ದಕ್ಷಿಣ ಕನ್ನಡದಲ್ಲಿ ಕಿಡಿ ಹೊತ್ತಿಸಿದ ಎಸ್‌ಡಿಪಿಐ: ಆ.17ರಂದು ಸಾವರ್ಕರ್ ರಥಯಾತ್ರೆ

ಮಂಗಳೂರು, ಆಗಸ್ಟ್ 16: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕಬಕದಲ್ಲಿ ಸ್ವಾತಂತ್ರ್ಯ ರಥಯಾತ್ರೆಯನ್ನು ಎಸ್‌ಡಿಪಿಐ ಕಾರ್ಯಕರ್ತರು ತಡೆದ ವಿಚಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿವಾದದ ಕಿಡಿ ಹೊತ್ತಿಸಿದೆ. ಸ್ವಾತಂತ್ರ್ಯ ರಥ ಯಾತ್ರೆಯಲ್ಲಿದ್ದ ಸಾವರ್ಕರ್ ಭಾವಚಿತ್ರವನ್ನು ಹರಿಯಲು ಯತ್ನಿಸಿದ ಎಸ್‌ಡಿಪಿಐ ವಿರುದ್ಧ ಹಿಂದೂ ಸಂಘಟನೆಗಳು ತೊಡೆ ತಟ್ಟಿದ್ದು, ಕಬಕ ಜಂಕ್ಷನ್‌ನಲ್ಲಿ ಹಿಂದೂ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದಾರೆ.

ಪುತ್ತೂರು ತಾಲೂಕಿನ ಕಬಕ ಜಂಕ್ಷನ್‌ನಲ್ಲಿ ಹಿಂದೂಪರ ಸಂಘಟನೆಗಳ ನೂರಾರು ಕಾರ್ಯಕರ್ತರು ಸೇರಿದ್ದು, ಸಾವರ್ಕರ್ ಫೋಟೋ ಹಿಡಿದು, ಎಸ್‌ಡಿಪಿಐ ವಿರುದ್ಧ ಘೋಷಣೆ ಕೂಗಿದ್ದಾರೆ. ರಾಜ್ಯ ಸರ್ಕಾರ ಕೂಡಲೇ ಎಸ್‌ಡಿಪಿಐಯನ್ನು ಬ್ಯಾನ್ ಮಾಡಬೇಕೆಂದು ಒತ್ತಾಯಿಸಿದ್ದಾರೆ. ಅಲ್ಲದೇ ಚುನಾವಣೆ ಪ್ರಕ್ರಿಯೆಯಿಂದಲೇ ಎಸ್‌ಡಿಪಿಐ ಪಕ್ಷವನ್ನು ತೆಗೆದುಹಾಕಲು ಚುನಾವಣಾ ಆಯೋಗವನ್ನು ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಆಗ್ರಹಿಸಿದ್ದಾರೆ.

ಎಸ್‌ಡಿಪಿಐ ಕಾರ್ಯಕರ್ತರ ವಿರುದ್ಧ ಪ್ರತಿಭಟನೆ

ಎಸ್‌ಡಿಪಿಐ ಕಾರ್ಯಕರ್ತರ ವಿರುದ್ಧ ಪ್ರತಿಭಟನೆ

ಅಲ್ಲದೇ ಬಂಧಿತ ಎಸ್‌ಡಿಪಿಐ ಕಾರ್ಯಕರ್ತರ ವಿರುದ್ಧ ಜಾಮೀನು ರಹಿತ ದೇಶದ್ರೋಹದ ಪ್ರಕರಣವನ್ನು ದಾಖಲಿಸಬೇಕೆಂದು ಹಿಂದೂಪರ ಕಾರ್ಯಕರ್ತರು ಒತ್ತಾಯ ಮಾಡಿ ಪ್ರತಿಭಟಿಸಿದ್ದಾರೆ.

ಸ್ವಾತಂತ್ರ್ಯ ರಥದಲ್ಲಿದ್ದ ಸ್ವಾತಂತ್ರ್ಯ ಹೋರಾಟಗಾರರ ಚಿತ್ರದ ಬ್ಯಾನರ್‌ನಲ್ಲಿದ್ದ ವೀರ್ ಸಾವರ್ಕರ್ ಫೋಟೋವನ್ನು ಹರಿದು, ಅಲ್ಲಿ ಟಿಪ್ಪು ಸುಲ್ತಾನ್ ಭಾವಚಿತ್ರ ಅಳವಡಿಸಲು ಯತ್ನಿಸಿದ ಎಸ್‌ಡಿಪಿಐ ಕಾರ್ಯಕರ್ತರಿಗೆ ಸೆಡ್ಡು ಹೊಡೆಯಲು ತೀರ್ಮಾನಿಸಿರುವ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು, ಇದೇ ಆಗಸ್ಟ್ 17ರಂದು ಬೃಹತ್ ವೀರ್ ಸಾವರ್ಕರ್ ರಥಯಾತ್ರೆ ನಡೆಸಲು ತೀರ್ಮಾನಿಸಿದೆ. ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳದ ನೇತೃತ್ವದಲ್ಲಿ ಸಾವರ್ಕರ್ ರಥಯಾತ್ರೆ ನಡೆಯಲಿದ್ದು, ಸಾವಿರಾರು ಸಂಖ್ಯೆಯಲ್ಲಿ ಜನ ಸೇರುವ ನಿರೀಕ್ಷೆಯಿದೆ.

ಪುತ್ತೂರಿನಲ್ಲಿ ಪೊಲೀಸ್ ಬಂದೋಬಸ್ತ್

ಪುತ್ತೂರಿನಲ್ಲಿ ಪೊಲೀಸ್ ಬಂದೋಬಸ್ತ್

ಪುತ್ತೂರಿನ ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದೇವರಗದ್ದೆಯಿಂದ ಕಬಕದ ತನಕ ಸುಮಾರು 8 ಕಿ.ಮೀ. ದೂರ ಸಾವರ್ಕರ್ ರಥಯಾತ್ರೆ ನಡೆಯಲಿದ್ದು, ಹಿಂದೂ ಸಂಘಟನೆಗಳ ನಾಯಕರು ಈ ರಥಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಬಗ್ಗೆ ಕಬಕದಲ್ಲಿ ಮಾತನಾಡಿರುವ ವಿಶ್ವ ಹಿಂದೂ ಪರಿಷತ್ ಜಿಲ್ಲಾ ಸಂಚಾಲಕ ಶರಣ್ ಪಂಪ್‌ವೆಲ್, ಕಬಕದ ತನಕ ಸಾವರ್ಕರ್ ರಥ ಯಾತ್ರೆ ನಡೆದೇ ನಡೆಯುತ್ತದೆ. ಎಸ್‌ಡಿಪಿಐನವರಿಗೆ ತಾಕತ್ತು ಇದ್ದರೆ ರಥಯಾತ್ರೆ ತಡೆಯಿರಿ ಅಂತಾ ಸವಾಲೆಸಿದಿದ್ದಾರೆ.

ಈ ಹಿನ್ನಲೆಯಲ್ಲಿ ಪುತ್ತೂರಿನಲ್ಲಿ ಪೊಲೀಸ್ ಬಂದೋಬಸ್ತ್ ಹೆಚ್ಚಳ ಮಾಡಲಾಗಿದ್ದು, ಕೆಎಸ್ಆರ್‌ಪಿ ಪಡೆಗಳನ್ನು ಸ್ಥಳದಲ್ಲಿ ನಿಯೋಜನೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನೆವಾನೆ ಪುತ್ತೂರಿನಲ್ಲೇ ಬೀಡು ಬಿಟ್ಟಿದ್ದಾರೆ. ಭದ್ರತೆಗೆ ಇನ್ನೂ ಹೆಚ್ಚಿನ ಪೊಲೀಸರನ್ನು ನಿಯೋಜಿಸುವ ಸಾಧ್ಯತೆಗಳಿವೆ.

ಸಾವರ್ಕರ್ ಫೋಟೋ ತೆಗೆಯುವಂತೆ ಬೆದರಿಕೆ

ಸಾವರ್ಕರ್ ಫೋಟೋ ತೆಗೆಯುವಂತೆ ಬೆದರಿಕೆ

ಆಗಸ್ಟ್ 15 ರಂದು ಕಬಕ ಗ್ರಾಮ ಪಂಚಾಯತ್ ವತಿಯಿಂದ ಮಾಡಲಾಗಿರುವ ಸ್ವಾತಂತ್ರ್ಯ ರಥದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಬ್ಯಾನರ್‌ನಲ್ಲಿ ವೀರ ಸಾವರ್ಕರ್ ಫೋಟೋವನ್ನೂ ಹಾಕಲಾಗಿತ್ತು. ರಥಯಾತ್ರೆಗೆ ಚಾಲನೆ ಕೊಡುವ ವೇಳೆಯಲ್ಲಿ ಸ್ಥಳಕ್ಕೆ ಬಂದ ಎಸ್‌ಡಿಪಿಐ ಕಾರ್ಯಕರ್ತರು ರಥಯಾತ್ರೆಯನ್ನು ತಡೆದು ಸಾವರ್ಕರ್ ಫೋಟೋ ತೆಗೆಯುವಂತೆ ಬೆದರಿಕೆ ಹಾಕಿದ್ದಾರೆ. ಈ ವೇಳೆ ಕೆಲ ಕಾರ್ಯಕರ್ತರು ಭಾರತಮಾತೆ ಮತ್ತು ಸಾವರ್ಕರ್ ಫೋಟೋವನ್ನು ಹರಿಯಲು ಯತ್ನಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಪುತ್ತೂರು ನಗರ ಠಾಣೆಯಲ್ಲಿ ದೂರು ನೀಡಿದ ಕಬಕ ಗ್ರಾಮ ಪಂಚಾಯತ್ ಪಿಡಿಒ, ಅಡ್ಡಿಪಡಿಸಿದ ಕಾರ್ಯಕರ್ತರ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸರಿಗೆ ಮನವಿ ಮಾಡಿದ್ದಾರೆ.

ಮೂವರನ್ನು ಬಂಧಿಸಿದ ಪೊಲೀಸರು

ಮೂವರನ್ನು ಬಂಧಿಸಿದ ಪೊಲೀಸರು

ತಕ್ಷಣ ಕಾರ್ಯಪೃವತ್ತರಾದ ಪುತ್ತೂರು ಠಾಣಾ ಪೊಲೀಸರು ಏಳು ಮಂದಿ ಕಾರ್ಯಕರ್ತರನ್ನು ಗುರುತಿಸಿದ್ದಾರೆ. ಅಜೀಜ್, ನೌಷಾದ್, ಶಮೀರ್, ಹ್ಯಾರೀಸ್, ಅದ್ದು, ತೌಸೀಫ್, ಶಾಫಿ ಮತ್ತು ಇತರರು ಸ್ವಾತಂತ್ರ್ಯ ರಥಕ್ಕೆ ಅಡ್ಡಿ ಮಾಡಲು ಯತ್ನಿಸಿರುವುದು ಬೆಳಕಿಗೆ ಬಂದಿದ್ದು, ಈ ಪೈಕಿ ಅಜೀಜ್, ಶಮೀರ್ ಹಾಗೂ ಅಬ್ದುಲ್ ರೆಹಮಾನ್ ಎಂಬುವವರನ್ನು ಪೊಲೀಸರು ಬಂಧನ ಮಾಡಿದ್ದಾರೆ. ಉಳಿದ ನಾಲ್ವರು ಪರಾರಿಯಾಗಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+