ಬಜೆಟ್ ನಲ್ಲಿ ಕರಾವಳಿಯನ್ನು ನಿರ್ಲಕ್ಷಿಸಿಲ್ಲ: ಯು.ಟಿ. ಖಾದರ್
ಮಂಗಳೂರು, ಜುಲೈ 06: ನೂತನ ಮೈತ್ರಿ ಸರ್ಕಾರದ ಚೊಚ್ಚಲ ಬಜೆಟ್ಟನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನಿನ್ನೆ ಗುರುವಾರ ಮಂಡಿಸಿದರು. ಅದರೆ ಈ ಬಜೆಟ್ ನಲ್ಲಿ ಕರಾವಳಿ ಭಾಗಕ್ಕೆ ಯಾವುದೇ ಹೊಸ ಯೋಜನೆಗಳನ್ನು ಘೋಷಿಸದೇ ಸಂಪೂರ್ಣ ನಿರ್ಲಕ್ಷಿಸಲಾಗಿದೆ ಎನ್ನುವ ಆಕ್ರೋಶ ಕರಾವಳಿ ಭಾಗದಲ್ಲಿ ವ್ಯಕ್ತವಾಗುತ್ತಿದೆ.
ಈ ಹಿನ್ನೆಲೆಯಲ್ಲಿ ಕರಾವಳಿ ಭಾಗದ ಶಾಸಕರು ಒಂದೆಡೆ ಉಗ್ರ ಹೋರಾಟಕ್ಕೆ ಸಜ್ಜಾಗುತ್ತಿದ್ದರೆ, ಇನ್ನೊಂದೆಡೆ ಕರಾವಳಿ ನಿರ್ಲಕ್ಷಿತ ಬಜೆಟ್ ಸಮರ್ಥಿಸಿಕೊಂಡಿದ್ದಾರೆ. ಮಾಧ್ಯಮ ಪ್ರತಿನಿಧಿಗಳಿಗೆ ಬಜೆಟ್ ಬಗ್ಗೆ ಪ್ರತಿಕ್ರಿಯಿಸಿರುವ ನಗರಾಭಿವೃದ್ಧಿ ಮತ್ತು ವಸತಿ ಸಚಿವ ಯು.ಟಿ ಖಾದರ್, ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಇಂದು ಮಂಡಿಸಿರುವ ಬಜೆಟ್ ನಲ್ಲಿ ನಿಕಟಪೂರ್ವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕಳೆದ ಫೆಬ್ರವರಿಯಲ್ಲಿ ಮಂಡಿಸಿರುವ ಬಜೆಟ್ ನಲ್ಲಿ ನೀಡಿರುವ ಎಲ್ಲಾ ಯೋಜನೆಗಳು ಮುಂದುವರಿಯಲಿವೆ.
ಇಂದು ಹೆಚ್ಚುವರಿಯಾಗಿ ಬಜೆಟ್ ನಲ್ಲಿ ಯೋಜನೆಗಳನ್ನು ಘೋಷಿಸಲಾಗಿದೆ ಎಂದು ತಿಳಿಸಿದ್ದಾರೆ.

ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ರಾಜ್ಯದ ಆರ್ಥಿಕ ಶಿಸ್ತು ಕಾಪಾಡಿಕೊಂಡು, ರೈತರ ಸಾಲಮನ್ನಾದಂತಹ ದಿಟ್ಟ ಕಾರ್ಯಕ್ರಮ ಜಾರಿಗೆ ತಂದಿದ್ದಾರೆ. ರೈತರ 2 ಲಕ್ಷ ರೂಪಾಯಿ ವರೆಗಿನ ಸಾಲಮನ್ನಾ ಐತಿಹಾಸಿಕವಾಗಿದೆ.
ಗರ್ಭಿಣಿ ಮಹಿಳೆಯರಿಗೆ ಮಾಸಿಕ ಧನ ರೂ 1000/- ನೆರವು ನೀಡುವ ಮುಖ್ಯಮಂತ್ರಿ ಮಾತೃಶ್ರೀ ಯೋಜನೆ, ಹಿರಿಯರಿಗೆ ಸಂಧ್ಯಾ ಸುರಕ್ಷಾ ಮಾಸಾಶನವನ್ನು 600 ರಿಂದ 1000 ರೂಪಾಯಿಗೆ ಏರಿಕೆ, ವಿಕಲಚೇತನರಿಗೆ ಅರ್ಜಿ ಸಲ್ಲಿಸಿದ ತಕ್ಷಣವೇ ಮನೆ ನಿರ್ಮಾಣ, ಬಡವರಿಗೆ ಕಿಡ್ನಿ, ಲಿವರ್, ಹೃದಯ ಮತ್ತಿತರ ಅಂಗಾಂಗ ಕಸಿ ಚಿಕಿತ್ಸೆಗಳಿಗೆ 30 ಕೋಟಿ ರೂಪಾಯಿ ಅನುದಾನ ಮತ್ತಿತರ ಸಾಮಾಜಿಕ ಕಾರ್ಯಕ್ರಮಗಳು ದುರ್ಬಲವರ್ಗದ ಹೇಳಿಗೆಗೆ ಪೂರಕವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.
ಮೊಬೈಲ್ ಬಿಡಿ ಭಾಗ ತಯಾರಿಕಾ ಘಟಕಗಳ ಸ್ಥಾಪನೆ ನಿರುದ್ಯೋಗಿಗಳಿಗೆ ಆಶಾಕಿರಣವಾಗಿದೆ. ಸರ್ಕಾರಿ ಶಾಲಾ ಕಟ್ಟಡಗಳ ದುರಸ್ಥಿಗೆ ರೂ. 150 ಕೋಟಿ ಅನುದಾನ, ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಬಹುಮಹಡಿ ವಾಹನ ಸಂಕೀರ್ಣ ಮತ್ತಿತರ ಜನೋಪಯೋಗಿ ಯೋಜನೆಗಳು ನಾಡಿನ ಅಭಿವೃದ್ಧಿಗೆ ಪೂರಕವಾಗಿದೆ ಎಂದು ಖಾದರ್ ತಿಳಿಸಿದ್ದಾರೆ.
ಈ ಹಿಂದಿನ ಸರ್ಕಾರ ಅಂದರೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಬಜೆಟ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೂಲಭೂತ ಸೌಲಭ್ಯಗಳಿಗೆ ಒತ್ತು ನೀಡಲಾಗಿತ್ತು. ಕರಾವಳಿಯ ಪ್ರವಾಸಿ ಸ್ಥಳಗಳಲ್ಲಿ ಬೋಟ್ ಹೌಸ್, ತೇಲುವ ಉಪಹಾರ ಗೃಹ, ಸುಮಾರು 85 ಕೋಟಿ ರೂ. ವೆಚ್ಚದಲ್ಲಿ ಅತ್ಯುನ್ನತ ಭದ್ರತಾ ವ್ಯವಸ್ಥೆಯ ಕಾರಾಗೃಹ.
ಪಶ್ಚಿಮ ವಾಹಿನಿ ಯೋಜನೆಯಲ್ಲಿ ನೇತ್ರಾವತಿ ನದಿಯಲ್ಲಿ ಕುಡಿಯುವ ನೀರು ಹಾಗೂ ನೀರಾವರಿ ಸೌಲಭ್ಯ ಕಲ್ಪಿಸಲು ಮಂಗಳೂರು ತಾಲೂಕಿನ ಹರೇಕಳ ಮತ್ತು ಅಡ್ಯಾರು ಮಧ್ಯೆ ಸುಮಾರು ರೂ. 174 ಕೋಟಿ ವೆಚ್ಚದಲ್ಲಿ ಕಿಂಡಿ ಅಣೆಕಟ್ಟು ನಿರ್ಮಾಣ ಘೋಷಿಸಲಾಗಿತ್ತು. ಈ ಯೋಜನೆಗಳು ಯಥಾರೂಪದಲ್ಲಿಯೇ ಮುಂದುವರಿಯಲಿದೆ ಎಂದು ಸಚಿವರು ಈ ಬಜೆಟ್ ಸಮರ್ಥಿಸಿಕೊಂಡರು.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications