಪಂಚಮಿಯನ್ನು ನಾಡಿನೆಲ್ಲೆಡೆ ಆಚರಿಸಲಾಗುತ್ತಿದೆ. ತುಳುನಾಡಿನಲ್ಲಿ ನಾಗಗಳಿಗೆ ವಿಶೇಷ ಮಹತ್ವವಿದೆ. ಇಂದು ಇಲ್ಲಿನ ಪ್ರತೀ ಕುಟುಂಬದವರೂ ನಾಗನಿಗೆ ವಿಶೇಷ ಪೂಜೆ ನೆರವೇರಿಸುತ್ತಾರೆ. ಆದರೆ ವಿಟ್ಲದ ಕುಟುಂಬವೊಂದಕ್ಕೆ, ತಮ್ಮ ನಾಗದ ಸಾನಿಧ್ಯ ಅನ್ಯಧರ್ಮೀಯರೊಬ್ಬರ ಜಾಗದಲ್ಲಿ ಸೇರ್ಪಡೆಯಾಗಿದ್ದು ನಾಗಾರಾಧನೆಗೆ ತೊಡಕಾಗಿತ್ತು. ಇದೀಗ ಆ ಅನ್ಯಧರ್ಮೀಯರೇ ಭೂಮಿಯನ್ನು ಈ ಕುಟುಂಬಕ್ಕೆ ಉಚಿತವಾಗಿ ನೀಡಿದ್ದಾರೆ. ಅವರು ಬೇರಾರೂ ಅಲ್ಲ, ಮಾಜಿ ಸಚಿವ ಯು.ಟಿ.ಖಾದರ್.
ಇದು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲದ ಪುಣಚ ಸಮೀಪದ ಪರಿಯಾಲ್ತಡ್ಕ ಎನ್ನುವ ಪ್ರದೇಶ. ಇಲ್ಲಿನ ದಳವಾಯಿ ಕುಟುಂಬದ ಮನೆತನಕ್ಕೆ ಸೇರಿದ ಈ ಪ್ರದೇಶ ಭೂಮಸೂದೆ ಕಾನೂನಿನ್ವಯ ಬೇರೆ ಬೇರೆ ವ್ಯಕ್ತಿಗಳಿಗೆ ಹಂಚಲ್ಪಟ್ಟಿತು. ಈ ನಡುವೆ ದಳವಾಯಿ ಕುಟುಂಬಸ್ಥರು ಆರಾಧಿಸಿಕೊಂಡು ಬರುತ್ತಿದ್ದ ನಾಗನ ಸಾನಿಧ್ಯವೂ ಅನ್ಯಧರ್ಮೀಯರೊಬ್ಬರ ಪಾಲಾಯಿತು.
ಇದರಿಂದಾಗಿ ದಳವಾಯಿ ಕುಟುಂಬ ಬೇರೊಂದು ಕಡೆಯಲ್ಲಿ ನಾಗನ ಆರಾಧನೆಯನ್ನು ಮಾಡಿಕೊಂಡು ಬರುತ್ತಿತ್ತು. ದಳವಾಯಿ ಕುಟುಂಬದಲ್ಲಿ ಕೆಲವು ವಿಘ್ನಗಳು ಕಂಡು ಬಂದ ಹಿನ್ನೆಲೆಯಲ್ಲಿ ಕುಟುಂಬ ಸದಸ್ಯರು ಅಷ್ಟಮಂಗಲ ಪ್ರಶ್ನೆಯ ಮೊರೆ ಹೋಗಿದ್ದರು. ಪ್ರಶ್ನೆಯಲ್ಲಿ ದಳವಾಯಿ ಕುಟುಂಬ ಆರಾಧಿಸಿಕೊಂಡು ಬರುತ್ತಿದ್ದ ನಾಗ ಸಾನಿಧ್ಯ ಪೂಜೆಯಿಲ್ಲದೆ ಅನಾಥವಾಗಿದ್ದು, ಅದನ್ನು ಪುನರುಜ್ಜೀವನಗೊಳಿಸಿದರೆ ಸಂಕಷ್ಟ ಪರಿಹಾರವಾಗುತ್ತದೆ ಎನ್ನುವ ಮಾತು ಕೇಳಿಬಂದಿತ್ತು.

ಆದರೆ ಆ ಭೂಮಿ ಮಾಜಿ ಸಚಿವ ಯು.ಟಿ.ಖಾದರ್ ಅವರ ತಂದೆ ಯು ಟಿ ಫರೀದ್ ಅವರದ್ದಾಗಿತ್ತು. ವಿಧಿಯಿಲ್ಲದೆ ದಳವಾಯಿ ಕುಟುಂಬ ಯು ಟಿ ಖಾದರ್ ಅವರಲ್ಲಿ ಈ ಬಗ್ಗೆ ತಿಳಿಸಿದಾಗ ಆ ಜಾಗವನ್ನು ಅವರು ಉಚಿತವಾಗಿ ನೀಡಿ ನಾಗಾರಾಧನೆಗೆ ಅನುವು ಮಾಡಿಕೊಟ್ಟಿದ್ದಾರೆ.
ಹಿಂದೂ ಧರ್ಮದ ಎಲ್ಲಾ ಆಚರಣೆಗಳಲ್ಲಿ ಬಹುತೇಕ ಭಾಗಿಯಾಗುವ ಖಾದರ್ ಅವರಿಗೆ ನಾಗಾರಾಧನೆಯ ಮಹತ್ವ ತಿಳಿದ ಕಾರಣಕ್ಕಾಗಿಯೇ ಭೂಮಿಯನ್ನು ನೀಡಿದ್ದರು. ಇದೀಗ ಈ ಜಾಗದಲ್ಲಿ ದಳವಾಯಿ ಕುಟುಂಬ ಅತ್ಯಂತ ಸಡಗರ ಸಂಭ್ರಮದಲ್ಲಿ ನಾಗಾರಾಧನೆಯನ್ನು ಮಾಡುತ್ತಿದೆ.
-
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ












Click it and Unblock the Notifications