ಮೈತ್ರಿ ಸರ್ಕಾರಕ್ಕೆ ಯಾವುದೇ ತೊಂದರೆ ಇಲ್ಲ: ಯುಟಿ ಖಾದರ್
ಮಂಗಳೂರು, ಸೆಪ್ಟೆಂಬರ್.23: ಮೈತ್ರಿ ಸರ್ಕಾರಕ್ಕೆ ಯಾವುದೇ ತೊಂದರೆ ಇಲ್ಲ. ರಾಜ್ಯ ಸರ್ಕಾರ ಸುಭದ್ರವಾಗಿದೆ. ರಾಜ್ಯ ಸರಕಾರದ ಜನಪ್ರಿಯ ಯೋಜನೆಗಳಿಂದ ಕಂಗೆಟ್ಟಿರುವ ಬಿಜೆಪಿ ರಾಜ್ಯದ ಜನರ ದಿಕ್ಕು ತಪ್ಪಿಸುತ್ತಿದೆ ಎಂದು ಸಚಿವ ಯುಟಿ ಖಾದರ್ ಹೇಳಿದರು.
ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸಲಹೆ ಸೂಚನೆ ಕೊಡಬೇಕಾದ ಬಿಜೆಪಿ ನಾಯಕರು ಅಧಿಕಾರ ದಾಹದಲ್ಲಿದ್ದಾರೆ. ಅವರ ರಾಜಕೀಯ ಸಂಸ್ಕೃತ ಈಗ ಅನಾವರಣ ಗೊಂಡಿದೆ. ಬಿಜೆಪಿ ರಚಿಸಿರುವ ಷಡ್ಯಂತ್ರದಲ್ಲಿ ಯಶಸ್ವಿಯಾಗೋದಿಲ್ಲ.
ಹೈದರಾಬಾದ್ ರೆಸಾರ್ಟ್ ನಲ್ಲಿ ಶಾಸಕರು ಕೂರುವ ಅಗತ್ಯ ಇಲ್ಲ. ರಾಜೀನಾಮೆ ಕೊಡೋಕೆ ರಾಜಭವನಕ್ಕೆ ಬರಲೇ ಬೇಕು. ಎಲ್ಲರು ನಮ್ಮೊಂದಿಗೆ ಇದ್ದಾರೆ. ಬಿಜೆಪಿಗರು ಸುಮ್ಮನೆ ಹಗಲು ಗನಸು ಕಾಣುತ್ತಿದ್ದಾರೆ ಎಂದು ಖಾದರ್ ವ್ಯಂಗ್ಯವಾಡಿದ್ದಾರೆ.

ಭಿನ್ನಮತೀಯರ ಕಾಂಗ್ರೆಸ್ ಶಾಸಕರ ಗುಂಪೊಂದು ಮುಂಬೈಗೆ ನಿನ್ನೆ ಶನಿವಾರ (ಸೆ.23) ತೆರಳಿದ್ದು, ಪಕ್ಷದ ನಾಯಕರಲ್ಲಿ ಇನ್ನೊಂದು ಸುತ್ತಿನ ಆತಂಕ ಸೃಷ್ಟಿಸಿತ್ತು. ಮುಂಬೈನ ಜುಹುವಿನಲ್ಲಿರುವ ರೆಸಾರ್ಟ್ ವೊಂದಕ್ಕೆ ಕಾಂಗ್ರೆಸ್ ನ ಕೆಲವು ಅತೃಪ್ತ ಶಾಸಕರು ಹೋಗಿದ್ದಾರೆ ಎಂಬ ಮಾಹಿತಿ ಕೆಲವು ಮೂಲಗಳಿಂದ ಲಭಿಸಿತ್ತು.
ಇವರು ಆಪರೇಷನ್ ಕಮಲದ ದಾಳಕ್ಕೆ ಸಿಕ್ಕಿಹಾಕಿಕೊಂಡಿದ್ದಾರೆ ಎಂಬ ಮಾತುಗಳು ಸಹ ಕೇಳಿಬರುತ್ತಿತ್ತು. ಈ ಹಿನ್ನೆಲೆಯಲ್ಲಿ ಖಾದರ್ ಬಿಜೆಪಿ ವಿರುದ್ಧ ಇಂದು ವಾಗ್ದಾಳಿ ನಡೆಸಿದರು.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications