ರಾಷ್ಟ್ರೀಯ ಮಲ್ಲಕಂಬ ಚಾಂಪಿಯನ್ ಶಿಪ್: ಆಳ್ವಾಸ್ ಗೆ ಚಿನ್ನ
ಮಂಗಳೂರು, ಫೆಬ್ರವರಿ. 28 : 29ನೇ ರಾಷ್ಟ್ರೀಯ ಮಲ್ಲಕಂಬ ಚಾಂಪಿಯನ್ ಶಿಪ್ನ 18 ವಯೋಮಿತಿ ವೈಯಕ್ತಿಕ ವಿಭಾಗದಲ್ಲಿ ಮೂಡಬಿದ್ರೆಯ ಆಳ್ವಾಸ್ ನ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿ ವೀರಭದ್ರ ಎಂ.ಚಿನ್ನದ ಪದಕ ಜಯಿಸಿದ್ದಾರೆ. ಇದು ಕರ್ನಾಟಕದ ಮಲ್ಲಕಂಬ ಇತಿಹಾಸದಲ್ಲೇ ಗೆದ್ದ ಪ್ರಪ್ರಥಮ ಚಿನ್ನದ ಪದಕ ಇದಾಗಿದೆ.
ಮಧ್ಯಪ್ರದೇಶದ ಉಜ್ಜಯಿನಿಯ ಮಾದವ್ ಸೇವಾ ನ್ಯಾಸ್ ನಲ್ಲಿ ಫೆಬ್ರವರಿ 18ರಿಂದ 20ರವರೆಗೆ ನಡೆದ ಈ ಚಾಂಪಿಯನ್ ಶಿಪ್ ನ 14 ಹಾಗೂ 18ರ ವಯೋಮಿತಿ ಬಾಲಕರ ವಿಭಾಗ, ಬಾಲಕಿಯರ 12 ಮತ್ತು 16 ವಯೋಮಿತಿ ವಿಭಾಗದಲ್ಲಿ ಕರ್ನಾಟಕ ಎರಡನೇ ರನ್ನರ್ ಅಪ್ ಪ್ರಶಸ್ತಿಯನ್ನು ಗೆದ್ದುಕೊಂಡಿದೆ. [ಅಥ್ಲೆಟಿಕ್ಸ್ ನಲ್ಲಿ ಆಳ್ವಾಸ್ ವಿದ್ಯಾರ್ಥಿಗಳ ಐತಿಹಾಸಿಕ ಸಾಧನೆ]

ಆಳ್ವಾಸ್ ನ ಅನನ್ಯಾ 12 ರ ವಯೋಮಿತಿಯ ವೈಯಕ್ತಿಕ ವಿಭಾಗದ 5 ನೇ ಸ್ಥಾನವನ್ನು ಗೆದ್ದುಕೊಂಡಿದ್ದಾಳೆ. ಈ ಚಾಂಪಿಯನ್ ಶಿಪ್ ನಲ್ಲಿ ಭಾಗವಹಿಸಿದ ಕರ್ನಾಟಕ ತಂಡದ 32 ಮಂದಿ ಕ್ರೀಡಾಪಟುಗಳಲ್ಲಿ 18 ಮಂದಿ ವಿದ್ಯಾರ್ಥಿಗಳು ಆಳ್ವಾಸ್ ನವರು ಎನ್ನುವುದು ಗಮನಾರ್ಹ.
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಲ್ಲಿ ಪ್ರಾಥಮಿಕ ವಿಭಾಗದಿಂದ ಪದವಿಯವರೆಗೆ 60 ಮಂದಿ ವಿದ್ಯಾರ್ಥಿಗಳನ್ನು ಮಲ್ಲಕಂಬಕ್ಕಾಗಿ ದತ್ತು ಪಡೆದು ಅವರಿಗೆ ಸಂಪೂರ್ಣ ಉಚಿತ ಶಿಕ್ಷಣ ನೀಡಲಾಗುತ್ತಿದೆ.
ಆಳ್ವಾಸ್ ಹಾಗೂ ಕರ್ನಾಟಕ ತಂಡದ ಮಲ್ಲಕಂಬ ಸ್ಪರ್ಧಿಗಳ ಸಾಧನೆಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಹರ್ಷ ವ್ಯಕ್ತಪಡಿಸಿದ್ದಾರೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications